ಎಣಿಕೆ ನಿಧಾನ-ಫ‌ಲಿತಾಂಶ ವಿಳಂಬ

ಇವಿಎಂ-ವಿವಿಪ್ಯಾಟ್‌ ಮತ ತಾಳೆ

Team Udayavani, May 14, 2019, 6:00 AM IST

vv

ಬೆಂಗಳೂರು: ಈ ಬಾರಿ ಲೋಕಸಭಾ ಚುನಾವಣೆ ಮತ ಎಣಿಕೆ ಸಂದರ್ಭ ಇವಿಎಂ-ವಿವಿಪ್ಯಾಟ್ ಮತಗಳ ತಾಳೆ ಹಾಕುವಲ್ಲಿ ಸುಪ್ರೀಂ ಕೋರ್ಟ್‌ ಆದೇಶ ಪಾಲಿಸಬೇಕಾಗಿರುವುದರಿಂದ ಮತ ಎಣಿಕೆ ನಿಧಾನವಾಗಲಿದ್ದು, ಫ‌ಲಿತಾಂಶವೂ ವಿಳಂಬವಾಗಲಿದೆ.

ಸುಪ್ರೀಂಕೋರ್ಟ್‌ ನಿರ್ದೇಶನದಂತೆ ಇವಿಎಂ- ವಿವಿಪ್ಯಾಟ್ ಮತಗಳನ್ನು ತಾಳೆ ಮಾಡಬೇಕಾಗಿದ್ದು, ಇದಕ್ಕೆ ಸಾಕಷ್ಟು ಸಮಯ ಹಿಡಿಯಲಿದೆ. ಪ್ರತಿ ವಿಧಾನ ಸಭಾ ಕ್ಷೇತ್ರದ 5 ಮತಗಟ್ಟೆಗಳ ವಿವಿಪ್ಯಾಟ್ ಚೀಟಿಗಳನ್ನು ಎಣಿಕೆ ಮಾಡಬೇಕು. ಒಂದು ವಿವಿಪ್ಯಾಟ್‌ನ ಚೀಟಿ ಎಣಿಕೆಗೆ ಕನಿಷ್ಠ 45 ನಿಮಿಷ ಬೇಕು.

ಎಲ್ಲ 5 ವಿವಿಪ್ಯಾಟ್ ಎಣಿಕೆಗೆ ಕನಿಷ್ಠ 3ರಿಂದ 4 ತಾಸು ಬೇಕು. ಇದು ಅಂತಿಮ ಫ‌ಲಿತಾಂಶ ವಿಳಂಬವಾಗಲು ಪ್ರಮುಖ ಕಾರಣ. ಇದರಿಂದ ಎಲ್ಲ 28 ಲೋಕಸಭಾ ಕ್ಷೇತ್ರಗಳ ಸ್ಪಷ್ಟ ಚಿತ್ರಣ ಹೊರಬೀಳುವಾಗ ಸಂಜೆ ಆಗಬಹುದು.

ಈ ಬಾರಿ ಇವಿಎಂ-ವಿವಿಪ್ಯಾಟ್ ಮತಗಳ ತಾಳೆ ಹಾಕಬೇಕಾಗಿರುವುದರಿಂದ ಮತ ಎಣಿಕೆಯ ಕೊನೆಯಲ್ಲಿ ಕೇಂದ್ರದಲ್ಲಿರುವ 14 ಟೇಬಲ್ಗಳ ಪೈಕಿ ಕೊನೆಯ ಟೇಬಲ್ನ ವಿವಿಪ್ಯಾಟ್‌ನಲ್ಲಿನ ಮುದ್ರಿತ ಚೀಟಿಗಳನ್ನು ತಾಳೆ ಮಾಡಲಾಗುತ್ತದೆ. ಇದು ಮುಗಿದ ಬಳಿಕವಷ್ಟೇ ಅಂತಿಮ ಫ‌ಲಿತಾಂಶ ಘೋಷಿಸಲಾಗುತ್ತದೆ. ಹೀಗಾಗಿ ಅಂತಿಮ ಫ‌ಲಿತಾಂಶ ಪ್ರಕಟ ರಾತ್ರಿ 8 ಗಂಟೆ ಆಗಬಹುದು ಎಂದು ಆಯೋಗದ ಅಧಿಕಾರಿಗಳು ಹೇಳುತ್ತಾರೆ.

