ಕೋವಿಡ್ ನಿರ್ವಹಣೆ ವ್ಯವಸ್ಥೆ ಚೇತರಿಕೆ :  ಪೂರ್ಣ ಸರಿದಾರಿಗೆ ಬರಲು ಬೇಕು ಇನ್ನಷ್ಟು ಸಮಯ


Team Udayavani, May 12, 2021, 7:20 AM IST

ಕೋವಿಡ್ ನಿರ್ವಹಣೆ ವ್ಯವಸ್ಥೆ ಚೇತರಿಕೆ :  ಪೂರ್ಣ ಸರಿದಾರಿಗೆ ಬರಲು ಬೇಕು ಇನ್ನಷ್ಟು ಸಮಯ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸ್ಥಿತಿ ದಿನೇ ದಿನೆ ಏರುತ್ತಿರುವ ಬೆನ್ನಲ್ಲೇ ಹಳಿ ತಪ್ಪಿದ್ದ ನಿರ್ವಹಣ ವ್ಯವಸ್ಥೆ ಮತ್ತೆ ಸರಿದಾರಿಗೆ ಬರುತ್ತಿದೆ. ಪಂಚ ಸಚಿವರು ನಿರ್ವಹಣೆ ಹೊತ್ತ ಮೇಲೆ ಪರಿಸ್ಥಿತಿ ಪರವಾಗಿಲ್ಲ ಎನ್ನುವ ಮಟ್ಟಕ್ಕೆ ಬಂದು ನಿಂತಿದೆ!
ವಾರದ ಹಿಂದಷ್ಟೇ ಆಮ್ಲಜನಕ ಇಲ್ಲ, ಹಾಸಿಗೆ ಸಿಗುತ್ತಿಲ್ಲ, ರೆಮಿಡಿಸಿವಿರ್‌ ದೊರಕುತ್ತಿಲ್ಲ… ಹೀಗೆ ಸಮಸ್ಯೆಗಳ ಸರಮಾಲೆ ಇತ್ತು. ಇದನ್ನು ಮನಗಂಡ ಸಿಎಂ ಯಡಿಯೂರಪ್ಪ ಅವರು ಪಂಚ ಸಚಿವರಿಗೆ ಜವಾಬ್ದಾರಿ ಹಂಚಿದ್ದರು. ಕಳೆದ ವಾರಕ್ಕೆ ಹೋಲಿಸಿದರೆ ಈಗ ಪರಿಸ್ಥಿತಿ ಸುಧಾರಿಸಿದಂತೆ ಕಾಣುತ್ತಿದೆ . ಹಳಿ ತಪ್ಪಿದ್ದ ನಿರ್ವಹಣ ವ್ಯವಸ್ಥೆ ಸರಿದಾರಿಗೆ ಬರುವ ಲಕ್ಷಣಗಳು ಕಾಣಿಸುತ್ತಿವೆ.

ಡಾ| ಅಶ್ವತ್ಥನಾರಾಯಣ ಔಷಧ ಕಂಪೆನಿಗಳ ಜತೆ ಮಾತುಕತೆ ನಡೆಸಿ ದಿನಕ್ಕೆ 20 ಸಾವಿರ ರೆಮಿಡಿಸಿವಿರ್‌ ಡೋಸ್‌ ಪೂರೈಕೆಗೆ ವ್ಯವಸ್ಥೆ ಮಾಡಿದರು. ಪೂರೈಕೆ ವಿಚಾರದಲ್ಲಿ ಕಣ್ಣಾಮುಚ್ಚಾಲೆ ಆಡುತ್ತಿದ್ದ ಕಂಪೆನಿಗಳಿಗೆ ನೋಟಿಸ್‌ ಜಾರಿ ಮಾಡಲು ಆದೇಶ ಹೊರಡಿಸಿದರು.

ಬೇಡಿಕೆ ಮತ್ತು ಪೂರೈಕೆಯಲ್ಲಿ ಪಾರದರ್ಶಕತೆಗೆ ಒತ್ತು ನೀಡಲಾಗಿದೆ. ಪ್ರಸ್ತುತ ನಿತ್ಯ 35 ಸಾವಿರ ರೆಮಿಡಿಸಿವಿರ್‌ ಡೋಸ್‌ ಬೇಕಾಗಿದ್ದು, ಕೇಂದ್ರ ಸರಕಾರವೂ ರಾಜ್ಯಕ್ಕೆ ಹಂಚಿಕೆ ಪ್ರಮಾಣ ಹೆಚ್ಚು ಮಾಡಿದೆ.
– ಡಾ| ಅಶ್ವತ್ಥನಾರಾಯಣ

ಜಗದೀಶ್‌ ಶೆಟ್ಟರ್‌ ಅವರು, ಕೇಂದ್ರಕ್ಕೆ ನಿರಂತರ ಬೇಡಿಕೆ ಸಲ್ಲಿಸಿ 850 ಮೆ. ಟನ್‌ ಆಮ್ಲಜನಕ ದೊರೆಯುವಂತೆ ನೋಡಿಕೊಂಡರು. ಪರಿಣಾಮ ಈಗ ರಾಜ್ಯಕ್ಕೆ 1,015 ಮೆ. ಟನ್‌ ಆಮ್ಲಜನಕ ಲಭ್ಯವಾಗಿದೆ. ಜಿಂದಾಲ್‌ ಕಂಪೆನಿಗೆ ಭೇಟಿ ನೀಡಿ ಅಲ್ಲಿನ ಉತ್ಪಾದನ ಸಾಮರ್ಥ್ಯವನ್ನು 500 ಮೆ. ಟನ್‌ನಿಂದ 900 ಮೆ. ಟನ್‌ಗೆ ಹೆಚ್ಚಿಸಲು ಸೂಚಿಸಿದರು.
ಹಿಂದೆ 650 ಮೆ. ಟನ್‌ ಆಮ್ಲ ಜನಕ ಲಭಿಸುತ್ತಿತ್ತು. ಕೇಂದ್ರದ ಜತೆ ನಿರಂತರ ಸಂಪರ್ಕ ಸಾಧಿಸಿ 1,015 ಮೆ. ಟನ್‌ ಸಿಗುವಂತೆ ಮಾಡಲಾಗಿದೆ.
– ಜಗದೀಶ್‌ ಶೆಟ್ಟರ್‌

