ಸಿಡಿ ಪ್ರಕರಣ : ನರೇಶ್ ಗೌಡ -ಶ್ರವಣ್ ಗೆ ಕೋರ್ಟ್ ನಿಂದ ನಿರೀಕ್ಷಣಾ ಜಾಮೀನು!
Team Udayavani, Jun 8, 2021, 5:46 PM IST
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಸೂತ್ರದಾರಿಗಳು ಎನ್ನಲಾದ ಮಾಜಿ ಪತ್ರಕರ್ತ ನರೇಶ್ ಗೌಡ ಹಾಗೂ ಶ್ರವಣ್ ಗೆ ಬೆಂಗಳೂರಿನ 91ನೇ ಸಿಸಿಹೆಚ್ ಕೋರ್ಟ್ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
ಪ್ರಕರಣದ ಹಿನ್ನೆಲೆ ಕಳೆದ ಮಾರ್ಚ್ 2 ರಿಂದ ತಲೆಮರೆಸಿಕೊಂಡಿರುವ ಈ ಇಬ್ಬರೂ ರಮೇಶ್ ಜಾರಕಿಹೊಳಿ ಸಿಡಿ ಬಿಡುಗಡೆ ಪ್ರಕರಣದ ಪ್ರಮುಖ ಆರೋಪಿಗಳಾಗಿದ್ರು. ತನಿಖಾ ತಂಡ ಈ ಇಬ್ಬರನ್ನು ಪತ್ತೆಹಚ್ಚಲು ಶ್ರಮಿಸುತ್ತಿತ್ತು. ಈ ಇಬ್ಬರ ಮೇಲೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹನಿಟ್ರ್ಯಾಪ್ ಮತ್ತು ಬ್ಲ್ಯಾಕ್ಮೇಲ್ ಆರೋಪ ಮಾಡಿದ್ದರು.
ಇನ್ನು ಸಿಡಿ ಯುವತಿ ಎಸ್.ಐ.ಟಿ ತನಿಖೆ ಸರಿಯಾಗಿ ನಡೆದಿಲ್ಲ. ಆದ್ದರಿಂದ ಎಸ್.ಐ.ಟಿ ರಚನೆ ಮಾಡಿರುವುದನ್ನು ಮತ್ತು ಅದು ಇದುವರೆಗೆ ನಡೆಸಿದ ತನಿಖೆಯನ್ನು ರದ್ದುಪಡಿಸಿ, ಹೊಸ ತನಿಖಾ ತಂಡ ರಚಿಸುವಂತೆ ಅರ್ಜಿಯಲ್ಲಿ ಯುವತಿ ಮನವಿ ಮಾಡಿದ್ದಾಳೆ.