ಸಾಮಾಜಿಕ ಕಾರ್ಯಬಾಹುಳ್ಯ ಮೆರೆದ ಹೆಗ್ಗಡೆ ದಂಪತಿ

ಹೇಮಾವತಿ ವೀ. ಹೆಗ್ಗಡೆ ಅವರ ಕೃತಿಗಳ ಲೋಕಾರ್ಪಣೆಗೊಳಿಸಿ ಡಾ| ಸಂಧ್ಯಾ ಎಸ್‌. ಪೈ

Team Udayavani, Mar 9, 2022, 6:05 AM IST

ಸಾಮಾಜಿಕ ಕಾರ್ಯಬಾಹುಳ್ಯ ಮೆರೆದ ಹೆಗ್ಗಡೆ ದಂಪತಿ

ಬೆಳ್ತಂಗಡಿ: ನೆಪೋಲಿಯನ್‌ ಬೋನಾಪಾರ್ಟೆ ಅವರ ಕಥೆಯೊಂದರಲ್ಲಿ ಆತನಲ್ಲಿ ನಿನ್ನ ಯಶಸ್ಸಿಗೆ ಕಾರಣವೇನೆಂದು ಕೇಳಿದಾಗ, ನನ್ನ ಕೈ ಕೆಳಗಿನ ಅಧಿಕಾರ, ಅಧಿಕಾರಿಯ ಕೈಕೆಳಗಿನ ಸೈನಿಕ, ಸೈನಿಕ ಬಳಸುವ ಕುದುರೆ, ಕುದುರೆಯ ಲಾಳವನ್ನು ಗಮನಿಸುತ್ತೇನೆ ಎಂದು ಹೇಳಿದನಂತೆ. ಇದರರ್ಥ ಕರ್ತವ್ಯ ಸೂಕ್ಷ್ಮತೆಯಿದ್ದಲ್ಲಿ ಸಾಮಾಜಿಕ ಕಾರ್ಯಬಾಹುಳ್ಯ ಮೆರೆಯಲು ಸಾಧ್ಯ ಎಂಬುದಕ್ಕೆ ಧರ್ಮಸ್ಥಳದ ಡಾ| ಹೆಗ್ಗಡೆ ದಂಪತಿ ಸಾಕ್ಷಿ ಎಂದು ತರಂಗ ವಾರಪತ್ರಿಕೆ ವ್ಯವಸ್ಥಾಪಕ ಸಂಪಾದಕಿ ಡಾ| ಸಂಧ್ಯಾ ಎಸ್‌. ಪೈ ಬಣ್ಣಿಸಿದರು.

ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿ ಯಿಂದ ಹೇಮಾವತಿ ವೀ. ಹೆಗ್ಗಡೆಯ ವರ “ಗೆಳತಿ’, “ಮಗಳಿಗೊಂದು ಪತ್ರ’ ಕೃತಿ ಗಳನ್ನು ಅನಾವರಣಗೊಳಿಸಿ ಮಾತನಾಡಿದರು.

ಸಣ್ಣ ವಿಚಾರಗಳಿಗೆ ಕಲಹಕ್ಕೆ ಆಸ್ಪದ ನೀಡದೆ ಹೆಣ್ಣು ದಾಂಪತ್ಯದ ಸಾಮರಸ್ಯದೊಂದಿಗೆ ಹೆಣ್ಣು ಸ್ವತಂತ್ರ
ಳಾಗಿ ಬದುಕಬೇಕು. ಡಾ| ಹೆಗ್ಗಡೆ – ಹೇಮಾವತಿ ದಂಪತಿಯ ಸಾಂಗತ್ಯದ ಸಂದೇಶ ನೂರ್ಕಾಲ ಸಮಾಜಕ್ಕೆ ಅರ್ಪಣೆಯಾಗಲಿ ಎಂದು ಆಶಿಸಿದರು.

ಅಧ್ಯಕ್ಷತೆ ವಹಿಸಿದ್ದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಮಾತನಾಡಿ, ಮಹಿಳೆಯರು ಇಂದು ಆತ್ಮವಿಶ್ವಾಸ ಸ್ಥೈರ್ಯ ಗಳಿಸಿ ಕೊಂಡಿದ್ದರಿಂದ ಅವರಿಗೂ ಸಮಾನ ಅವಕಾಶ ಲಭಿಸಿದೆ. ಮಾತೃಶ್ರೀ ರತ್ನಮ್ಮ ನವರಂತೆ ಹೇಮಾವತಿಯಮ್ಮ ನವರು ಬೌದ್ಧಿಕ ಸಂಗ್ರಹವನ್ನು ಮುಂದು ವರಿಸಿದ್ದಾರೆ ಎಂದು ಉಲ್ಲೇಖಿಸಿದರು.

