ಸೋಂಕು ಭಾರೀ ಇಳಿಕೆ : ರಾಜ್ಯ, ದೇಶದಲ್ಲಿ ತಗ್ಗುತ್ತಿರುವ ಕೋವಿಡ್ ಅಲೆ


Team Udayavani, May 26, 2021, 7:30 AM IST

ಸೋಂಕು ಭಾರೀ ಇಳಿಕೆ : ರಾಜ್ಯ, ದೇಶದಲ್ಲಿ ತಗ್ಗುತ್ತಿರುವ ಕೋವಿಡ್ ಅಲೆ

ಬೆಂಗಳೂರು : ರಾಜ್ಯದಲ್ಲಿ ಸತತ ನಾಲ್ಕನೇ ದಿನ ಕೊರೊನಾ ಹೊಸ ಪ್ರಕರಣಗಳು ಇಳಿಕೆಯಾಗಿವೆ. ಸಾವು ಏರಿಕೆಯಾಗಿದ್ದು, ಶೇ. 2.58 ಮರಣ ದರ ವರದಿಯಾಗಿದೆ.

ಮಂಗಳವಾರ 22,758 ಮಂದಿಗೆ ಸೋಂಕು ತಗಲಿದ್ದು, 588 ಮಂದಿಯ ಸಾವಾಗಿದೆ. 38,224 ಮಂದಿ ಗುಣಮುಖರಾಗಿದ್ದಾರೆ. ಸೋಮವಾರಕ್ಕೆ ಹೋಲಿಸಿದರೆ ಪರೀಕ್ಷೆ ಒಂದು ಸಾವಿರದಷ್ಟು (1.08 ಲಕ್ಷ) ಕಡಿಮೆಯಾಗಿವೆ. ಹೊಸ ಪ್ರಕರಣಗಳು ಎರಡೂವರೆ ಸಾವಿರ ತಗ್ಗಿವೆ. ಆದರೆ ಸಾವು 59 ಹೆಚ್ಚಿದೆ. ಒಟ್ಟು ಪ್ರಕರಣಗಳು 24.72 ಲಕ್ಷಕ್ಕೆ ಹೆಚ್ಚಿದ್ದು, 20.22 ಲಕ್ಷ ಮಂದಿ ಗುಣಮುಖ ರಾಗಿದ್ದಾರೆ. 26,399 ಮಂದಿಯ ಸಾವಾಗಿದೆ. 4.24 ಲಕ್ಷ ಮಂದಿ ಚಿಕಿತ್ಸೆ, ಆರೈಕೆಯಲ್ಲಿದ್ದಾರೆ.

32 ಸಾವಿರ ಇದ್ದ ಸೋಂಕು ಪ್ರಕರಣ ಗಳು ಮೇ 22ರಿಂದ ನಾಲ್ಕು ದಿನಗಳಲ್ಲಿ ಕ್ರಮ ವಾಗಿ 31 ಸಾವಿರ, 26 ಸಾವಿರ, 25 ಸಾವಿರ, 22 ಸಾವಿರ ಆಸುಪಾಸಿಗೆ ತಗ್ಗಿವೆ. ಎ. 21ರ ಅನಂತರ ಇದೇ ಮೊದಲು 23 ಸಾವಿರಕ್ಕಿಂತ ಕಡಿಮೆ ಪ್ರಕರಣ ವರದಿಯಾಗಿವೆ. ಪಾಸಿಟಿವಿಟಿ ದರ ಗರಿಷ್ಠ ಶೇ.21ಕ್ಕೆ ಇಳಿದಿದೆ. ಸತತ 4ನೇ ದಿನ ಸೋಂಕು ಇಳಿಮುಖ ಮತ್ತು ಪಾಸಿಟಿವಿಟಿ ದರವೂ ತಗ್ಗಿರುವುದು ಸಮಾಧಾನಕರ ಬೆಳವಣಿಗೆ.

