ಪಿಯು ಮೌಲ್ಯಮಾಪಕರಿಗೆ ಕೋವಿಡ್-19 ಆತಂಕ

ಬೆಂಗಳೂರಿಗೆ ತೆರಳಲು ಹಿಂದೇಟು ;ಮರಳಿದ ಬಳಿಕ ಕ್ವಾರಂಟೈನ್‌ ಭೀತಿ

Team Udayavani, May 18, 2020, 6:30 AM IST

ಪಿಯು ಮೌಲ್ಯಮಾಪಕರಿಗೆ ಕೋವಿಡ್-19 ಆತಂಕ

ಸಾಂದರ್ಭಿಕ ಚಿತ್ರ.

ಮಂಗಳೂರು: ದ್ವಿತೀಯ ಪಿಯುಸಿಯ ಉತ್ತರ ಪತ್ರಿಕೆಗಳ ಮೌಲ್ಯ ಮಾಪನಕ್ಕೆ ಪದವಿಪೂರ್ವ ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ. ಆದರೆ ಮೌಲ್ಯಮಾಪನ ಕ್ಕಾಗಿ ರಾಜ್ಯದ ವಿವಿಧ ಜಿಲ್ಲೆಗಳಿಂದ ಬೆಂಗಳೂರಿಗೆ ತೆರಳಬೇಕಾಗಿರುವ ಉಪನ್ಯಾಸಕರಲ್ಲಿ ಆತಂಕ ಆವರಿಸಿದೆ.

ಇಂಗ್ಲಿಷ್‌ ಹೊರತುಪಡಿಸಿ ಇತರ ಪತ್ರಿಕೆಗಳ ಮೌಲ್ಯಮಾಪನ ಶೀಘ್ರದಲ್ಲೇ ನಡೆಯಲಿದ್ದು ಈಗಾಗಲೇ ಮೌಲ್ಯಮಾಪನ ಶಿಬಿರಗಳ ಮೇಲ್ವಿಚಾರಕರಿಗೆ ಸರಕಾರ ಜ್ಞಾಪನಾ ಪತ್ರಗಳನ್ನು ಕಳುಹಿಸಿಕೊಟ್ಟಿದೆ. ಆದರೆ ಸದ್ಯ ರಾಜ್ಯದ ವಿವಿಧ ಜಿಲ್ಲೆಗಳಿಂದ ಬೆಂಗಳೂರಿನ ಮೌಲ್ಯಮಾಪನ ಕೇಂದ್ರಗಳಿಗೆ ತೆರಳಬೇಕಾಗಿರುವ ಉಪನ್ಯಾಸ ಕರು ಆತಂಕ, ಗೊಂದಲದಲ್ಲಿದ್ದಾರೆ.

ಹಿಂದಿ, ಸಂಸ್ಕೃತ, ಸಂಖ್ಯಾಶಾಸ್ತ್ರ, ಕಂಪ್ಯೂಟರ್‌ ಸಾಯನ್ಸ್‌ ಮೊದಲಾದ ಕೆಲವು ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕೇಂದ್ರ ಬೆಂಗಳೂರಿನಲ್ಲಿ ಮಾತ್ರ ಇರುತ್ತದೆ. ಪ್ರತಿ ವರ್ಷ ಈ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪಕರು ರಾಜ್ಯದ ವಿವಿಧ ಜಿಲ್ಲೆಗಳಿಂದ ಬೆಂಗಳೂರಿಗೆ ಹೋಗುತ್ತಿದ್ದರು. ಆದರೆ ಈ ಬಾರಿ ಕೋವಿಡ್-19 ಸೋಂಕಿನ ಹಿನ್ನೆಲೆಯಲ್ಲಿ ಬೆಂಗಳೂರಿಗೆ ತೆರಳುವುದು ಹೇಗೆ ಎಂಬ ಚಿಂತೆ ಉಪನ್ಯಾಸಕರದ್ದು. ಹೋಗುವುದು ಹೇಗೆ,ಸುರಕ್ಷೆ ಏನು, ಉಳಿದುಕೊಳ್ಳುವುದು ಎಲ್ಲಿ ಎಂಬಿತ್ಯಾದಿ ಆತಂಕ ಅವರಲ್ಲಿದೆ. ಅಲ್ಲದೆ ಮೌಲ್ಯ ಮಾಪನ ಮುಗಿಸಿ ಮರಳಿದ ಮೇಲೆ ಕ್ವಾರಂಟೈನ್‌ ಇದೆಯೇ ಎಂಬ ಪ್ರಶ್ನೆಗಳನ್ನು ಕೂಡ ಉಪನ್ಯಾಸಕರು ಮುಂದಿಟ್ಟಿದ್ದಾರೆ.

