ಮಕ್ಕಳಿಗೆ ಕೊರೊನಾ ಲಸಿಕೆ ಪ್ರಯೋಗ: ಆಶಾದಾಯಕ ಬೆಳವಣಿಗೆ


Team Udayavani, May 22, 2021, 6:55 AM IST

ಮಕ್ಕಳಿಗೆ ಕೊರೊನಾ ಲಸಿಕೆ ಪ್ರಯೋಗ: ಆಶಾದಾಯಕ ಬೆಳವಣಿಗೆ

ದೇಶದಲ್ಲಿ ಸದ್ಯ ವ್ಯಾಪಿಸಿರುವ ಕೊರೊನಾ ಎರಡನೇ ಅಲೆಯು ಯುವ ಸಮುದಾಯ ಮತ್ತು ಮಕ್ಕಳನ್ನು ಗುರಿಯಾಗಿಸಿಕೊಂಡಿರುವುದು ಈಗಾಗಲೇ ಅಂಕಿಅಂಶಗಳಿಂದ ಸಾಬೀತಾಗಿದೆ. ಕಳೆದ ವರ್ಷ ಕೊರೊನಾ ಕಾಣಿಸಿಕೊಂಡ ವೇಳೆ ಇದು 60 ವರ್ಷ ಮೇಲ್ಪಟ್ಟವರು ಮತ್ತು ವಿವಿಧ ರೋಗಗಳಿಂದ ಬಳಲುತಿ­¤­ರುವವರನ್ನು ಹೆಚ್ಚಾಗಿ ಬಾಧಿಸಿತ್ತು. ಆದರೆ ಈ ಬಾರಿ ಯುವ ಸಮುದಾಯ ಮತ್ತು ಮಧ್ಯ ವಯಸ್ಕರಲ್ಲಿಯೇ ಹೆಚ್ಚು ಪ್ರಕರಣಗಳು ದಾಖಲಾಗುತ್ತಿದ್ದು ಅಧಿಕ ಸಂಖ್ಯೆಯಲ್ಲಿ ಮಕ್ಕಳಿಗೂ ಸೋಂಕು ತಗಲುತ್ತಿದೆ. ಪ್ರಥಮ ಅಲೆ ನಿಯಂತ್ರಣಕ್ಕೆ ಬಂದ ತತ್‌ಕ್ಷಣ ಯುವ ಸಮುದಾಯ ತನ್ನ ಹಿಂದಿನ ಜೀವನಶೈಲಿಗೆ ಮರಳಿದುದು ಮತ್ತು ಕೊರೊನಾ ನಿರೋಧಕ ಲಸಿಕೆಯನ್ನು ಸರಕಾರ ಆದ್ಯತೆಯ ಮೇಲೆ ಹಿರಿಯ ನಾಗರಿಕರಿಗೆ ನೀಡಿದ್ದರಿಂದಾಗಿ ಈ ಬಾರಿ ಯುವ ಸಮುದಾಯ­ವನ್ನು ಕೊರೊನಾ ಸೋಂಕು ಬಾಧಿಸುತ್ತಿದೆ ಎಂದು ವೈದ್ಯರು ಮತ್ತು ವಿಜ್ಞಾನಿಗಳು ಅಭಿಪ್ರಾಯ­ಪಟ್ಟಿದ್ದಾರೆ. ಅಷ್ಟು ಮಾತ್ರವಲ್ಲದೆ ಕೆಲವೇ ತಿಂಗಳುಗಳಲ್ಲಿ ದೇಶಕ್ಕೆ ಕೊರೊನಾ ಮೂರನೇ ಅಲೆಯೂ ಕಾಡಲಿದ್ದು ಈ ವೇಳೆ ಹದಿಹರೆಯದವರು ಮತ್ತು ಮಕ್ಕಳು ಸೋಂಕಿಗೊಳಗಾಗುವ ಸಾಧ್ಯತೆಗಳು ಅಧಿಕ ಎಂಬ ಎಚ್ಚರಿಕೆಯನ್ನೂ ನೀಡಿದ್ದಾರೆ.

ಅಂಕಿಅಂಶಗಳ ಪ್ರಕಾರ ಎರಡನೇ ಅಲೆಯಲ್ಲಿ ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹದಿಹರೆಯದವರು ಮತ್ತು ಮಕ್ಕಳಿಗೆ ಸೋಂಕು ತಗಲಿರುವುದು ಆತಂಕಕಾರಿ ವಿಚಾರವಾಗಿದೆ. 2 ತಿಂಗಳ ಅವಧಿಯಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆಯಲ್ಲಿ 0-9 ವರ್ಷದೊಳಗಿನ ಮಕ್ಕಳ ಸಂಖ್ಯೆ 39,846ಕ್ಕೆ ಏರಿಕೆಯಾಗಿದ್ದರೆ 10-19 ವರ್ಷದೊಳಗಿನವರ ಸಂಖ್ಯೆ 1,05,044ಕ್ಕೆ ಹೆಚ್ಚಳವಾಗಿದೆ. ಅಂದರೆ ಕ್ರಮವಾಗಿ ಶೇ. 143 ಮತ್ತು ಶೇ. 160ರಷ್ಟು ಹೆಚ್ಚಳ ದಾಖಲಾಗಿದೆ. ಮುಂದಿನ ದಿನಗಳಲ್ಲಿ ಈ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ.