ಹೇಮಾವತಿ ವೀ. ಹೆಗ್ಗಡೆ ಮಾತನಾಡಿ, ಮಹಿಳಾ ದಿನ ಹಾಗೂ ಶ್ರೇಷ್ಠ ಮಹಿಳೆಯಿಂದ ಕೃತಿ ಅನಾವರಣಗೊಂಡಿದ್ದು ಸಂತಸ ತಂದಿದೆ. ಡಾ| ಸಂಧ್ಯಾ ಪೈ ಅವರ ಲೇಖನದಲ್ಲಿ ಅಧ್ಯಾತ್ಮ ಮತ್ತು ಆಧುನಿಕತೆಯ ಛಾಯೆಯಿರುತ್ತದೆ. ಹಾಗಾಗಿ ಸಮಾಜಕ್ಕೆ ಬಹುಬೇಗನೆ ತಲುಪುತ್ತಿದೆ ಎಂದರು.

ಮಕ್ಕಳಿಂದಲೇ ಭಾಷೆ- ಸಂಸ್ಕೃತಿ ಮೌಲ್ಯಗಳನ್ನು ತುಂಬುವ ಕೆಲಸವಾಗಬೇಕಿದೆ. ಈ ಉದ್ದೇಶದಿಂದ ಜ್ಞಾನವಿಕಾಸ ಕೇಂದ್ರದಲ್ಲಿ 2,200 ಗ್ರಂಥಾಲಯಗಳನ್ನು ಗ್ರಾಮೀಣ ಭಾಗ ದಲ್ಲಿ ಸ್ಥಾಪಿಸಲಾಗಿದೆ. ಯೋಜನೆಯ 25,000 ಕಾರ್ಯಕರ್ತರಲ್ಲಿ 19,000 ಮಹಿಳೆಯರೇ ಇದ್ದಾರೆ ಎಂದರು.

ಹೇಮಾವತಿ ಹೆಗ್ಗಡೆ ಅವರನ್ನು ಯೋಜನೆಯ ವತಿಯಿಂದ “ಪರಿವರ್ತನೆಯ ಪ್ರವರ್ತಕರು’ ಎಂಬ ಬಿರುದು ನೀಡಿ ಸಮ್ಮಾನಿಸಲಾಯಿತು.

ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಎಸ್‌. ಪ್ರಭಾಕರ್‌, ಕಾರ್ಯ ದರ್ಶಿ ಡಿ. ಹರ್ಷೇಂದ್ರ ಕುಮಾರ್‌, ಉಪಾಧ್ಯಕ್ಷ ಸುರೇಂದ್ರ ಕುಮಾರ್‌, ಸುಪ್ರಿಯಾ ಹರ್ಷೇಂದ್ರ ಕುಮಾರ್‌, ಶ್ರದ್ಧಾ ಅಮಿತ್‌, ಗ್ರಾ.ಯೋಜನೆ ಟ್ರಸ್ಟಿ ಸಂಪತ್‌ ಸಾಮ್ರಾಜ್‌ ಮತ್ತಿತರರು ಭಾಗಿಯಾದರು.

ಡಾ| ಡಿ. ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ಹೆಗ್ಗಡೆಯವರು ಡಾ| ಸಂಧ್ಯಾ ಎಸ್‌. ಪೈ ಅವರನ್ನು ಗೌರವಿಸಿದರು. ಯೋಜನೆಯ ಕಾರ್ಯನಿರ್ವಾ ಹಕ ನಿರ್ದೇಶಕ ಡಾ| ಎಲ್‌.ಎಚ್‌. ಮಂಜುನಾಥ್‌ ಸ್ವಾಗತಿಸಿ, ಯೋಜ ನಾಧಿಕಾರಿ ಚೇತನಾ ವಂದಿಸಿದರು. ಮಮತಾ ಹರೀಶ್‌ ರಾವ್‌ ನಿರೂಪಿಸಿದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Sullia: ಗಾಂಜಾ ಸೇವನೆ; ಇಬ್ಬರು ವಶಕ್ಕೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.