ಈ ಹಿಂದೆ ಒಂದು ವಿಧಾನಸಭಾ ಕ್ಷೇತ್ರದ ಯಾವುದಾದರೂ ಒಂದು ಮತಗಟ್ಟೆಯ ಇವಿಎಂ-ವಿವಿಪ್ಯಾಟ್ ಮತಗಳನ್ನು ತಾಳೆ ಹಾಕಲಾಗುತ್ತಿತ್ತು. ಈಗ ಪ್ರತಿ ವಿಧಾನಸಭಾ ಕ್ಷೇತ್ರದ5 ಮತಗಟ್ಟೆಗಳಲ್ಲಿ ಇವಿಎಂ-ವಿವಿಪ್ಯಾಟ್ ಮತಗಳನ್ನು ತಾಳೆ ಹಾಕುವಂತೆ ಸುಪ್ರೀಂಕೋರ್ಟ್‌ ನಿರ್ದೇಶನ ನೀಡಿದೆ. ಜತೆಗೆ ಎಣಿಕೆ ಆರಂಭವಾದ ಬಳಿಕ ಕೆಲವು ತಾಂತ್ರಿಕ ಕಾರಣಗಳು ಎದುರಾಗುತ್ತವೆ. ಕೆಲವು ಕಡೆ ಅಭ್ಯರ್ಥಿಗಳು ಹೆಚ್ಚಿರುತ್ತಾರೆ. ಈ ಎಲ್ಲ ಅಂಶಗಳಿಂದಾಗಿ ಫ‌ಲಿತಾಂಶ ವಿಳಂಬವಾಗಲಿದೆ. ಈ ಹಿನ್ನೆಲೆಯಲ್ಲಿ ಸಿಬಂದಿಗೆಬೇಕಾದ ಅಗತ್ಯ ತರಬೇತಿ ಕೊಡಲಾಗಿದ್ದು, ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಚುನಾವಣ ಆಯೋಗದ ಅಧಿಕಾರಿಗಳು ಹೇಳುತ್ತಾರೆ.

1,120 ಮತಗಟ್ಟೆಗಳಲ್ಲಿ ‘ಮತ ತಾಳೆ’
ರಾಜ್ಯದ 28 ಲೋಕಸಭಾ ಕ್ಷೇತ್ರಗಳವ್ಯಾಪ್ತಿಯಲ್ಲಿ 224 ವಿಧಾನಸಭಾ ಕ್ಷೇತ್ರಗಳಿದ್ದು, 58,186 ಮತಗಟ್ಟೆಗಳಲ್ಲಿ ಮತದಾನ ನಡೆದಿದೆ. ಈಗ ಸುಪ್ರೀಂ ಆದೇಶದಂತೆ 224 ವಿಧಾನಸಭಾ ಕ್ಷೇತ್ರಗಳಲ್ಲಿ ತಲಾ 5ರಂತೆ;28 ಲೋಕಸಭಾ ಕ್ಷೇತ್ರಗಳಲ್ಲಿ ತಲಾ 40ರಂತೆ ಒಟ್ಟು 1,120 ಮತಗಟ್ಟೆಗಳಲ್ಲಿ ಇವಿಎಂ-ವಿವಿಪ್ಯಾಟ್ ಮತ ತಾಳೆ ಮಾಡಬೇಕಾಗಿದೆ. ಇದಕ್ಕಾಗಿ ಹೆಚ್ಚುವರಿ 5 ಸಾವಿರ ಸಿಬಂದಿ ಮತ್ತು 3 ತಾಸು ಹೆಚ್ಚುವರಿ ಸಮಯ ಬೇಕಾಗುತ್ತದೆ.

ಸುಪ್ರೀಂಕೋರ್ಟ್‌ ಆದೇಶದ ಅನುಸಾರ ಮತ ಎಣಿಕೆಗೆ ಸಾಕಷ್ಟು ಸಮಯ ಹಿಡಿಯಲಿದೆ. ಒಂದು ವಿವಿಪ್ಯಾಟ್‌ನ ಚೀಟಿಗಳ ಎಣಿಕೆಗೆ ಕನಿಷ್ಠ 45 ನಿಮಿಷ ಬೇಕು. ಹೀಗಾಗಿ ಈ ಬಾರಿ ಒಟ್ಟಾರೆ ಅಂತಿಮ ಫ‌ಲಿತಾಂಶ ಹೊರಬರಲು ರಾತ್ರಿ 8 ಗಂಟೆ ಆಗಬಹುದು.
-ಸಂಜೀವ್‌ ಕುಮಾರ್‌, ರಾಜ್ಯ ಮುಖ್ಯ ಚುನಾವಣಾಧಿಕಾರಿ

-ರಫೀಕ್‌ ಅಹ್ಮದ್‌

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

ಚೊಂಬಿನ ಮೂಲಕ ಮೋದಿ ಸ್ವಾಗತಕ್ಕೆ ಕಾಂಗ್ರೆಸ್‌ ಸಿದ್ಧತೆ

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

Congresss ಚೊಂಬು ಜಾಹೀರಾತು ವಿರುದ್ಧ ಬಿಜೆಪಿ ಚಾರ್ಜ್‌ಶೀಟ್‌

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

High Court ಎಚ್‌ಡಿಕೆಗೆ ಮಹಿಳಾ ಆಯೋಗ ನೀಡಿದ್ದ ನೋಟಿಸ್‌ಗೆ ಹೈಕೋರ್ಟ್‌ ತಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.