ಹಳ್ಳಿಗಳಲ್ಲಿ ಕೋವಿಡ್‌ ಕೇರ್‌ ಸೆಂಟರ್‌ ಸ್ವಾಗತಾರ್ಹ


Team Udayavani, May 17, 2021, 6:45 AM IST

ಹಳ್ಳಿಗಳಲ್ಲಿ ಕೋವಿಡ್‌ ಕೇರ್‌ ಸೆಂಟರ್‌ ಸ್ವಾಗತಾರ್ಹ

ಕೊರೊನಾ ಗ್ರಾಮೀಣ ಭಾಗದಲ್ಲಿ ವ್ಯಾಪಕವಾಗಿ ಹಬ್ಬಿರುವುದು ಸರಕಾರಕ್ಕೆ ದೊಡ್ಡ ತಲೆನೋವು ಹಾಗೂ ಸವಾಲಾಗಿ ಪರಿಣಮಿಸಿದೆ. ಗ್ರಾಮೀಣ ಭಾಗದಲ್ಲಿ ನಗರ ಪ್ರದೇಶಗಳಂತೆ ತ್ವರಿತ ತಪಾಸಣೆ, ಚಿಕಿತ್ಸೆ ವ್ಯವಸ್ಥೆ ಹಾಗೂ ಶೇ.95ರಷ್ಟು ಕಡೆ ಹೋಂ ಐಸೊಲೇಶನ್‌ಗೂ ವ್ಯವಸ್ಥೆ ಇಲ್ಲದಿರುವುದು ಆತಂಕಕ್ಕೆ ಕಾರಣವಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರು ಪದೇ ಪದೆ ಗ್ರಾಮೀಣ ಭಾಗಕ್ಕೆ ಕೊರೊನಾ ಹಬ್ಬದಂತೆ ನೋಡಿಕೊಳ್ಳಿ ಎಂದು ಎಚ್ಚರಿಕೆ ನೀಡುತ್ತಲೇ ಇದ್ದಾರೆ. ಆದರೂ ಕರ್ನಾಟಕದಲ್ಲಿ ಕೊರೊನಾ ಗ್ರಾಮೀಣ ಭಾಗಕ್ಕೆ ಹಬ್ಬಿದೆ. ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಲೇ ಇದೆ.

ಹೀಗಾಗಿ ರಾಜ್ಯ ಸರಕಾರ ಗ್ರಾಮೀಣ ಭಾಗದಲ್ಲಿ ಕೊರೊನಾ ಸೋಂಕಿತರು, ನಗರ ಮತ್ತು ಪಟ್ಟಣ ಪ್ರದೇಶದ ಕೊಳಗೇರಿಗಳಲ್ಲಿನ ಸೋಂಕಿತರು ಹೋಂ ಐಸೊಲೇಶನ್‌ನಲ್ಲಿ ಇರದಂತೆ ನೋಡಿಕೊಳ್ಳಲು ಮುಂದಾಗಿ ಕೋವಿಡ್‌ ಕೇರ್‌ ಸೆಂಟರ್‌ಗಳನ್ನು ಸ್ಥಾಪಿಸಿ ಅಲ್ಲಿಗೆ ಸ್ಥಳಾಂತರಿಸಿ ಚಿಕಿತ್ಸೆ ನೀಡುವ ಕೆಲಸಕ್ಕೆ ಮುಂದಾಗಿದೆ. ಈ ಕೆಲಸ ಮುಂಚೆಯೇ ಆಗಬೇಕಿತ್ತು. ನಿಧಾನವಾದರೂ ಪರಿಸ್ಥಿತಿಯ ತೀವ್ರತೆ ಅರಿತು ಸರಕಾರ ಅಗತ್ಯ ಹಾಗೂ ಅನಿವಾರ್ಯತೆಯ ನಿರ್ಧಾರ ಕೈಗೊಂಡಿದೆ.

