ವಯೋ ವೃದ್ಧರ ಮೇಲೆ ಕೋವಿಡ್ 19 ವೈರಸ್‌ ಕರಿನೆರಳು

ರಾಜ್ಯದಲ್ಲಿ 52 ಮಂದಿ ವೃದ್ಧರಿಗೆ ಸೋಂಕು ; ಮೃತಪಟ್ಟ 12 ಮಂದಿಯೂ ವೃದ್ಧರೇ

Team Udayavani, Apr 16, 2020, 6:30 AM IST

ವಯೋ ವೃದ್ಧರ ಮೇಲೆ ಕೋವಿಡ್ 19 ವೈರಸ್‌ ಕರಿನೆರಳು

ಸಾಂದರ್ಭಿಕ ಚಿತ್ರ.

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ 19 ವೈರಸ್‌ ಕರಿನೆರಳು ವಯೋವೃದ್ಧರ ಮೇಲೆ ಹೆಚ್ಚು ಬಿದ್ದಿದೆ. ಇಲ್ಲಿಯವರೆಗೆ 52 ಮಂದಿ ವೃದ್ಧರು ಸೋಂಕಿತರಾಗಿದ್ದು, ಅವರಲ್ಲಿ 12 ಮಂದಿ ಮೃತಪಟ್ಟಿದ್ದು, ಐವರು ಗುಣಮುಖರಾಗಿ ಮನೆಗೆ ಹಿಂದಿರುಗಿದ್ದಾರೆ.

ಕೋವಿಡ್ 19 ವೈರಸ್‌ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಅಂತೆಯೇ ಸಾಕಷ್ಟು ಮಂದಿ ಗುಣಮುಖರಾಗಿ ಹೊರಬರುತ್ತಿದ್ದಾರೆ. ಆದರೆ ಸೋಂಕು ತಗಲಿಸಿಕೊಂಡು 60 ವರ್ಷ ಪ್ರಾಯ ಮೇಲ್ಪಟ್ಟ 52 ಮಂದಿಯಲ್ಲಿ 5 ಮಂದಿ ಗುಣಮುಖರಾಗಿ ಮನೆಗೆ ಸೇರಿದ್ದಾರೆ. ಬಾಕಿ 35 ಮಂದಿ ಆಸ್ಪತ್ರೆಯಲ್ಲಿ ಇಂದಿಗೂ ಚಿಕಿತ್ಸೆ ಪಡೆ ಯುತ್ತಿದ್ದಾರೆ. ಇತ್ತೀಚೆಗೆ ತೀವ್ರ ಉಸಿರಾಟ ಸಮಸ್ಯೆಯಿಂದ ಬಳಲುತ್ತಿರುವ ಹಿರಿಯರಲ್ಲೂ ಕೋವಿಡ್ 19 ಸೋಂಕು ದೃಢಪಡುತ್ತಿದ್ದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.

ಇಲ್ಲಿಯವರೆಗೂ ಕಲಬುರಗಿಯಲ್ಲಿ 76 ವರ್ಷ, 55 ವರ್ಷ, 65 ವರ್ಷ ಪ್ರಾಯದ ಮೂವರು, ಬೆಂಗಳೂರಿನಲ್ಲಿ 76 ಹಾಗೂ 65 ವರ್ಷ ಪ್ರಾಯದ ಇಬ್ಬರು, ತುಮಕೂರಿನಲ್ಲಿ 60 ವರ್ಷ ಪ್ರಾಯದ ವೃದ್ಧ, ಚಿಕ್ಕಬಳ್ಳಾಪುರದಲ್ಲಿ 70 ವರ್ಷ ಹಾಗೂ 65 ವರ್ಷ, ಗದಗದಲ್ಲಿ 80 ವರ್ಷ ಪ್ರಾಯದ ವೃದ್ಧೆ, ವಿಜಯಪುರದಲ್ಲಿ 69 ವರ್ಷ, ಬಾಗಲಕೋಟೆಯಲ್ಲಿ 75 ವರ್ಷ, ಬೆಳಗಾವಿಯಲ್ಲಿ 80 ವರ್ಷ ಪ್ರಾಯದ ವೃದ್ಧೆ ಕೋವಿಡ್ 19ದಿಂದ ಸಾವಿಗೀಡಾಗಿದ್ದಾರೆ.

