ಹೆದ್ದಾರಿ ಯೋಜನೆಗಳಲ್ಲಿ ಸಮನ್ವಯ ಸಾಧಿಸಿ: ಗಡ್ಕರಿ


Team Udayavani, Sep 8, 2022, 9:24 PM IST

ಹೆದ್ದಾರಿ ಯೋಜನೆಗಳಲ್ಲಿ ಸಮನ್ವಯ ಸಾಧಿಸಿ: ಗಡ್ಕರಿ

ಬೆಂಗಳೂರು: ವಿವಿಧ ಹೆದ್ದಾರಿ ಯೋಜನೆಗಳಿಗೆ ಸಂಬಂಧಿಸಿದಂತೆ ಇಲಾಖೆಗಳ ನಡುವೆ ಸಮನ್ವಯ, ಸಂವಹನ, ಸಹಕಾರ ಅತ್ಯಗತ್ಯವಾಗಿದೆ. ಅನಗತ್ಯ ವೆಚ್ಚ, ಶ್ರಮ ತಪ್ಪುತ್ತದೆ. ಸಮಯವೂ ಉಳಿತಾಯ ಆಗುತ್ತದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಹೇಳಿದ್ದಾರೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಹಯೋಗದಲ್ಲಿ ಹಮ್ಮಿಕೊಂಡ “ಮಂಥನ್‌’ ಕಾರ್ಯಕ್ರಮದಲ್ಲಿ ಗುರುವಾರ ಮಾತನಾಡಿದ ಅವರು, ಕರ್ನಾಟಕ ಅತಿಹೆಚ್ಚು ಎಥೆನಾಲ್‌ ಉತ್ಪಾದಿಸುವ ರಾಜ್ಯವಾಗಿದೆ. ಡೀಸೆಲ್‌ ಮತ್ತಿತರ ಮಾಲಿನ್ಯ ಉಂಟುಮಾಡುವ ಇಂಧನಕ್ಕೆ ಪರ್ಯಾಯವಾಗಿ ಇದನ್ನು ಬಳಸಿಕೊಂಡು ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆ ರೂಪಿಸಲು ವಿಪುಲ ಅವಕಾಶಗಳಿವೆ. ಈ ದಿಸೆಯಲ್ಲಿ ಪ್ರಯತ್ನಗಳು ಆಗಬೇಕು ಎಂದರು.

“ರಸ್ತೆಗಳ ವಿಸ್ತರಣೆ ಅಥವಾ ಅಭಿವೃದ್ಧಿಗಾಗಿ ಮರಗಳ ಹನನ ತಪ್ಪಿಸಲು ಟ್ರೀ ಬ್ಯಾಂಕ್‌ ಸ್ಥಾಪಿಸುವಂತೆ ಸಲಹೆ ಮಾಡಲಾಗಿದೆ. ಇದರಡಿ ಮರಗಳ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಲಾಗುವುದು. ರಸ್ತೆಗಳುದ್ದಕ್ಕೂ ಹೆಚ್ಚು ಹಸಿರು ವಲಯ ನಿರ್ಮಿಸುವ ಅವಶ್ಯಕತೆ ಇದೆ. ಇದರಿಂದ ವಾಹನಗಳು ಉಗುಳುವ ಇಂಗಾಲವನ್ನು ಮರಗಳು ತೆಗೆದುಕೊಳ್ಳುತ್ತವೆ. ಆ ಮೂಲಕ ವಾಯುಮಾಲಿನ್ಯ ಪ್ರಮಾಣ ತಗ್ಗಿಸಬಹುದು’ ಎಂದು ಅಭಿಪ್ರಾಯಪಟ್ಟರು.

ಕೇಂದ್ರ ಹೆದ್ದಾರಿ ಮತ್ತು ರಸ್ತೆ ಸಾರಿಗೆ ಹಾಗೂ ನಾಗರಿಕ ವಿಮಾನಯಾನ ಖಾತೆ ರಾಜ್ಯ ಸಚಿವ ಜನರಲ್‌ (ನಿವೃತ್ತ) ವಿ.ಕೆ. ಸಿಂಗ್‌ ಮಾತನಾಡಿ, ರಾಜ್ಯಗಳ ಸಾರಿಗೆ ಸಂಸ್ಥೆಗಳು ಸಾಧ್ಯವಾದಷ್ಟು ಡೀಸೆಲ್‌ ಆಧಾರಿತ ವಾಹನಗಳಿಂದ ಪರಿಸರ ಸ್ನೇಹಿಯಾದ ಎಲೆಕ್ಟ್ರಿಕ್‌ ವಾಹನಗಳತ್ತ ಮುಖಮಾಡಬೇಕು ಎಂದು ಹೇಳಿದರು.

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಕಾರ್ಯದರ್ಶಿ ಗಿರಿಧರ್‌ ಅರಮನೆ ಮಾತನಾಡಿ, 2047ರ ವೇಳೆಗೆ ರಸ್ತೆ ಮೂಲಸೌಕರ್ಯಗಳ ಅಭಿವೃದ್ಧಿಯಲ್ಲಿ ಸ್ವಾವಲಂಬನೆ ಸಾಧಿಸುವುದು ಇಲಾಖೆ ಗುರಿಯಾಗಿದೆ. ಈ ನಿಟ್ಟಿನಲ್ಲಿ ಎರಡು ದಿನಗಳ ಮಂಥನ ಸಮ್ಮೇಳನದಲ್ಲಿ ಚರ್ಚೆಗಳು ನಡೆಯಲಿವೆ ಎಂದರು.

ಸಚಿವರಾದ ಸಿ.ಸಿ. ಪಾಟೀಲ್‌, ಬಿ. ಶ್ರೀರಾಮುಲು, ಸಂಸದರಾದ ಪಿ.ಸಿ. ಮೋಹನ್‌, ತೇಜಸ್ವಿಸೂರ್ಯ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮುಖ್ಯಸ್ಥೆ ಅಲ್ಕಾ ಉಪಾಧ್ಯಾಯ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

1-ckm-rsrt-close

Tourists ಗಮನಕ್ಕೆ: ಈ 2 ದಿನಗಳ ಕಾಲ ಚಿಕ್ಕಮಗಳೂರಿನ‌ ಎಲ್ಲ ಹೋಂ ಸ್ಟೇ, ರೆಸಾರ್ಟ್‌ ಬಂದ್!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

11-

Hunsur: ಯುಪಿಎಸ್‌ಸಿ ಪರೀಕ್ಷೆಯಲ್ಲಿ ಹುಣಸೂರಿನ ಲೇಖನ್‌ಗೆ 77ನೇ ರ‍್ಯಾಂಕ್

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

Election ಗೆದ್ದ ನಂತರ ಜನರಿಂದ ದೂರವಾಗದೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು

Election ಗೆದ್ದ ಬಳಿಕ ಕ್ಷೇತ್ರವನ್ನು ಅಭಿವೃದ್ಧಿ ಮಾಡುವತ್ತ ಸಾಗಬೇಕು; ಬಿ.ವೈ.ರಾಘವೇಂದ್ರ

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

8-shirva

Shirva: ವಾಕಿಂಗ್‌ ವೇಳೆ ಕುಸಿದು ಬಿದ್ದು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.