ರೈಲ್ವೇ ಯೋಜನೆಗಳಿಗೂ ಕೋವಿಡ್-19 ಕಾಟ?

ಕೇಂದ್ರದಿಂದ ಒಪ್ಪಿಗೆ ಇದ್ದರೂ ಸೋಂಕು ನಿಯಂತ್ರಣಕ್ಕೆ ಭಾರೀ ವೆಚ್ಚ ; ರೈಲ್ವೇ ಯೋಜನೆಗಳ ಹಣಕ್ಕೆ ಕತ್ತರಿ ಸಾಧ್ಯ ತೆ

Team Udayavani, Apr 6, 2020, 6:00 AM IST

ರೈಲ್ವೇ ಯೋಜನೆಗಳಿಗೂ ಕೋವಿಡ್-19 ಕಾಟ?

ಬೆಂಗಳೂರು: ರಾಜ್ಯ ರೈಲ್ವೇ ಯೋಜನೆ ಗಳಿಗೆ ಈ ಬಾರಿ ಕೇಂದ್ರ ಸರಕಾರ ನೀಡಿದ್ದ ಅನುದಾನ ತೃಪ್ತಿಕರವಾಗಿತ್ತು. ಆದರೆ ಅದರ ಬಳಕೆಗೆ ವಾತಾವರಣವೇ ತೃಪ್ತಿಕರವಾಗಿಲ್ಲ!

ಸ್ವತಃ ರೈಲ್ವೇ ಸಚಿವರ ಮಹತ್ವಾ ಕಾಂಕ್ಷಿ ಯೋಜನೆಯಾದ ಬೆಳಗಾವಿ- ಕಿತ್ತೂರು- ಧಾರವಾಡ ಸಹಿತ ಹಲವು ಹೊಸ ಮಾರ್ಗಗಳಿಗೆ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಭರಪೂರ ಅನುದಾನ ದೊರಕಿತ್ತು. ಅದಕ್ಕೆ ಅನುಮೋದನೆಯೂ ಸಿಕ್ಕಿತ್ತು. ಆದರೆ ಅದರ ಬಳಕೆಗೆ ಕೋವಿಡ್-19  ವೈರಸ್‌ ಕಾಟ ಕೊಡುವ ಸಾಧ್ಯತೆ ಇದೆ.

ಸುಮಾರು ಎರಡು ವಾರಗಳಿಂದ ದೇಶ ಲಾಕ್‌ಡೌನ್‌ ಆಗಿದ್ದು, ಇನ್ನೂ ಹತ್ತು ದಿನ ಇದೇ ಸ್ಥಿತಿ ಮುಂದುವರಿಯಲಿದೆ. ಅನಂತರವೂ ಬಂದ್‌ ವಿಸ್ತರಣೆಯಾಗುವ ಲಕ್ಷಣಗಳು ಕಂಡುಬರುತ್ತಿವೆ. ಇದರಿಂದ ತೆರಿಗೆ ಸಂಗ್ರಹದಲ್ಲಿ ಭಾರೀ ಕುಸಿತ ಕಂಡುಬಂದಿದೆ. ಜತೆಗೆ ಮಹಾಮಾರಿ ಕೋವಿಡ್-19 ನಿಯಂತ್ರಣಕ್ಕೆ ಸಾಕಷ್ಟು ವೆಚ್ಚ ಆಗುತ್ತಿದೆ. ಇದರಿಂದ ರೈಲ್ವೇಗೆ ಸಂಬಂಧಿಸಿದ ಹೊಸ ಯೋಜನೆಗಳಿಗೂ ಅನುದಾನ ಕೊರತೆಯ ಬಿಸಿ ತಟ್ಟುವ ಅನುಮಾನ ಇಲಾಖೆ ಮತ್ತು ರೈಲ್ವೇ ಹೋರಾಟಗಾರರನ್ನು ಕಾಡುತ್ತಿದೆ.