ಏಳು ಪ್ರಕರಣಗಳು ತನಿಖೆಯಲ್ಲಿ
ಸಾವಿಗೀಡಾದ 12 ಮಂದಿ ವೃದ್ಧರಲ್ಲಿ ಇಬ್ಬರು ವಿದೇಶ ಪ್ರಯಾಣ ಹಿನ್ನೆಲೆ, ಒಬ್ಬರು ದಿಲ್ಲಿ ಪ್ರಯಾಣ ಹಿನ್ನೆಲೆ ಹೊಂದಿದ್ದಾರೆ. ಬಾಕಿ 9 ಮಂದಿ ಯಾವುದೇ ವಿದೇಶ ಪ್ರಯಾಣ ಮಾಡದಿದ್ದರೂ ಕೋವಿಡ್ 19 ಸೋಂಕಿತರಾಗಿದ್ದಾರೆ. ಅಚ್ಚರಿ ಎಂದರೆ ಇಂದಿಗೂ ಬಾಗಲಕೋಟೆ, ಕಲಬುರಗಿ, ಗದಗ, ವಿಜಯಪುರ, ಚಿಕ್ಕಬಳ್ಳಾಪುರದಲ್ಲಿ ಸಾವಿಗೀಡಾದ ತಲಾ ಒಬ್ಬ ವೃದ್ಧರು ಹಾಗೂ ಬೆಂಗಳೂರಿನ ಇಬ್ಬರು ವೃದ್ಧರು ಸಹಿತ ಏಳು ಮಂದಿ ವೃದ್ಧರಿಗೆ ಸೋಂಕು ಯಾವಾಗ, ಯಾರಿಂದ ತಗಲಿತು ಎಂಬುದು ಪತ್ತೆಯಾಗಿಲ್ಲ. ಇಂದಿಗೂ ಈ ಪ್ರಕರಣಗಳನ್ನು ಆರೋಗ್ಯ ಇಲಾಖೆ ತನಿಖೆ ನಡೆಸುತ್ತಲಿದೆ. ಇನ್ನು ಈ ಮೃತರಿಂದ 10ಕ್ಕೂ ಹೆಚ್ಚು ಮಂದಿಗೆ ಸೋಂಕು ತಗಲಿದೆ.

ಏಳು ಮಂದಿ ವೃದ್ಧರದ್ದು ಮೃತಪಟ್ಟ ಬಳಿಕ ವರದಿ
12 ಮಂದಿಯಲ್ಲಿ ಏಳು ಮಂದಿಗೆ ಕೋವಿಡ್ 19 ಸೋಂಕು ತಗಲಿ ಅವರು ಮೃತರಾದ ಬಳಿಕ ವರದಿ ಬಂದಿದೆ. ಕೆಲವೆಡೆ ಪ್ರಯೋಗಾಲಯ ಕೊರತೆ ಹಾಗೂ ಸೋಂಕು ಪರೀಕ್ಷೆಗೆ ನಿರ್ಲಕ್ಷ್ಯ ಮಾಡಿದ ಹಿನ್ನೆಲೆಯಲ್ಲಿ ಹೀಗಾ ಗಿ ದೆ. ಕಲಬುರಗಿಯಲ್ಲಿ ಇಬ್ಬರು, ಚಿಕ್ಕಬಳ್ಳಾಪುರದ ವೃದ್ಧೆ, ಬೆಂಗಳೂರಿನ ಇಬ್ಬರು ವೃದ್ಧರು, ಬೆಳಗಾವಿಯ ವೃದ್ಧೆ ಹಾಗೂ ತುಮಕೂರಿನ ವೃದ್ಧ ಸಾವಿಗೀಡಾದ ಬಳಿಕವೇ ಸೋಂಕು ಪರೀಕ್ಷಾ ವರದಿ ಬಂದು ಸೋಂಕು ತಗಲಿರುವುದು ದೃಢಪಟ್ಟಿತ್ತು.

ಕಾಳಜಿ ಆವಶ್ಯಕ
ಆಸ್ಪತ್ರೆಗೆ ಸೋಂಕು ಅಂತಿಮ ಹಂತ ತಲುಪಿದಾಗ ಬರುವುದು ಹಾಗೂ ಆರೋಗ್ಯ ಕುರಿತ ನಿರ್ಲಕ್ಷ್ಯದಿಂದ ವಯೋವೃದ್ಧರಲ್ಲಿ ಸೋಂಕು – ಸಾವು ಹೆಚ್ಚಾಗುತ್ತಿದೆ. ಇತರ ಕಾಯಿಲೆಗಳು ಇರುವುದರಿಂದ ಚೇತರಿಕೆ ತಡವಾಗುತ್ತಿದೆ. ಕುಟುಂಬಸ್ಥರು ಹಾಗೂ ಸ್ವತಃ ಅವರೇ ಕಾಳಜಿವಹಿಸಿ ಶೀಘ್ರ ಆಸ್ಪತ್ರೆಗೆ ಬರಬೇಕು.
– ಡಾ| ಸಿ. ನಾಗರಾಜ್‌,
ನಿರ್ದೇಶಕರು, ರಾಜೀವ್‌ ಗಾಂಧಿ ಎದೆರೋಗಗಳ ಆಸ್ಪತ್ರೆ.

ವೃದ್ಧ ರಿಗೇ ಮಾರಕ ಏಕೆ?
– ರೋಗ ನಿರೋಧಕ ಶಕ್ತಿ ಕಡಿಮೆ.
– ಓಡಾಟ ಹಾಗೂ ಎಲ್ಲರೊಟ್ಟಿಗೂ ಒಡನಾಟ ಹೆಚ್ಚು. ವೈಯಕ್ತಿಕ ಸ್ವತ್ಛತೆಗೆ ಆದ್ಯತೆ ಕಡಿಮೆ.
– ಸೋಂಕಿನ ಆರಂಭಿಕ ಲಕ್ಷಣ ಕಾಣಿಸಿ ಕೊಂಡಾಗ ನಿರ್ಲಕ್ಷ್ಯ ಮಾಡುವುದು.
– ಸೋಂಕು ಅಂತಿಮ ಹಂತ ತಲುಪಿದಾಗ ಆಸ್ಪತ್ರೆಗೆ ಕರೆತರುವುದು.
– ವಯೋಸಹಜ ಕಾಯಿಲೆಗಳು ಇದ್ದಾಗ ಕೋವಿಡ್ 19 ಸೋಂಕಿನಿಂದ ಮತ್ತಷ್ಟು ಆರೋಗ್ಯ ಹಾನಿ.

ಅಂಕಿ-ಅಂಶ
– ಕಾಲು ಭಾಗದಷ್ಟು ಜನ 50 ವರ್ಷ ಮೇಲ್ಪಟ್ಟವರು
– ರಾಜ್ಯದ ಒಟ್ಟಾರೆ ಸೋಂಕಿತರಲ್ಲಿ 50 ವರ್ಷ ಪ್ರಾಯದ ಮೇಲ್ಪಟ್ಟವರು ಶೇ. 26ರಷ್ಟು ಮಂದಿ ಇದ್ದಾರೆ. ಅಂದರೆ ಒಟ್ಟಾರೆ 279 ಸೋಂಕಿತರಲ್ಲಿ 50 ವರ್ಷ ಪ್ರಾಯ ಮೇಲ್ಪಟ್ಟವರು 73 ಮಂದಿ.
– ಮೃತರು – 12 (ವೃದ್ಧರು -10, ವೃದ್ಧೆಯರು -2)
– ಆಸ್ಪತ್ರೆಯಲ್ಲಿ ಚಿಕಿತ್ಸೆ – 35 ( ವೃದ್ಧರು -22, ವೃದ್ಧೆಯರು – 13)

– ಜಯಪ್ರಕಾಶ್‌ ಬಿರಾದಾರ್‌

ಟಾಪ್ ನ್ಯೂಸ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

19-sagara

LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.