ಅಗ್ನಿಶಾಮಕ ಸಿಬ್ಬಂದಿಗಳನ್ನು ಬೆಂಬಿಡದೆ ಕಾಡುತ್ತಿದೆ ಕೋವಿಡ್ ಸೋಂಕು !
Team Udayavani, Jul 9, 2020, 9:39 PM IST
ಬೆಂಗಳೂರು: ಕೋವಿಡ್ ವಾರಿಯರ್ ಗಳಾಗಿ ಕಾರ್ಯ ನಿರ್ವಹಿಸುತ್ತಿರುವ ಅಗ್ನಿಶಾಮಕ ದಳದ ಸಿಬ್ಬಂದಿಯನ್ನು ಕೂಡ ಕೋವಿಡ್ ಬೆಂಬಿಡದೆ ಕಾಡುತ್ತಿದೆ.
ಪೀಣ್ಯ ಅಗ್ನಿಶಾಮಕ ಠಾಣೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿಯೊಬ್ಬರಿಗೆ ಗುರುವಾರ ಕೋವಿಡ್ ಸೋಂಕು ಧೃಡಪಟ್ಟಿದೆ. ಇದರೊಂದಿಗೆ ಬೆಂಗಳೂರಿನಲ್ಲೇ ಕೋವಿಡ್ ಸೋಂಕಿಗೆ ತುತ್ತಾದ ಸಿಬ್ಬಂದಿಯ ಸಂಖ್ಯೆ 42ಕ್ಕೆ ಏರಿದೆ.
ಪೀಣ್ಯ ಅಗ್ನಿಶಾಮಕ ಠಾಣೆಯಲ್ಲಿ ಕೋವಿಡ್ ಸೋಂಕಿಗೆ ಒಳಗಾದ ಸಿಬ್ಬಂದಿಯನ್ನು ಕ್ವಾರಂಟೈನ್ ಒಳಪಡಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅವರ ಸಂಪರ್ಕದಲ್ಲಿದ್ದ ಸಿಬ್ಬಂದಿಗೂ ಕ್ವಾರಂಟೈನ್ ಮಾಡಲಾಗಿದ್ದು, ಇಡೀ ಠಾಣೆ ಸ್ಯಾನಿಟೈಸ್ ಮಾಡಲಾಗಿದೆ.
ಬುಧವಾರ ಎಂ.ಎಸ್ ಬಿಲ್ಡಿಂಗ್ ನಲ್ಲಿರುವ ಠಾಣೆ ಹಾಗೂ ಹೆಬ್ಟಾಳ ಠಾಣೆಯಲ್ಲಿನ ಸಿಬ್ಬಂದಿಯೊಬ್ಬರಿಗೆ ಸೋಂಕು ಧೃಡಪಟ್ಟಿತ್ತು.ಹೀಗಾಗಿ ಅವರನ್ನು ಕ್ವಾರಂಟೈನ್ ಮಾಡಿದ್ದು, ಠಾಣೆಗಳನ್ನು ಸ್ಯಾನಿಟೈಸ್ ಮಾಡಲಾಗಿದೆ ಎಂದು ಹಿರಿಯ ಅಗ್ನಿಶಾಮಕ ಅಧಿಕಾರಿ ತಿಳಿಸಿದರು.
ಎಸಿಬಿ ಡಿವೈಎಸ್ಪಿಗೆ ಸೋಂಕು!
ಮತ್ತೂಂದೆಡೆ ಖನಿಜ ಭವನದಲ್ಲಿರುವ ಎಸಿಬಿಯ ಡಿವೈಎಸ್ಪಿಯೊಬ್ಬರಿಗೂ ಕೋವಿಡ್ ಸೋಂಕು ಧೃಡಪಟ್ಟಿದೆ. ಎಸಿಬಿಯಲ್ಲಿ ಇದು ಎರಡನೇ ಕೋವಿಡ್ ಸೋಂಕು ಪ್ರಕರಣವಾಗಿದೆ.
ಸೋಂಕು ಧೃಡಪಟ್ಟ ಡಿವೈಎಸ್ಪಿ ಕಚೇರಿಯನ್ನು ಸ್ಯಾನಿಟೈಸ್ ಮಾಡಲಾಗಿದೆ. ಅವರ ಸಂಪರ್ಕದಲ್ಲಿದ್ದ ಸಿಬ್ಬಂದಿಯನ್ನು ಕ್ವಾರಂಟೈನ್ ಮಾಡಲು ಕ್ರಮ ವಹಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.
ಕಲಾಸಿಪಾಳ್ಯ ಠಾಣೆಗೆ ಕಮಿಷನರ್ ಭೇಟಿ!
ನಗರದ ಠಾಣೆಗಳ ಪೈಕಿ ಅತಿ ಹೆಚ್ಚು ಸಿಬ್ಬಂದಿ ಕೋವಿಡ್ ಸೋಂಕಿಗೆ ಒಳಗಾಗಿದ್ದ ಹಿನ್ನೆಲೆಯಲ್ಲಿ ಹಲವು ದಿನಗಳಿಂದ ಸೀಲ್ ಡೌನ್ ಆಗಿದ್ದ ಕಲಾಸಿ ಪಾಳ್ಯ ಠಾಣೆ ಪುನ: ಕಾರ್ಯಾರಂಭ ಮಾಡಿದೆ.
ಈ ಹಿನ್ನೆಲೆಯಲ್ಲಿ ಗುರುವಾರ ಠಾಣೆಗೆ ಭೇಟಿ ನೀಡಿದ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ , ಸಿಬ್ಬಂದಿಯ ಯೋಗ ಕ್ಷೇಮ ವಿಚಾರಿಸಿದರು. ಯಾವುದೇ ಕಾರಣಕ್ಕೂ ಧೃತಿಗೆಡಬೇಡಿ.ಪೊಲೀಸ್ ಇಲಾಖೆ ಹಾಗೂ ಸರ್ಕಾರ ನಿಮ್ಮ ಬೆನ್ನಿಗಿದೆ ಎಂದು ಧೈರ್ಯ ತುಂಬಿ ಚಿಕಿತ್ಸೆ ಪಡೆದು ಗುಣಮುಖರಾದ ಸಿಬ್ಬಂದಿ ಹಾಗೂ ಇತರ ಸಿಬ್ಬಂದಿಗೆ ಆತ್ಮಸ್ಥೈರ್ಯ ತುಂಬಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