ಕೋವಿಡ್19 ಪಾಸಿಟಿವ್ ಪತ್ತೆಯಾದ ಈ ಬಾಲಿವುಡ್ ಗಾಯಕಿಯ ಸಂಪರ್ಕಕ್ಕೆ ಬಂದವರೆಲ್ಲಾ ಯಾರು ಗೊತ್ತಾ?


Team Udayavani, Mar 20, 2020, 8:19 PM IST

Kanika-Kapoor

ಲಕ್ನೋ: ಬಾಲಿವುಡ್ ಗಾಯಕಿ ಕನಿಕಾ ಕಪೂರ್ ಅವರಲ್ಲಿ ಕೋವಿಡ್ 19 ಸೋಂಕು ದೃಢವಾಗುತ್ತಿದ್ದಂತೆ ಆಕೆಯನ್ನು ಭೇಟಿಯಾಗಿದ್ದವರೆಲ್ಲ ಇದೀಗ ಸ್ವಯಂ ನಿರ್ಬಂಧಕ್ಕೆ ಒಳಗಾಗಿದ್ದಾರೆ. ಗಾಯಕಿ ಕನಿಕಾ ಕಪೂರ್ ಅವರು ಕಳೆದ ವಾರ ಲಂಡನ್ ನಿಂದ ವಾಪಾಸಾದ ಬಳಿಕ ಲಕ್ನೋದಲ್ಲಿ ನಡೆದಿದ್ದ ಪಾರ್ಟಿಯಲ್ಲಿ ಭಾಗವಹಿಸಿದ್ದರು ಮತ್ತು ಈ ಪಾರ್ಟಿಯಲ್ಲಿ ವಿವಿಧ ಪಕ್ಷಗಳ ರಾಜಕೀಯ ನಾಯಕರು ಭಾಗವಹಿಸಿದ್ದರು. ಕನಿಕಾ ಅವರಲ್ಲಿ ಕೋವಿಡ್ 19 ವೈರಸ್ ಪಾಸಿಟಿವ್ ಆಗಿರುವುದು ಶುಕ್ರವಾರದಂದು ದೃಢಪಟ್ಟಿತ್ತು.

ರಾಜಸ್ಥಾನದ ಮಾಜೀ ಮುಖ್ಯಮಂತ್ರಿ ವಸುಂಧರಾ ರಾಜೇ, ಅವರ ಪುತ್ರ ಹಾಗೂ ಸಂಸದರಾಗಿರುವ ದುಷ್ಯಂತ್ ಸಿಂಗ್ ಅವರ ಪತ್ನಿ ನಿಹಾರಿಕಾ, ಉತ್ತರಪ್ರದೇಶದ ಆರೋಗ್ಯ ಸಚಿವ ಜೈ ಪ್ರತಾಪ್ ಸಿಂಗ್ ಅವರ ಪತ್ನಿ ಬಸುಂದರಾ ಕುಮಾರಿ, ರಿತು ಸಿಂಗ್ ಸೇರಿದಂಥೆ ಹಲವಾರು ರಾಜಕೀಯ ಮತ್ತು ಸಿನಿ ಕ್ಷೇತ್ರದ ಗಣ್ಯರು ಈ ಪಾರ್ಟಿಯಲ್ಲಿ ಭಾಗವಹಿಸಿದ್ದರು.

ಬಹುಜನ ಸಮಾಜವಾದಿ ಪಕ್ಷದ ಸಂಸದ ಅಕ್ಬರ್ ಅಹಮ್ಮದ್ ಡಂಪಿ ಅವರ ಸೋದರ ಸಂಬಂಧಿಯಾಗಿರುವ ಅದಿಲ್ ಅಹಮ್ಮದ್ ಅವರ ಮನೆಯಲ್ಲಿ ಈ ಔತಣ ಕೂಟ ಏರ್ಪಟ್ಟಿತ್ತು.

ಕನಿಕಾ ಅವರ ತಂದೆ ರಾಜೀವ್ ಕಪೂರ್ ಅವರು ಹೇಳುವಂತೆ ಲಕ್ನೋಗೆ ಬಂದ ನಂತರ ಕನಿಕಾ ಒಟ್ಟು ಮೂರು ಪಾರ್ಟಿಗಳಲ್ಲಿ ಭಾಗವಹಿಸಿದ್ದಾಳೆ. ಈ ಮೂರು ವಿವಿಧ ಪಾರ್ಟಿಗಳಲ್ಲಿ ಕನಿಕಾ ಏನಿಲ್ಲವೆಂದರೂ ಸುಮಾರು 400 ಜನರನ್ನು ಭೇಟಿಯಾಗಿರುವ ಸಾಧ್ಯತೆಗಳಿವೆ ಎಂಬುದು ಆಕೆಯ ತಂದೆಯ ಅಂದಾಜು. ಆದರೆ ತಂದೆಯ ಮಾತನ್ನು ಅಲ್ಲಗಳೆದಿರುವ ಕನಿಕಾ, ತಾನು ಒಂದು ಪಾರ್ಟಿಯಲ್ಲ ಮಾತ್ರವೇ ಭಾಗವಹಿಸಿರುವುದಾಗಿ ಹೇಳಿಕೊಂಡಿದ್ದಾಳೆ.

