ಕೊರ್ಗಿ : ಮಾರಣಾಂತಿಕವಾಗಿ ಹಲ್ಲೆ ನಡೆಸಿ ಮಹಿಳೆಯ ಚಿನ್ನ ಎಗರಿಸಿದ ಕಳ್ಳರು
Team Udayavani, Aug 5, 2022, 6:45 PM IST
ತೆಕ್ಕಟ್ಟೆ: ಕುಂದಾಪುರ ತಾಲೂಕಿನ ಕೊರ್ಗಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಡಿನಬೆಟ್ಟು ಸಮೀಪದ ದಬ್ಬೆಕಟ್ಟೆ ಪ್ರಮುಖ ರಸ್ತೆಯ ಸಮೀಪದಲ್ಲಿ ಶಾಲಾ ವಾಹನದಲ್ಲಿ ಮಕ್ಕಳ ಬರುವಿಕೆಗಾಗಿ ಕಾಯುತ್ತಿದ್ದ ಮಹಿಳೆಯ ತಲೆಗೆ ಕಬ್ಬಿಣದ ರಾಡ್ನಿಂದ ಹಲ್ಲೆ ನಡೆಸಿ ಚಿನ್ನಾಭರಣಗಳನ್ನು ಎಗರಿಸಿ ಪರಾರಿಯಾದ ಘಟನೆ ಶುಕ್ರವಾರ ನಡೆದಿದೆ.
ರಸ್ತೆಯ ಸಮೀಪದಲ್ಲಿ ಶಾಲಾ ವಾಹನದಲ್ಲಿ ಮಕ್ಕಳ ಬರುವಿಕೆಗಾಗಿ ಕಾಯುತ್ತಿದ್ದ ವೇಳೆ ಅಪರಿಚಿತರು ಬೈಕ್ನಲ್ಲಿ ಬಂದು ಮಾರಣಾಂತಿಕವಾಗಿ ಹಲ್ಲೆ ನಡೆಸಿ, ಈ ಕೃತ್ಯ ಎಸೆಗಿದ್ದಾರೆ ಎಂದು ಹೇಳಲಾಗಿದ್ದು, ಪರಿಣಾಮ ಮಹಿಳೆಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗಿದೆ.
ಇದನ್ನೂ ಓದಿ: ಕೋಳಿ ಸಾರು ಸವಿಯಲು ಬಂದ ಸ್ನೇಹಿತರು ಬಡಿಗೆಯಲ್ಲಿ ಹೊಡೆದಾಡಿಕೊಂಡರು!
ಕೂಡಲೇ ಮಣಿಪಾಲ ಆಸ್ಪತ್ರೆ ದಾಖಲಿಸಲಾಗಿದೆ. ಕಂಡ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…