ದಾವಣಗೆರೆ ಜಿಲ್ಲೆಯಲ್ಲಿ 309 ಮಂದಿ ಗುಣಮುಖ : 174 ಹೊಸ ಪ್ರಕರಣ ಪತ್ತೆ


Team Udayavani, Jun 18, 2021, 8:43 PM IST

ದಾವಣಗೆರೆ ಜಿಲ್ಲೆಯಲ್ಲಿ 309 ಮಂದಿ ಗುಣಮುಖ : 174 ಹೊಸ ಪ್ರಕರಣ ಪತ್ತೆ

ದಾವಣಗೆರೆ: ಜಿಲ್ಲೆಯಲ್ಲಿ ಶುಕ್ರವಾರ ಕೊರೊನಾದಿಂದ 309 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಸೋಂಕಿತರಗಿಂತಲೂ ಗುಣಮುಖರಾದವರ ಸಂಖ್ಯೆ ಹೆಚ್ಚಾಗಿರುವುದು ವಿಶೇಷ.

ದಾವಣಗೆರೆ ನಗರ ಮತ್ತು ತಾಲೂಕಿನ ಇತರೆ ಭಾಗದ 174 , ಹರಿಹರದಲ್ಲಿ 28, ಜಗಳೂರಿನಲ್ಲಿ 17, ಚನ್ನಗಿರಿಯಲ್ಲಿ 42, ಹೊನ್ನಾಳಿಯಲ್ಲಿ 36 ಹಾಗೂ ಹೊರ ಜಿಲ್ಲೆಯ 12 ಜನರು ಒಳಗೊಂಡಂತೆ 309 ಸೋಂಕಿತರು ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿ ಶುಕ್ರವಾರ 174 ಜನರಲ್ಲಿ ಸೋಂಕು ಪತ್ತೆಯಾಗಿದೆ. ದಾವಣಗೆರೆ ಮತ್ತು ಸುತ್ತಮುತ್ತಲಿನ ಗ್ರಾಮದಲ್ಲಿ 93 ಪ್ರಕರಣ ಪತ್ತೆಯಾಗಿವೆ. ಹರಿಹರದಲ್ಲಿ 13, ಜಗಳೂರಿನಲ್ಲಿ 9 , ಚನ್ನಗಿರಿಯಲ್ಲಿ 31, ಹೊನ್ನಾಳಿಯಲ್ಲಿ 20 ಹಾಗೂ ಹೊರ ಜಿಲ್ಲೆಯ 8 ಜನರು ಒಳಗೊಂಡಂತೆ 174 ಜನರಲ್ಲಿ ಮಹಾಮಾರಿ ಕೊರೊನಾ ಪತ್ತೆಯಾಗಿದೆ.

ಕಳೆದ ವರ್ಷ ಕೊರೊನಾ ಪ್ರಾರಂಭದಿಂದ ದಾವಣಗೆರೆ ತಾಲೂಕಿನಲ್ಲಿ 25517, ಹರಿಹರದಲ್ಲಿ 6641 , ಜಗಳೂರಿನಲ್ಲಿ 2591, ಚನ್ನಗಿರಿಯಲ್ಲಿ 5962, ಹೊನ್ನಾಳಿಯಲ್ಲಿ 6067, ಹೊರ ಜಿಲ್ಲೆಯ 1424 ಜನರು ಸೇರಿದಂತೆ ಈವರೆಗೆ ಒಟ್ಟು 48,202 ಜನರು ಸೋಂಕಿಗೆ ಒಳಗಾಗಿದ್ದಾರೆ.

ಕೊರೊನಾದಿಂದ ಈವರೆಗೆ ದಾವಣಗೆರೆ ತಾಲೂಕಿನಲ್ಲಿ 23937, ಹರಿಹರದಲ್ಲಿ 6318, ಜಗಳೂರಿನಲ್ಲಿ 2529, ಚನ್ನಗಿರಿಯಲ್ಲಿ 5742, ಹೊನ್ನಾಳಿಯಲ್ಲಿ 5495, ಹೊರ ಜಿಲ್ಲೆಯ 1121 ಜನರು ಸೇರಿದಂತೆ 45,142 ಸೋಂಕಿತರು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ 2584 ಸಕ್ರಿಯ ಪ್ರಕರಣಗಳಿವೆ.