ಗರಿಷ್ಠ ಮರಣ ದರ
ರಾಜ್ಯದಲ್ಲಿ ಸೋಂಕುಪೀಡಿತರ ಸರಾಸರಿ ಮರಣ ದರ ಮಾತ್ರ ಶೇ. 1ರಷ್ಟಿದೆ. ಆದರೆ ಕಳೆದ ಮೂರು ದಿನಗಳಿಂದ ಮರಣ ದರ ಶೇ. 2ಕ್ಕೂ ಅಧಿಕ ವರದಿಯಾಗುತ್ತಿದೆ. ರವಿವಾರ ಮೊದಲ ಬಾರಿಗೆ ಮರಣ ದರ ಶೇ. 2.4, ಸೋಮವಾರ ಶೇ. 2.1ರಷ್ಟು ವರದಿಯಾಗಿತ್ತು. ಮಂಗಳವಾರ ಮತ್ತಷ್ಟು ಹೆಚ್ಚಿದ್ದು, ಹಿಂದೆಂದಿಗಿಂತಲೂ ಅಧಿಕ ಶೇ. 2.58 ದಾಖಲಾಗಿದೆ. ಅಂದರೆ ಸೋಂಕು ದೃಢಪಟ್ಟ ಒಂದು ಸಾವಿರ ಜನರಲ್ಲಿ 26 ಮಂದಿ ಸಾವಿಗೀಡಾಗಿದ್ದಾರೆ.

ದೇಶ ದಲ್ಲೂ ಇಳಿಕೆ
ತಿಂಗಳ ಬಳಿಕ ಇದೇ ಮೊದಲ ಬಾರಿಗೆ ದೇಶದಲ್ಲಿ ಸೋಂಕು 2 ಲಕ್ಷಕ್ಕಿಂತ ಕಡಿಮೆಯಾಗಿದೆ. ಸೋಮವಾರ ಬೆಳಗ್ಗಿನಿಂದ ಮಂಗಳವಾರ ಬೆಳಗ್ಗಿನ ವರೆಗೆ ಒಟ್ಟು 1,96,427 ಲಕ್ಷ ಪ್ರಕರಣಗಳು ದೃಢಪಟ್ಟಿವೆ. ಒಟ್ಟು 3,26,850 ಮಂದಿ ಚೇತರಿಸಿಕೊಂಡಿದ್ದಾರೆ. ಸಾವಿನ ಸಂಖ್ಯೆ 21 ದಿನಗಳ ಬಳಿಕ 4 ಸಾವಿರಕ್ಕಿಂತ ಕೆಳಗೆ ಇಳಿದಿದೆ. ಮಂಗಳವಾರ 3,511 ಮಂದಿ ಸಾವನ್ನಪ್ಪಿದ್ದಾರೆ.

ದೇಶದಲ್ಲಿ ಈಗ 25,86,782 ಸಕ್ರಿಯ ಪ್ರಕರಣಗಳಿವೆ. 2,40,54,861 ಮಂದಿ ಗುಣ ಹೊಂದಿದ್ದಾರೆ. ಒಟ್ಟು 3,07,231 ಮಂದಿ ಸಾವನ್ನಪ್ಪಿದ್ದಾರೆ. ಸದ್ಯ ಶೇ.1.14ರಷ್ಟು ಮರಣ ಪ್ರಮಾಣ ದರವಿದೆ. ಪಾಸಿಟಿವಿಟಿ ದರ ಶೇ.9.60ಕ್ಕೆ ಇಳಿದಿದೆ. ಚೇತರಿಕೆ ದರ ಶೇ.89.26ಕ್ಕೆ ಏರಿದೆ.

ಮಹಾರಾಷ್ಟ್ರ, ಕರ್ನಾಟಕ, ತಮಿಳುನಾಡು, ದಿಲ್ಲಿ, ಕೇರಳ, ಪಂಜಾಬ್‌, ಉತ್ತರ ಪ್ರದೇಶ, ಪ.ಬಂಗಾಲ, ಉತ್ತರಾಖಂಡ ಮತ್ತು ರಾಜಸ್ಥಾನಗಳಲ್ಲಿ ಹೆಚ್ಚಿನ ಮರಣ ಪ್ರಮಾಣವಿದೆ. ಮಹಾರಾಷ್ಟ್ರ, ಕರ್ನಾಟಕ, ದಿಲ್ಲಿ, ತ.ನಾಡು, ಉ. ಪ್ರದೇಶ, ಪ. ಬಂಗಾಲಗಳಲ್ಲಿ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ.

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.