2020-21ನೇ ಸಾಲಿನ ಬಜೆಟ್‌ನಲ್ಲಿ ರಾಜ್ಯಕ್ಕೆ ಹೊಸ ಯೋಜನೆಗಳಲ್ಲಿ ಸುಮಾರು 1,489 ಕೋ.ರೂ. ಮೀಸಲಿಡಲಾಗಿದೆ. ಇದರಲ್ಲಿ 73 ಕಿ.ಮೀ. ಉದ್ದದ ಬೆಳಗಾವಿ-ಕಿತ್ತೂರು-ಧಾರವಾಡ ಮಾರ್ಗಕ್ಕೇ ಅತಿ ಹೆಚ್ಚು 988 ಕೋಟಿ ರೂ. ನೀಡಲಾಗಿದೆ. ಉಳಿದಂತೆ ಸುಮಾರು 480 ಕೋ.ರೂ. ಮೊತ್ತದ ವಿವಿಧ ಮಾರ್ಗಗಳ ಕಾಮಗಾರಿ ಈಗಾಗಲೇ ಆರಂಭವಾಗಿವೆ.

ಸರಕಾರವು ರೈಲ್ವೇ ವಲಯವನ್ನೂ ಆದ್ಯತೆಯ ಕ್ಷೇತ್ರವಾಗಿ ಪರಿಗಣಿಸುವುದು ಮತ್ತು ರಾಜ್ಯದ ಸಚಿವರು ಮತ್ತು ಸಂಸದರು ಎಷ್ಟು ಮಟ್ಟದ ಒತ್ತಡ ಹೇರುತ್ತಾರೆ ಎಂಬುದರ ಮೇಲೆ ಈ ಯೋಜನೆಗಳು ನಿಂತಿವೆ ಎಂದು ರೈಲ್ವೇ ಹೋರಾಟಗಾರ ಸಂಜೀವ ದ್ಯಾಮಣ್ಣವರ ಅಭಿಪ್ರಾಯಪಡುತ್ತಾರೆ.

ಕೊರತೆ ಆಗದು
ರೈಲ್ವೇ ಅಧಿಕಾರಿಗಳು, ರಾಜ್ಯ ಸರಕಾರದ ಅಧಿ ಕಾರಿಗಳು ಮತ್ತು ಸಂಬಂಧಪಟ್ಟ ಡಿಸಿಗಳೊಂದಿಗೆ ಮಾತುಕತೆ ನಡೆಸಿ, ವಿದ್ಯುದೀಕರಣ ಮತ್ತು ಜೋಡಿ ಮಾರ್ಗಗಳಂತಹ ಯೋಜನೆಗಳ ಪಟ್ಟಿ ಮಾಡಿ, ಆದ್ಯತೆ ಮೇರೆಗೆ ಕೈಗೆತ್ತಿಕೊಳ್ಳಲು ಸೂಚಿಸಿದ್ದೇನೆ. 130 ಕೋಟಿ ಜನಸಂಖ್ಯೆ ಇರುವ ದೇಶದಲ್ಲಿ ಅನುದಾನದ ಕೊರತೆ ಆಗದು. ಅನುದಾನವೂ ಕಡಿತಗೊಳ್ಳದು.
– ಸುರೇಶ್‌ ಅಂಗಡಿ,
ರೈಲ್ವೇ ಖಾತೆ ರಾಜ್ಯ ಸಚಿವ

-ವಿಜಯಕುಮಾರ್‌ ಚಂದರಗಿ

ಟಾಪ್ ನ್ಯೂಸ್

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-asaasa

250 km per hour; ಶೀಘ್ರದಲ್ಲೇ ಬುಲೆಟ್‌ ರೈಲಿನಲ್ಲೂ ಆತ್ಮನಿರ್ಭರತೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

Siddaramaiah ಸರಕಾರದಲ್ಲಿ ಹಿಂದೂಗಳ ರಕ್ತಕ್ಕೆ ಬೆಲೆ ಇಲ್ಲ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Congress ಪಡೆದ ಬಾಂಡ್‌ ಸುಲಿಗೆ ಅಲ್ಲವೇ: ಅಮಿತ್‌ ಶಾ ಪ್ರಶ್ನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.