ಈ ಎಲ್ಲ ಬೆಳವಣಿಗೆಗಳ ನಡುವೆ 18 ವರ್ಷಕ್ಕಿಂತ ಕೆಳ ಹರೆಯದವರಿಗೆ ಲಸಿಕೆ ಸಂಶೋಧನೆ ಕಾರ್ಯ ಮತ್ತಷ್ಟು ಚುರುಕು ಪಡೆದುಕೊಂಡಿದೆ. ಝೈಡಸ್‌ ಕ್ಯಾಡಿಲಾ ಕಂಪೆನಿ ಅಭಿವೃದ್ಧಿಪಡಿಸುತ್ತಿರುವ ಝೈಕೋವ್‌-ಡಿ ಮೂರು ಹಂತಗಳ ವೈದ್ಯಕೀಯ ಪ್ರಯೋಗ ಪ್ರಕ್ರಿಯೆ ಭರದಿಂದ ಸಾಗಿದೆ. ಮಕ್ಕಳಿಗಾಗಿ ಸಂಶೋಧಿಸಲಾಗುತ್ತಿರುವ ಈ ಲಸಿಕೆಯು ಮೂರು ಡೋಸ್‌ಗಳನ್ನು ಹೊಂದಿರಲಿದೆ. ಈಗಾಗಲೇ ಪ್ರಾಯೋಗಿಕವಾಗಿ ಆಯ್ದ ಮಕ್ಕಳಿಗೆ ಮೊದಲ ಡೋಸ್‌ ನೀಡಲಾಗಿದ್ದು ಈವರೆಗೆ ಯಾವುದೇ ಅಡ್ಡಪರಿಣಾಮ ಕಂಡುಬಂದಿಲ್ಲ. ಇದೇ ವೇಳೆ ಕೊವ್ಯಾಕ್ಸಿನ್‌ ಲಸಿಕೆಯನ್ನು ಮಕ್ಕಳಿಗೆ ನೀಡುವ ಸಂಬಂಧ ಪ್ರಯೋಗಗಳು ನಡೆಯುತ್ತಿವೆ. ಈ ಎರಡೂ ಪ್ರಯೋಗಗಳೂ ಯಶಸ್ವಿಯಾದಲ್ಲಿ ಕೆಲವೇ ತಿಂಗಳುಗಳಲ್ಲಿ ಮಕ್ಕಳಿಗೂ ಕೊರೊನಾ ನಿರೋಧಕ ಲಸಿಕೆ ಲಭಿಸಲಿದೆ. ಇನ್ನು 18 ವರ್ಷ ಮೇಲ್ಪಟ್ಟ ಮುಂಚೂಣಿ ಕಾರ್ಯಕರ್ತರು ಮತ್ತು ಆದ್ಯತಾ ಗುಂಪುಗಳನ್ನು ಗುರುತಿಸಿ ಮೇ 22ರಿಂದ ಕೊರೊನಾ ಲಸಿಕೆ ನೀಡಲು ರಾಜ್ಯ ಸರಕಾರ ತೀರ್ಮಾನಿಸಿದೆ. ಮೇ 1ರಿಂದ ಈ ಪ್ರಕ್ರಿಯೆ ಆರಂಭಗೊಳ್ಳಬೇಕಿತ್ತಾದರೂ ಲಸಿಕೆ ಕೊರತೆ ಹಿನ್ನೆಲೆಯಲ್ಲಿ ಮುಂದೂಡ­ಲಾಗಿತ್ತು. ಆದ್ಯತಾ ವಲಯಗಳ ಗುರುತಿಸುವಿಕೆ ಮತ್ತು ಅವರಿಗೆ ಲಸಿಕೆ ನೀಡುವಲ್ಲಿ ಯಾವುದೇ ಗೊಂದಲಗಳಾಗದಂತೆ ಮುನ್ನೆಚ್ಚರಿಕೆ ವಹಿಸು­ವುದು ಸರಕಾರದ ಜವಾಬ್ದಾರಿ. ಏಕೆಂದರೆ ಈಗಾಗಲೇ ನಡೆಯುತ್ತಿರುವ ಲಸಿಕೆ ವಿತರಣೆ ಕಾರ್ಯಕ್ರಮದಲ್ಲಿ ಹಲವಾರು ಮಂದಿಯ ಮೊಬೈಲ್‌ಗೆ ಸಂದೇಶ ಬಂದ ಬಳಿಕ ಲಸಿಕಾ ಕೇಂದ್ರಕ್ಕೆ ಹೋದಾಗ ಅಲ್ಲಿ ಲಸಿಕೆ ಇರದೆ ಗೊಂದಲದ ಪರಿಸ್ಥಿತಿ ಉಂಟಾಗಿತ್ತು. ಇಂತಹ ಅವ್ಯವಸ್ಥೆಗಳು ಆಗದಂತೆ ಎಚ್ಚರಿಕೆ ವಹಿಸುವುದು ಸರಕಾರದ ಆದ್ಯ ಕರ್ತವ್ಯವಾಗಿದೆ.

ಟಾಪ್ ನ್ಯೂಸ್

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

7-rbi

Editorial: ರೆಪೊ ದರದಲ್ಲಿ ಯಥಾಸ್ಥಿತಿ: ಆರ್‌ಬಿಐ ಜಾಣ್ಮೆಯ ನಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.