ತನ್ನಲ್ಲಿ ಕೋವಿಡ್ 19 ವೈರಸ್ ಲಕ್ಷಣಗಳು ಪಾಸಿಟಿವ್ ಇರುವುದು ಪತ್ತೆಯಾದ ಬಳಿಕ ಇದೀಗ ಕನಿಕಾಳನ್ನು ಲಕ್ನೋದಲ್ಲಿರುವ ಸಂಜಯ್ ಗಾಂಧಿ ಪೋಸ್ಟ್ ಗ್ರ್ಯಾಜ್ಯುವೇಟ್ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈಕೆಯ ಸಂಪರ್ಕಕ್ಕೆ ಬಂದಿರುವವರ ಪೈಕಿ ವಸುಂಧರಾ ರಾಜೆ ಸಿಂಧಿಯಾ, ದುಷ್ಯಂತ್ ಸಿಂಗ್ ಮೊದಲಾದವರು ಇದೀಗ ಸ್ವಯಂ ನಿರ್ಬಂಧ ವಿಧಿಸಿಕೊಂಡು ಪ್ರತ್ಯೇಕವಾಗಿ ಇರಲು ನಿರ್ಧರಿಸಿದ್ದಾರೆ.

View this post on Instagram

Hello everyone, For the past 4 days I have had signs of flu, I got myself tested and it came positive for Covid-19. My family and I are in complete quarantine now and following medical advice on how to move forward. Contact mapping of people I have been in touch with is underway aswell. I was scanned at the airport as per normal procedure 10days ago when I came back home, the symptoms have developed only 4 days ago. At this stage I would like to urge you all to practice self isolation and get tested if you have the signs. I am feeling ok, like a normal flu and a mild fever, however we need to be sensible citizens at this time and think of all around us. We can get through this without panic only if we listen to the experts and our local, state and central government directives. Wishing everyone good health. Jai Hind ! Take care, KK

A post shared by Kanika Kapoor (@kanik4kapoor) on


ಮಾರ್ಚ್ 9ರಂದು ಲಂಡನ್ ನಿಂದ ಮುಂಬಯಿಗೆ ಆಗಮಿಸಿದ ಕನಿಕಾ ಕಪೂರ್ ಮಾ.10ರಂದು ಅಲ್ಲೇ ಉಳಿದುಕೊಳ್ಳುತ್ತಾರೆ. ಮಾ.11ಕ್ಕೆ ಲಕ್ನೋ ತಲುಪಿದ ಕನಿಕಾ 13 ಮತ್ತು 14ರಂದು ಎರಡು ಪ್ರತ್ಯೇಕ ಪಾರ್ಟಿಗಳಲ್ಲಿ ಭಾಗವಹಿಸುತ್ತಾರೆ. ಮಾರ್ಚ್ 15ರಂದು ಕನಿಕಾ ಭಾಗವಹಿಸಿದ್ದ ಪಾರ್ಟಿಯಲ್ಲಿ ವಸುಂಧರಾ ರಾಜೆ, ದುಷ್ಯಂತ್ ಸಿಂಗ್, ಉತ್ತರ ಪ್ರದೇಶದ ಆರೋಗ್ಯ ಸಚಿವ ಸೇರಿದಂತೆ ರಾಜಕಾರಣಿಗಳು ಮತ್ತು ಹೈಪ್ರೊಫೈಲ್ ವ್ಯಕ್ತಿಗಳೆಲ್ಲಾ ಭಾಗವಹಿಸಿದ್ದರು.

ಮಾರ್ಚ್ 18ರಂದು ಕನಿಕಾ ಅವರಿಗೆ ಅಲ್ಪ ಪ್ರಮಾಣದ ಜ್ವರ ಕಾಣಿಸಿಕೊಂಡಿದ್ದು ಕಿಂಗ್ಸ್ ಜಾರ್ಜ್ಸ್ ಮೆಡಿಕಲ್ ವಿಶ್ವವಿದ್ಯಾನಿಲಯದಲ್ಲಿ ಚಿಕಿತ್ಸೆಗಾಗಿ ದಾಖಲಾಗುತ್ತಾಳೆ.

ಮಾರ್ಚ್ 20ರಂದು ಈಕೆಯಲ್ಲಿ ಕೋವಿಡ್ 19 ವೈರಸ್ ಲಕ್ಷಣಗಳು ಪಾಸಿಟಿವ್ ಕಂಡುಬಂದ ಹಿನ್ನಲೆಯಲ್ಲಿ ಕನಿಕಾ ಅವರನ್ನು ಲಕ್ನೋದಲ್ಲಿರುವ ಸಂಜಯ್ ಗಾಂಧಿ ಪೋಸ್ಟ್ ಗ್ರ್ಯಾಜ್ಯುವೇಟ್ ಇನ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಟಾಪ್ ನ್ಯೂಸ್

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MDH-Everest ban: India seeks details from Singapore, Hong Kong

MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್‌ ನಿಂದ ವಿವರ ಕೇಳಿದ ಭಾರತ

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.