ವಾಣಿಜ್ಯ ತೆರಿಗೆ ಆದಾಯ ಖೋತಾ : ಕೋವಿಡ್ 19 ವೈರಸ್ ಎಫೆಕ್ಟ್ ಭೀತಿ

ಅಬಕಾರಿ ಹೊರತುಪಡಿಸಿ ಉಳಿದ ಮೂರು ತೆರಿಗೆ ಮೂಲದ ಆದಾಯ ಕಡಿತ

Team Udayavani, Apr 2, 2020, 6:32 AM IST

ವಾಣಿಜ್ಯ ತೆರಿಗೆ ಆದಾಯ ಖೋತಾ : ಕೋವಿಡ್ 19 ವೈರಸ್ ಎಫೆಕ್ಟ್ ಭೀತಿ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬೆಂಗಳೂರು: ಆರ್ಥಿಕ ಶಿಸ್ತು ಪಾಲನೆ ಮೂಲಕ ಪ್ರತಿವರ್ಷ ಬಹುಪಾಲು ಗುರಿ ತಲುಪುತ್ತಿದ್ದ ವಾಣಿಜ್ಯ ತೆರಿಗೆ ಆದಾಯದಲ್ಲಿ ಕಳೆದ 2019-20ನೇ ಸಾಲಿನಲ್ಲಿ ಸುಮಾರು 3,908 ಕೋ. ರೂ. ಖೋತಾ ಉಂಟಾಗಿದೆ. ಮಾ. 31ಕ್ಕೆ ಮುಕ್ತಾಯವಾದ ಕಳೆದ ಹಣಕಾಸು ವರ್ಷದಲ್ಲಿ ಅಬಕಾರಿ ತೆರಿಗೆ ಮಾತ್ರ ನಿಗದಿತ ಗುರಿ ತಲುಪಿ ಹೆಚ್ಚುವರಿಯಾಗಿ 450 ಕೋ. ರೂ. ಆದಾಯ ಸಂಗ್ರಹಿಸಿದೆ.

ಮುದ್ರಾಂಕ ಮತ್ತು ನೋಂದಣಿ ಹಾಗೂ ಸಾರಿಗೆ ತೆರಿಗೆ ಗುರಿಯಲ್ಲಿ ಕ್ರಮವಾಗಿ 600 ಕೋ. ರೂ. ಹಾಗೂ 450 ಕೋ. ರೂ. ಕಡಿತವಾಗಿದೆ. ಕೊರೊನಾ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ಲಾಕ್‌ಡೌನ್‌ ವ್ಯವಸ್ಥೆ ಮುಂದುವರಿದರೆ ತೆರಿಗೆ ಆದಾಯದಲ್ಲಿ ಇನ್ನಷ್ಟು ಖೋತಾ ಆಗಲಿದೆ.

ಗುರಿ ತಲುಪದ ವಾಣಿಜ್ಯ ತೆರಿಗೆ
ಜಿಎಸ್‌ಟಿ ಸಂಗ್ರಹದಲ್ಲೂ ಶೇ.14ರಷ್ಟು ಪ್ರಗತಿ ಸಾಧಿಸಿರುವ ಕಾರಣ 2019-20ನೇ ಸಾಲಿನಲ್ಲೂ ನಿಗದಿತ 76,046 ಕೋ.ರೂ. ತೆರಿಗೆ ಸಂಗ್ರಹ ನಿರೀಕ್ಷೆಯಿತ್ತು. ಅದರಂತೆ ವಾಣಿಜ್ಯ ತೆರಿಗೆ ಮೂಲದಿಂದ 72,138 ಕೋ.ರೂ. ಸಂಗ್ರಹವಾಗಿದೆ.

ವಾಣಿಜ್ಯ ತೆರಿಗೆ ಗುರಿ ತಲುಪಲು ವಿಫಲವಾಗಿರುವುದಕ್ಕೆ ಕೇಂದ್ರ ಸರಕಾರದ ಪರಿಹಾರ ಮೊತ್ತ ಕಡಿತವೇ ಕಾರಣವಾಗಿರುವುದು ಮೇಲ್ನೋಟಕ್ಕೆ ಕಾಣುತ್ತದೆ. ಕಳೆದ ಸಾಲಿನಲ್ಲಿ ಜಿಎಸ್‌ಟಿ ಪರಿಹಾರವಾಗಿ ಕೇಂದ್ರ 4,500 ಕೋ. ರೂ. ನೀಡಬೇಕಿತ್ತು. ಆದರೆ ಕೊನೆ ಕ್ಷಣದವರೆಗೆ 4,500 ಕೋ. ರೂ. ಬಿಡುಗಡೆಯಾಗದ ಕಾರಣ ವಾಣಿಜ್ಯ ತೆರಿಗೆಯಡಿ ನಿಗದಿತ ಗುರಿ ತಲುಪುವಲ್ಲಿ ಹಿನ್ನಡೆಯಾಗಿದೆ.

ಅಬಕಾರಿ: ಗುರಿ ಮೀರಿದ ಸಾಧನೆ
ಅಬಕಾರಿ ತೆರಿಗೆ ಆದಾಯದಿಂದ ಕಳೆದ ಸಾಲಿನಲ್ಲಿ 20,750 ಕೋ. ರೂ. ನಿರೀಕ್ಷಿಸಲಾಗಿತ್ತು. ಕಳೆದ ಮಾ. 16ರಂದೇ ನಿಗದಿತ ಗುರಿಯಷ್ಟು ತೆರಿಗೆ ಸಂಗ್ರಹವಾಗಿದ್ದು, ಮಾ. 24ರ ವರೆಗೆ 21,400 ಕೋ. ರೂ. ಸಂಗ್ರಹವಾಗಿದ್ದು, ಆ ಮೂಲಕ ಗುರಿ ಮೀರಿದ ಸಾಧನೆ ದಾಖಲಿಸಿದೆ.


