ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ : ರಾಜ್ಯದ ಜನರಲ್ಲಿ ಸಿಎಂ ಮನವಿ
Team Udayavani, Aug 20, 2021, 7:05 PM IST
ಬೆಂಗಳೂರು : ಕೋವಿಡ್ 19 ಸಾಂಕ್ರಾಮಿಕವನ್ನು ನಿಯಂತ್ರಣದಲ್ಲಿಡಲು ಕೋವಿಡ್ ನಿಯಮ ಹಾಗೂ ