ಕೋವಿಡ್ನಿಂದ ಎಚ್ಐವಿ ರೋಗಿಗಳಿಗೂ ಗಂಡಾಂತರ
Team Udayavani, May 15, 2020, 7:00 PM IST
ಮಣಿಪಾಲ : ಕೋವಿಡ್ ದೆಸೆಯಿಂದಾಗಿ ಉಳಿದ ರೋಗಗಳಿಗೆ ತೀರಾ ಅನಿವಾರ್ಯ ಅಥವಾ ತುರ್ತು ಎನಿಸದಿದ್ದರೆ ಚಿಕಿತ್ಸೆ ನೀಡಲು ಖಾಸಗಿ ಆಸ್ಪತ್ರೆಗಳು ಹಿಂದುಮುಂದು ನೋಡುತ್ತಿವೆ. ಶಸ್ತ್ರಚಿಕಿತ್ಸೆಯನ್ನು ಮುಂದೂಡಲಾಗುತ್ತಿದೆ. ಇದರಿಂದಾಗಿ ಇತರ ರೋಗಿಗಳು ಚಿಕಿತ್ಸೆ ಸಿಗದೆ ಪರದಾಡುತ್ತಿದ್ದಾರೆ. ಆದರೆ ಈ ನಡುವೆ ಮತ್ತೂಂದು ಆಪತ್ತು ಎದುರಾಗುತಿದೆ. ಹೆಚ್ಐವಿ ಪ್ರಕರಣಗಳು ಅಧಿಕವಾಗಲಿದೆ ಎಂದು ವಿಶ್ವಸಂಸ್ಥೆ ಎಚ್ಚರಿಸಿದೆ. ಒಂದು ಮರಣಾಂತಿಕ ಸೋಂಕಿನ ವಿರುದ್ಧ ಹೋರಾಡುತ್ತಿರುವಾಗಲೇ ಮತ್ತೂಂದು ರೋಗಕ್ಕೆ ತುತ್ತಾಗಿ ಸಾಯುವಂತಾಗಿದೆ.
5 ಲಕ್ಷಕ್ಕೂ ಹೆಚ್ಚು ಸಾವು
ಮೂರು ತಿಂಗಳಿಂದ ಇತರ ರೋಗಿಗಳು ಸಂಕಷ್ಟಕ್ಕೆ ಸಿಲುಕಿದ್ದು, ಪರಿಸ್ಥಿತಿ ಹೀಗೆ ಮುಂದುವರಿದು ಚಿಕಿತ್ಸೆ ಹಾಗೂ ಔಷಧ ಪೂರೈಕೆಯಲ್ಲಿ ವ್ಯತ್ಯಯ ಉಂಟಾದ್ದರೆ ಜಾಗತಿಕವಾಗಿ ಕನಿಷ್ಠ 5 ಲಕ್ಷಕ್ಕೂ ಅಧಿಕ ಜನರು ಸಾವನ್ನಪ್ಪಲಿದ್ದಾರೆ.
ಶೇ.104 ಹೆಚ್ಚಳ
ಸಮರ್ಪಕವಾದ ಚಿಕಿತ್ಸೆ ಲಭಿಸದೆ ಏಡ್ಸ್ ನಿಂದ ಸಾವನ್ನಪ್ಪುವವರ ಪ್ರಮಾಣದಲ್ಲಿ ಶೇ.104 ಹೆಚ್ಚಳವಾಗಲಿದ್ದು, ಕೋವಿಡ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆಗಿಂತಲೂ ಇದು ಹೆಚ್ಚಾಗಲಿದೆ. ಎಚ್ಐವಿ ಸಂಬಂಧಿತ ಹಾಗೂ ಕ್ಷಯ ರೋಗದಿಂದ ಆಫ್ರಿಕಾ ಖಂಡವೊಂದರಲ್ಲಿಯೇ ಈ ಪ್ರಮಾಣದ ಸಾವು ಸಂಭವಿಸಲಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಸಿದೆ.
ಇತಿಹಾಸ ಮರುಕಳಿಸಲಿದೆ
ಇದೇ ಪರಿಸ್ಥಿತಿ ಮುಂದುವರಿದರೆ, 2008ಕ್ಕಿಂತಲೂ ಹಿಂದಿನ ಸ್ಥಿತಿ ಮರುಕಳಿಸಲಿದೆ. 2008ರಲ್ಲಿ 9.5 ಲಕ್ಷ ಜನರು ಏಡ್ಸ್ ಗೆ ಬಲಿಯಾಗಿದ್ದರು. ಅಂತದೇ ಬೆಳವಣಿಗೆ ಇದೀಗ ಮತ್ತೇ ಎದುರಾಗಲಿದ್ದು, ಮುಂದಿನ ಐದು ವರ್ಷಗಳವರೆಗೂ ಈ ಸಾವಿನ ಸರಣಿ ಮುಂದುವರಿಯಲಿದೆ. ಒಟ್ಟಾರೆ ಸಾವಿನ ಪ್ರಮಾಣದಲ್ಲಿ ಪ್ರತಿವರ್ಷ ಶೇ.40 ಏರಿಕೆ ಕಂಡುಬರಲಿದೆ ಎಂಬ ಕಳವಳ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್ಗಳು: 10 ಯೋಧರು ಸಾವು
Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ
MUST WATCH
ಹೊಸ ಸೇರ್ಪಡೆ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