ಇದನ್ನೂ ಓದಿ :ದ.ಕ. ಜಿಲ್ಲೆಯಲ್ಲಿ 1006 ಮಂದಿಗೆ ಕೋವಿಡ್ ದೃಢ; ದಾಖಲೆಯ 15 ಮಂದಿ ಸಾವು

ಜಿಲ್ಲೆಯಲ್ಲಿ ಕೊರೊನಾದಿಂದ ಹತ್ತು ಜನರು ಮೃತಪಟ್ಟಿದ್ದಾರೆ. ದಾವಣಗೆರೆ ತಾಲೂಕಿನ ಅಣಬೇರು ಗ್ರಾಮದ 56 ವರ್ಷದ ವೃದ್ಧೆ, ಕೊಳೇನಹಳ್ಳಿ ಗ್ರಾಮದ 38 ವರ್ಷದ ವ್ಯಕ್ತಿ, ದೊಡ್ಡಬಾತಿಯ 62 ವರ್ಷದ ವೃದ್ಧ, ನೇರ್‍ಲಿಗೆ ಗ್ರಾಮದ 47 ವರ್ಷದ ಮಹಿಳೆ, ಆಲೂರು ಗ್ರಾಮದ 60 ವರ್ಷದ ವೃದ್ಧ, ಗೋಪನಾಳ್ ಗ್ರಾಮದ 30 ವರ್ಷದ ಮಹಿಳೆ, ಆನಗೋಡು ಗ್ರಾಮದ 63 ವರ್ಷದ ವೃದ್ಧೆ, ದಾವಣಗೆರೆಯ ಸರಸ್ವತಿ ಬಡಾವಣೆಯ 81 ವರ್ಷದ ವೃದ್ಧೆ, ಚನ್ನಗಿರಿ ತಾಲೂಕಿನ ಹಿರೇಕೋಗಲೂರು ಗ್ರಾಮದ 60 ವರ್ಷದ ವೃದ್ಧೆ, ಹೊನ್ನಾಳಿ ತಾಲೂಕಿನ ರಾಂಪುರ ಗ್ರಾಮದ 58 ವರ್ಷದ ವ್ಯಕ್ತಿ ಮೃತಪಟ್ಟವರು. ಜಿಲ್ಲೆಯಲ್ಲಿ ಈವರೆಗೆ ಕೊರೊನಾದಿಂದ ಜಿಲ್ಲೆಯಲ್ಲಿ 476 ಜನರು ಸಾವನ್ನಪ್ಪಿದ್ದಂತಾಗಿದೆ.

ಜಿಲ್ಲೆಯ ವಿವಿಧ ಆಸ್ಪತ್ರೆಯಲ್ಲಿ 99 ಸೋಂಕಿತರು ಸಾಮಾನ್ಯ, 475 ಸೋಂಕಿತರು ಆಕ್ಸಿಜನ್, 18 ಸೋಂಕಿತರು ಎನ್‌ಐವಿ, 48 ಸೋಂಕಿತರು ವೆಂಟಿಲೇಟರ್ 28 ಸೋಂಕಿತರು ವೆಂಟಿಲೇಟರ್ ರಹಿತ, 419 ಸೋಂಕಿತರು ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ. 530 ಸೋಂಕಿತರು ಕೋವಿಡ್ ಕೇರ್ ಸೆಂಟರ್‌ನಲ್ಲಿ ಇದ್ದಾರೆ.

ಶುಕ್ರವಾರ ಜಿಲ್ಲೆಯಲ್ಲಿ ಯಾವುದೇ ಬ್ಯ್ಲಾಕ್ ಫಂಗಸ್ ಪ್ರಕರಣ ಕಂಡು ಬಂದಿಲ್ಲ. ಈವರೆಗೆ ಜಿಲ್ಲೆಯಲ್ಲಿ 91 ಜನರಲ್ಲಿ ಬ್ಯ್ಲಾಕ್ ಫಂಗಸ್ ಕಂಡು ಬಂದಿದ್ದು, ಜಿಲ್ಲಾ ಆಸ್ಪತ್ರೆಯಲ್ಲಿ 23, ಎಸ್.ಎಸ್. ಹೈಟೆಕ್ ಆಸ್ಪತ್ರೆಯಲ್ಲಿ13, ಬಾಪೂಜಿ ಆಸ್ಪತ್ರೆಯಲ್ಲಿ ಒಬ್ಬರು ಒಳಗೊಂಡಂತೆ 37 ಜನರು ಗುಣಮುಖರಾಗಿದ್ದಾರೆ. ಜಿಲ್ಲಾ ಆyಸ್ಪತ್ರೆಯಲ್ಲಿ 31, ಎಸ್.ಎಸ್. ಹೈಟೆಕ್‌ನಲ್ಲಿ 21, ಬಾಪೂಜಿ ಮತ್ತು ಕಾಲೇಜ್ ಆಫ್ ಡೆಂಟಲ್ ಸೈನ್ಸೆಸ್‌ನಲ್ಲಿ ತಲಾ ಒಬ್ಬರು ಒಳಗೊಂಡಂತೆ 54 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.