ಔಷಧಿ ಸಿಗದೇ ಸುಳೇಭಾವಿಯಲ್ಲಿ ಕೋವಿಡ್ ಸೋಂಕಿತ ಯುವಕನ ತಾಯಿಯ ಪರದಾಟ
Team Udayavani, Jul 22, 2020, 9:51 PM IST
ಬೆಳಗಾವಿ: ತಾಲೂಕಿನ ಸುಳೇಭಾವಿ ಗ್ರಾಮದ ಯುವಕನೋರ್ವನಿಗೆ ಕೋವಿಡ್ ಪಾಸಿಟಿವ್ ಆಗಿದ್ದು, ಇಡೀ ಓಣಿ ಸೀಲ್ ಡೌನ್ ಮಾಡಲಾಗಿದೆ. ಆದರೆ ಮಧುಮೇಹದಿಂದ ಬಳಲುತ್ತಿರುವ ಸೋಂಕಿತನ ತಾಯಿ ಔಷಧಿ ಇಲ್ಲದೇ ಪರದಾಡುತ್ತಿದ್ದಾರೆ ಎಂದು ಸೋಂಕಿತ ಯುವಕ ಆರೋಪಿಸಿದ್ದಾರೆ.
ಸುಳೇಭಾವಿ ಗ್ರಾಮದ 32 ವರ್ಷದ ಯುವಕನಿಗೆ ಕೋವಿಡ್ ಸೋಂಕು ತಗುಲಿದೆ. ಈ ಹಿನ್ನೆಲೆಯಲ್ಲಿ ಯುವಕನನ್ನು ಕೂಡಲೇ ಜಿಲ್ಲಾಸ್ಪತ್ರೆಯ ಕೋವಿಡ್-೧೯ ವಾರ್ಡ್ ಗೆ ದಾಖಲಿಸಲಾಗಿದೆ. ಮನೆಯಲ್ಲಿಯೇ ತಾಯಿ ಒಬ್ಬರೇ ಇದ್ದು, ಮಧುಮೇಹ ಕಾಯಿಲೆಯಿಂದ ಬಳಲುತ್ತಿದ್ದಾರೆ. ಆದರೆ ಅಗತ್ಯ ಇರುವ ಔಷಧಿ ಇಲ್ಲದೇ ತಾಯಿ ತೊಂದರೆಗೀಡಾಗಿದ್ದಾರೆ.
ಗ್ರಾಮದ ಹೊಸಕೇರಿ ಗಲ್ಲಿ ಸಂಫೂರ್ಣವಾಗಿ ಸೀಲ್ ಡೌನ್ ಮಾಡಿದ್ದರಿಂದ ಮನೆಯೊಳಗೆ ಯಾರೂ ಹೋಗದ ಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಔಷಧಿ ಹಾಗೂ ಅಗತ್ಯ ಸಾಮಗ್ರಿಗಳು ಇಲ್ಲದೇ ತಾಯಿ ತೊಂದರೆ ಅನುಭವಿಸುತ್ತಿದ್ದಾರೆ. ಈ ಬಗ್ಗೆ ಗ್ರಾಮ ಪಂಚಾಯಿತಿ ಗಮನಕ್ಕೆ ತಂದರೂ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಯುವಕ ಆರೋಪಿಸಿದ್ದಾನೆ.
ಸಂಬಂಧಿಸಿದ ಸುಳೇಭಾವಿ ಪಿಡಿಒ ಅವರ ಗಮನಕ್ಕೆ ಸೋಂಕಿತ ಯುವಕ ಕರೆ ಮಾಡಿದ್ದರೂ ಕರೆ ಸ್ವೀಕರಿಸುತ್ತಿಲ್ಲ. ಸದ್ಯ ಮೊಬೈಲ್ ಸ್ವಿಚ್ ಆಪ್ ಆಗಿದ್ದರಿಂದ ತಾಯಿಗೆ ದಿಕ್ಕು ತೋಚದಂತಾಗಿದೆ ಎಂದು ಯುವಕ ತನ್ನ ಸ್ನೇಹಿತರ ಎದುರು ಮೊಬೈಲ್ ಮೂಲಕ ಮಾತನಾಡಿ ಅಳಲು ತೋಡಿಕೊಂಡಿದ್ದಾನೆ.
ಯುವಕನ ತಾಯಿಗೆ ಅಗತ್ಯ ಸೌಲಭ್ಯ ಹಾಗೂ ಔಷಧಿಗಳನ್ನು ನೀಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