ಆದರೆ ಗ್ರಾಮೀಣ ಭಾಗ ಹಾಗೂ ನಗರ ಪಟ್ಟಣದ ಕೊಳೆಗೇರಿ ಪ್ರದೇಶ ಗಳಲ್ಲಿ ಕೋವಿಡ್‌ ಕೇರ್‌ ಸೆಂಟರ್‌ ಸ್ಥಾಪನೆ ಹಾಗೂ ಅದಕ್ಕೆ ಬೇಕಾದ ಮೂಲಸೌಕರ್ಯ ಕಲ್ಪಿಸುವುದು ಹೇಳಿದಷ್ಟು ಅಥವಾ ಅಂದುಕೊಂಡಷ್ಟು ಸುಲಭವಲ್ಲ. ಮನೆಯಿಂದ ಕಿ.ಲೋ. ಮೀಟರ್‌ಗಟ್ಟಲೆ ದೂರ ಇದ್ದರೆ ಕೊರೊನಾ ಕೇರ್‌ ಸೆಂಟರ್‌ಗೆ ದಾಖಲಾಗಲು ಜನ ಒಪ್ಪುವುದಿಲ್ಲ, ಅವರವರ ಮನೆಯ ಹತ್ತಿರವೇ ಕೊರೊನಾ ಕೇರ್‌ ಸೆಂಟರ್‌ ಸ್ಥಾಪಿಸಲು ಜಾಗದ ಕೊರತೆ ಇದೆ. ಜತೆಗೆ ವೈದ್ಯಕೀಯ ಸಿಬಂದಿ ಮತ್ತು ಮೂಲಸೌಕರ್ಯ ಒದಗಿಸುವುದು ಸವಾಲಿನ ಕೆಲಸ. ಕೊರೊನಾ ಕಾರ್ಯಪಡೆ ಪರಿಣಿತರ ಸಲಹೆಯಂತೆ ಎಲ್ಲ ಸಾಧಕ ಬಾಧಕ ಯೋಚಿ ಸಿಯೇ ಪ್ರಮುಖವಾಗಿ ಗ್ರಾಮೀಣ ಭಾಗದಲ್ಲಿ ನ ಸೋಂಕಿ­ತರಿಗೆ ಕೋವಿಡ್‌ ಕೇರ್‌ ಸೆಂಟರ್‌ ಸ್ಥಾಪಿಸುವ ಕಾರ್ಯಕ್ಕೆ ಮುಂದಾಗಿದೆ. ಆ ನಿಟ್ಟಿನಲ್ಲಿ ಕಾರ್ಯೋ ನ್ಮುಖವಾಗಿರುವುದು ಸ್ವಾಗತಾರ್ಹ.

ಮೂರನೇ ಅಲೆ ಮಕ್ಕಳನ್ನು ಬಾಧಿಸಲಿದೆ ಎಂಬ ವರದಿಗಳ ಹಿನ್ನೆಲೆ ಯಲ್ಲೂ ಇದು ಮಹತ್ವ ಪಡೆದಿದೆ. ಎರಡನೇ ಅಲೆ ಬಗ್ಗೆ ಸ್ವಲ್ಪ ಮಟ್ಟಿಗೆ ಮೈ ಮರೆತ ಸರಕಾರ ಮೂರನೇ ಅಲೆ ವಿಚಾರದಲ್ಲಿ ಈಗಿನಿಂದಲೇ ಎಚ್ಚೆತ್ತು ಕೊಂಡು ಅಗತ್ಯ ಸಿದ್ಧತೆ ಮಾಡಿಕೊಳ್ಳುತ್ತಿದೆ.

ಗ್ರಾಮೀಣ ಭಾಗದಲ್ಲಿ ಸರಕಾರ ಈಗ ಯೋಚಿಸಿರುವಂತೆ ತತ್‌ಕ್ಷಣವೇ ಕೋವಿಡ್‌ ಕೇರ್‌ ಸೆಂಟರ್‌ ಸ್ಥಾಪನೆ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಪಂಚಾ ಯತ್‌, ನಗರ ಸ್ಥಳೀಯ ಸಂಸ್ಥೆಗಳ ಸಹಯೋಗದಲ್ಲಿ ಶಾಶ್ವತ ವ್ಯವಸ್ಥೆ ಮಾಡ ಬೇಕು. ಇದಕ್ಕಾಗಿ ವಿಶೇಷ ಅನುದಾನ ಸಹ ನಿಗದಿ ಮಾಡಬೇಕು. ವೈದ್ಯಕೀಯ ಸಿಬಂದಿ ಮತ್ತು ಸೌಕರ್ಯದ ಬಗ್ಗೆಯೂ ಗಮನ ಹರಿಸಬೇಕು. ಕೇವಲ ಕೋವಿಡ್‌ ಕೇರ್‌ ಸೆಂಟರ್‌ ಮಾಡಿ ಸವಲತ್ತು ಇಲ್ಲದಿದ್ದರೂ ಉದ್ದೇಶ ಸಾಕಾರವಾಗದು. ಕೊರೊನಾ ಸೋಂಕಿತರು ಮೊದಲಿಗೆ ಆರೈಕೆ ಕೇಂದ್ರದಲ್ಲಿ ದಾಖಲಾದ ಅನಂತರವಷ್ಟೇ ಆಸ್ಪತ್ರೆಯಲ್ಲಿ ಹಾಸಿಗೆ ಅಥವಾ ಇತರ ಚಿಕಿತ್ಸೆ ಬೇಕಾ ಬೇಡವಾ ಎಂಬ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸರಕಾರ ಹೇಳಿರುವುದು ಒಂದು ರೀತಿಯಲ್ಲಿ ಅಗತ್ಯ ಇಲ್ಲದವರೂ ಹಾಸಿಗೆ ಪಡೆದು ತುರ್ತು ಇರುವವರು ಹಾಸಿಗೆ ಸಿಗದೆ ಸಾವನ್ನಪ್ಪುವ ಪ್ರಕರಣ ತಡೆಗಟ್ಟಲು ಸಹಕಾರಿಯಾಗಿದೆ.

ಟಾಪ್ ನ್ಯೂಸ್

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-ewqwqewq

LS Election; ಅತೀ ದೊಡ್ಡ ಹಂತದಲ್ಲಿ 62.37% ಮತದಾನ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.