ಕೊನೆಯ ಕ್ಷಣಕ್ಕೆ ನೋಟಿಸು
ಸಾಮಾನ್ಯವಾಗಿ ಮೌಲ್ಯಮಾಪನದ ನಿಗದಿತ ದಿನಾಂಕಕ್ಕಿಂತ ಒಂದೆರಡು ದಿನಗಳ ಮೊದಲು ಮಾತ್ರ ಆಯಾ ಕಾಲೇಜುಗಳಿಗೆ ನೋಟಿಸ್‌ ಬರುತ್ತದೆ. ಸರಕಾರ ಟಿಎ / ಡಿಎ ಕೊಡುತ್ತದೆ. ಆದರೆ ಉಳಿದುಕೊಳ್ಳುವ ವ್ಯವಸ್ಥೆ ನಾವೇ ಮಾಡಬೇಕಿರುತ್ತದೆ. ಈ ಬಾರಿ ಆತಂಕದ ಸ್ಥಿತಿ ಇರುವುದರಿಂದ ಗೊಂದಲವಿದೆ. ವಿವಿಧ ವಿಷಯಗಳು ಸೇರಿದರೆ ಒಂದೊಂದು ಪ.ಪೂ. ಕಾಲೇಜುಗಳಿಂದ ತಲಾ 2-3 ಉಪನ್ಯಾಸಕರು ಸೇರಿದಂತೆ ಪ್ರತಿ ಜಿಲ್ಲೆಯಿಂದ ಸುಮಾರು 100 ಮಂದಿ ಬೆಂಗಳೂರಿಗೆ ತೆರಳಬೇಕಾಗುತ್ತದೆ ಎನ್ನುತ್ತಾರೆ ಉಪನ್ಯಾಸಕರು.

ಅಂತಿಮ ನಿರ್ಧಾರವಾಗಿಲ್ಲ
ಸದ್ಯ ಮೌಲ್ಯಮಾಪನ ಕೇಂದ್ರಗಳ ಮೇಲ್ವಿಚಾರಕರಿಗೆ (ಶಿಬಿರಾಧಿಕಾರಿ) ಮಾತ್ರ ನೋಟಿಸ್‌ ಬಂದಿದೆ. ಅವರು ಮೌಲ್ಯಮಾಪನ ಕೇಂದ್ರಗಳಿಗೆ ತೆರಳಿ ಸರಕಾರಕ್ಕೆ ಮಾಹಿತಿ ನೀಡಿದ ಅನಂತರ ಸರಕಾರ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ. ಮೌಲ್ಯಮಾಪನಕ್ಕೆ ತೆರಳುವ ಉಪನ್ಯಾಸಕರಿಗೆ ಸರಕಾರ ಅಗತ್ಯ ವ್ಯವಸ್ಥೆ ಮಾಡಬಹುದು.
– ಮಹಮ್ಮದ್‌ ಇಮಿ¤ಯಾಜ್‌
ಉಪನಿರ್ದೇಶಕರು, ಪ.ಪೂ. ಶಿಕ್ಷಣ ಇಲಾಖೆ, ದ.ಕ

ಪೋಷಕರಿಗೂ ಆತಂಕ
ಹಿಂದಿಯಂತಹ ಕೆಲವೊಂದು ವಿಷಯಗಳ ಮೌಲ್ಯಮಾಪನ ಕೇಂದ್ರ ಬೆಂಗಳೂರಿನಲ್ಲಿ ಮಾತ್ರ ಇದೆ. ನಾವು ಅಲ್ಲಿಗೆ ಹೋದರೂ ಅಲ್ಲಿ ಉಳಿದುಕೊಳ್ಳುವ ವ್ಯವಸ್ಥೆ, ಸುರಕ್ಷತೆಯ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಹೆಚ್ಚಿನ ಹೊಟೇಲ್‌ಗ‌ಳನ್ನು ವಿದೇಶೀಯರು, ಪರರಾಜ್ಯದವರ ಕ್ವಾರಂಟೈನ್‌ಗೆ ಮೀಸಲಿಡಲಾಗಿದೆ. ಉಪನ್ಯಾಸಕರಿಗೆ ಮಾತ್ರವಲ್ಲದೆ, ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿಯೂ ಆತಂಕವಿದೆ.
– ಓರ್ವ ಉಪನ್ಯಾಸಕ, ಪ.ಪೂ. ಕಾಲೇಜು, ದ.ಕ. ಜಿಲ್ಲೆ

ಟಾಪ್ ನ್ಯೂಸ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.