
ಔಷಧಿ ಸಿಗದೇ ಸುಳೇಭಾವಿಯಲ್ಲಿ ಕೋವಿಡ್ ಸೋಂಕಿತ ಯುವಕನ ತಾಯಿಯ ಪರದಾಟ
Team Udayavani, Jul 22, 2020, 9:51 PM IST

ಬೆಳಗಾವಿ: ತಾಲೂಕಿನ ಸುಳೇಭಾವಿ ಗ್ರಾಮದ ಯುವಕನೋರ್ವನಿಗೆ ಕೋವಿಡ್ ಪಾಸಿಟಿವ್ ಆಗಿದ್ದು, ಇಡೀ ಓಣಿ ಸೀಲ್ ಡೌನ್ ಮಾಡಲಾಗಿದೆ. ಆದರೆ ಮಧುಮೇಹದಿಂದ ಬಳಲುತ್ತಿರುವ ಸೋಂಕಿತನ ತಾಯಿ ಔಷಧಿ ಇಲ್ಲದೇ ಪರದಾಡುತ್ತಿದ್ದಾರೆ ಎಂದು ಸೋಂಕಿತ ಯುವಕ ಆರೋಪಿಸಿದ್ದಾರೆ.
ಸುಳೇಭಾವಿ ಗ್ರಾಮದ 32 ವರ್ಷದ ಯುವಕನಿಗೆ ಕೋವಿಡ್ ಸೋಂಕು ತಗುಲಿದೆ. ಈ ಹಿನ್ನೆಲೆಯಲ್ಲಿ ಯುವಕನನ್ನು ಕೂಡಲೇ ಜಿಲ್ಲಾಸ್ಪತ್ರೆಯ ಕೋವಿಡ್-೧೯ ವಾರ್ಡ್ ಗೆ ದಾಖಲಿಸಲಾಗಿದೆ. ಮನೆಯಲ್ಲಿಯೇ ತಾಯಿ ಒಬ್ಬರೇ ಇದ್ದು, ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದಾರೆ. ಆದರೆ ಅಗತ್ಯ ಇರುವ ಔಷಧಿ ಇಲ್ಲದೇ ತಾಯಿ ತೊಂದರೆಗೀಡಾಗಿದ್ದಾರೆ.
ಗ್ರಾಮದ ಹೊಸಕೇರಿ ಗಲ್ಲಿ ಸಂಫೂರ್ಣವಾಗಿ ಸೀಲ್ ಡೌನ್ ಮಾಡಿದ್ದರಿಂದ ಮನೆಯೊಳಗೆ ಯಾರೂ ಹೋಗದ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಔಷಧಿ ಹಾಗೂ ಅಗತ್ಯ ಸಾಮಗ್ರಿಗಳು ಇಲ್ಲದೇ ತಾಯಿ ತೊಂದರೆ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಗ್ರಾಮ ಪಂಚಾಯಿತಿ ಗಮನಕ್ಕೆ ತಂದರೂ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಯುವಕ ಆರೋಪಿಸಿದ್ದಾನೆ.
ಸಂಬಂಧಿಸಿದ ಸುಳೇಭಾವಿ ಪಿಡಿಒ ಅವರ ಗಮನಕ್ಕೆ ಸೋಂಕಿತ ಯುವಕ ಕರೆ ಮಾಡಿದ್ದರೂ ಕರೆ ಸ್ವೀಕರಿಸುತ್ತಿಲ್ಲ. ಸದ್ಯ ಮೊಬೈಲ್ ಸ್ವಿಚ್ ಆಪ್ ಆಗಿದ್ದರಿಂದ ತಾಯಿಗೆ ದಿಕ್ಕು ತೋಚದಂತಾಗಿದೆ ಎಂದು ಯುವಕ ತನ್ನ ಸ್ನೇಹಿತರ ಎದುರು ಮೊಬೈಲ್ ಮೂಲಕ ಮಾತನಾಡಿ ಅಳಲು ತೋಡಿಕೊಂಡಿದ್ದಾನೆ.
ಯುವಕನ ತಾಯಿಗೆ ಅಗತ್ಯ ಸೌಲಭ್ಯ ಹಾಗೂ ಔಷಧಿಗಳನ್ನು ನೀಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BMTC ಯಲ್ಲಿ ಭಾರಿ ವಂಚನೆ : ಮುಖ್ಯ ಟ್ರಾಫಿಕ್ ಮ್ಯಾನೇಜರ್ ಬಂಧನ

Mysore: ಕರ್ನಾಟಕದಲ್ಲಿ ರಾಕ್ಷಸರ ರಾಜ್ಯ ಆಡಳಿತಕ್ಕೆ ಬಂದಿದೆ; ಪ್ರತಾಪ್ ಸಿಂಹ ವಾಗ್ದಾಳಿ

Belagavi: ಬಾಲಕಾರ್ಮಿಕರ ರಕ್ಷಣೆಗೆ ಟಾಸ್ಕ್ ಫೋಸ್೯ ರಚನೆ: ಸಂತೋಷ್ ಲಾಡ್

Protest: ಕಳಪೆ ಕಾಮಗಾರಿ… ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ

Shivamogga Incident: ರಾಗಿಗುಡ್ಡಕ್ಕೆ ಆತಂರಿಕ ಭದ್ರತಾ ವಿಭಾಗದ ಅಧಿಕಾರಿಗಳ ತಂಡ ಭೇಟಿ
MUST WATCH
ಹೊಸ ಸೇರ್ಪಡೆ

Delhi; ಹುಡುಕಾಟದ ನಂತರ ಆಪ್ ಸಂಸದ ಸಂಜಯ್ ಸಿಂಗ್ ಅವರನ್ನು ಬಂಧಿಸಿದ ಇಡಿ

Mumbaiಮೂರು ಪಕ್ಷಗಳ ಸರಕಾರವಿದ್ದರೂ ಬಿಜೆಪಿಯ ನೀತಿಯಲ್ಲಿ ಯಾವುದೇ ಬದಲಾವಣೆ ಇಲ್ಲ: ಫಡ್ನವೀಸ್

Asian Games :ನೀರಜ್ ಚೋಪ್ರಾಗೆ ನಿರೀಕ್ಷಿತ ಚಿನ್ನ; ಪದಕಪಟ್ಟಿಯಲ್ಲಿ ಇತಿಹಾಸ

BMTC ಯಲ್ಲಿ ಭಾರಿ ವಂಚನೆ : ಮುಖ್ಯ ಟ್ರಾಫಿಕ್ ಮ್ಯಾನೇಜರ್ ಬಂಧನ

Pollution; ಭಾರತದ ಅತ್ಯಂತ ಕಲುಷಿತ ಗಾಳಿಯಿರುವ ನಗರ ಯಾವುದು? : ವಿಶ್ಲೇಷಣೆ