ಬಸವರಾಜ ಬೊಮ್ಮಾಯಿ ಮತ್ತು ಆರ್‌. ಅಶೋಕ್‌ ಖಾಸಗಿ ಆಸ್ಪತ್ರೆಗಳ ಜತೆ ಸಭೆ ನಡೆಸಿ ಶೇ. 75ರಷ್ಟು ಹಾಸಿಗೆ ಸರಕಾರಕ್ಕೆ ನೀಡುವಂತೆ ಸೂಚಿಸಿದರು.

ಖಾಸಗಿ ವೈದ್ಯಕೀಯ ಕಾಲೇಜುಗಳ ಸಾಮಾನ್ಯ ಬೆಡ್‌ಗಳನ್ನು ಆಮ್ಲಜನಕ ಬೆಡ್‌ಗಳಾಗಿ ಪರಿವರ್ತಿಸಲು ಸರಕಾರವೇ ಶೇ. 75ರಷ್ಟು ವೆಚ್ಚ ಭರಿಸುವ ಭರವಸೆ ನೀಡಿದೆ.

ಸರಕಾರ ಶೇ. 75ರಷ್ಟು ವೆಚ್ಚ ಭರಿಸಲು ಮುಂದಾಗಿರುವುದ ರಿಂದ ಖಾಸಗಿಯವರು ಬೆಡ್‌ ನೀಡಲು ಮುಂದೆ ಬಂದಿದ್ದಾರೆ.
ಆರ್‌. ಅಶೋಕ್‌

ಅರವಿಂದ ಲಿಂಬಾವಳಿ ಅವರು ವಿವಿಧ ವಾರ್‌ ರೂಂ ಮತ್ತು ಕಾಲ್‌ ಸೆಂಟರ್‌ಗಳಿಗೆ ಭೇಟಿ ನೀಡಿ ಅಧಿಕಾರಿಗಳು, ಸಿಬ್ಬಂದಿ ಜತೆ ನಿರಂತರ ಸಭೆ ನಡೆಸಿದ್ದಾರೆ.

ಇಲಾಖೆಗಳ ನಡುವಿನ ಸಮನ್ವಯ ಕೊರತೆ ಮತ್ತು ಅಪಾರದರ್ಶಕತೆ ಪತ್ತೆ ಹಚ್ಚಿ ಕಾರ್ಯಪ್ರವೃತ್ತರಾಗಿದ್ದಾರೆ. ಪ್ರತೀ ವಾರ್ಡ್‌ನಲ್ಲಿ 50 ಜನರ ಸಮಿತಿ ರಚನೆ ಮಾಡಿದ್ದಾರೆ. ವಾರ್ಡ್‌ ಮಟ್ಟದಲ್ಲಿ ಕೊರೊನಾ ಕೇರ್‌ ಸೆಂಟರ್‌ ಸ್ಥಾಪನೆಗೂ ಕ್ರಮ ಕೈಗೊಳ್ಳಲಾಗಿದೆ.
ವಾರ್‌ ರೂಂ ನಿರ್ವಹಣೆಯಲ್ಲಿ ಸಮನ್ವಯ ಹೆಚ್ಚಿಸಿದ್ದೇನೆ.
– ಅರವಿಂದ ಲಿಂಬಾವಳಿ

39 ಸಾವಿರ ಸೋಂಕು
ರಾಜ್ಯ ದಲ್ಲಿ ಮಂಗ ಳ ವಾ ರ 39,510 ಮಂದಿಗೆ ಸೋಂಕು ದೃಢ ಪ ಟ್ಟಿದೆ. ಸಾವಿನ ಸಂಖ್ಯೆ  480ಕ್ಕೆ ಇಳಿದಿದೆ. ಮಂಗ ಳ ವಾರ 22,584 ಮಂದಿ ಗುಣ  ಹೊಂದಿ ದ್ದಾರೆ. ಬೆಂಗ ಳೂ ರಿ ನಲ್ಲಿ 15,879 ಸೋಂಕು ತಗು ಲಿದ್ದು, 259 ಮಂದಿ ಮೃತ ಪಟ್ಟಿದ್ದಾರೆ.

ಪಂಚ ಸಚಿವರು ಮಾಡಿದ್ದೇನು?
– ಒಂದು ವಾರದಿಂದ ನಿರಂತರ ಸಭೆ, ಪರಿಶೀಲನೆ
– ಕೊರೊನಾ ಪರೀಕ್ಷೆಯಿಂದ ಹಾಸಿಗೆ ಹಂಚಿಕೆ, ಆಮ್ಲಜನಕ, ರೆಮಿಡಿಸಿವಿರ್‌ ಅಗತ್ಯಗಳ ಮಾಹಿತಿ ಸುವರ್ಣ ಆರೋಗ್ಯ ಟ್ರಸ್ಟ್‌ ಪೋರ್ಟಲ್‌ಗೆ ಸೇರ್ಪಡೆ
– ಜನರಿಗೆ ಅಂಕಿ ಅಂಶ ಒಂದೆಡೆ ಸಿಗುವ ವ್ಯವಸ್ಥೆ

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.