ಗುರಿ ತಲುಪುವಲ್ಲಿ ವಿಫಲ
ಮುದ್ರಾಂಕ ಮತ್ತು ನೋಂದಣಿ ಶುಲ್ಕ ಹಾಗೂ ಸಾರಿಗೆ ತೆರಿಗೆ ಮೂಲದಿಂದ ನಿಗದಿತ ಗುರಿ ತಲುಪಲು ಸಾಧ್ಯವಾಗಿಲ್ಲ. ಮುದ್ರಾಂಕ ಮತ್ತು ನೋಂದಣಿ ಶುಲ್ಕದಡಿ ನಿರೀಕ್ಷಿತ ಆದಾಯದಲ್ಲಿ 600 ಕೋ.ರೂ. ಖೋತಾ ಆಗಿದೆ. ಸಾರಿಗೆ ತೆರಿಗೆ ಮೂಲದಿಂದ ನಿಗದಿತ ಗುರಿಯಲ್ಲಿ 450 ಕೋ. ರೂ. ಸಂಗ್ರಹಿಸುವಲ್ಲಿ ಇಲಾಖೆ ವಿಫಲವಾಗಿದೆ.

1,000 ಕೋ. ರೂ. ಖೋತಾ
ಲಾಕ್‌ಡೌನ್‌ ವ್ಯವಸ್ಥೆ ಜಾರಿಯಿಂದಾಗಿ ಕಳೆದ ಸಾಲಿನಲ್ಲಿ ಮೂರೂ ತೆರಿಗೆ ಮೂಲದಿಂದ ಸುಮಾರು 1,000 ಕೋ. ರೂ. ತೆರಿಗೆ ಆದಾಯ ಖೋತಾ ಆಗಿದೆ ಎಂದು ಮೂಲಗಳು ಹೇಳಿವೆ. ಸಾಮಾನ್ಯವಾಗಿ ಆರ್ಥಿಕ ವರ್ಷದ ಕೊನೆ ಹಂತದ ಮಾರ್ಚ್‌ ತಿಂಗಳಲ್ಲಿ ಆಸ್ತಿ ನೋಂದಣಿ ಪ್ರಕ್ರಿಯೆ ಹೆಚ್ಚಾಗಿರುತ್ತದೆ.

ಆದರೆ ಮಾ.15ರಿಂದ ಆಯ್ದ ವಾಣಿಜ್ಯ ಚಟುವಟಿಕೆಗಳು ಸ್ಥಗಿತಗೊಂಡಿದ್ದು ಬಳಿಕ ಲಾಕ್‌ಡೌನ್‌ ವ್ಯವಸ್ಥೆಯಿಂದಾಗಿ ಆಸ್ತಿ ನೋಂದಣಿ ಸ್ಥಗಿತಗೊಂಡಿದ್ದು, ಸುಮಾರು 400 ಕೋ. ರೂ. ಆದಾಯ ಕೈತಪ್ಪಿದಂತಾಗಿದೆ ಎಂದು ಉನ್ನತ ಮೂಲಗಳು ಹೇಳಿವೆ.

ಮಾ. 24ರ ಮಧ್ಯರಾತ್ರಿಯಿಂದ ಮದ್ಯ ಮಾರಾಟ ಸಂಪೂರ್ಣ ಸ್ಥಗಿತಗೊಳಿಸಿದ ಹಿನ್ನೆಲೆಯಲ್ಲಿ ಸುಮಾರು 300 ಕೋ. ರೂ. ಆದಾಯ ಖೋತಾ ಆಗಿದೆ ಎಂದು ಅಬಕಾರಿ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬಿಎಸ್‌-4 ಮಾದರಿಯ ವಾಹನ ಮಾರಾಟ ಹೆಚ್ಚಾದರೆ ಉತ್ತಮ ತೆರಿಗೆ ಆದಾಯ ಸಂಗ್ರಹವಾಗುವ ನಿರೀಕ್ಷೆ ಇತ್ತಾದರೂ ಅದೂ ಸಾಧ್ಯವಾಗಿಲ್ಲ ಎನ್ನುತ್ತವೆ ಸಾರಿಗೆ ಇಲಾಖೆ ಮೂಲಗಳು.

– ಎಂ. ಕೀರ್ತಿಪ್ರಸಾದ್‌

ಟಾಪ್ ನ್ಯೂಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Election Campaign: ಕಾಂಗ್ರೆಸ್‌ನಲ್ಲಿಲ್ಲ ಮೋದಿಗೆ ಸಮಾನ ನಾಯಕತ್ವ: ಗಾಯಿತ್ರಿ ಸಿದ್ದೇಶ್ವರ

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14

UV Fusion: ಅವನೊಂದಿಗೆ ನಡೆವಾಸೆ

13-fusion

UV Fusion: ಏರಿಯಾ 51

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

1-asasa

Delhi ; ಬಿಕಿನಿಯಲ್ಲೇ ಬಸ್ ಹತ್ತಿದ ಮಹಿಳೆ; ವಿಡಿಯೋ ವೈರಲ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.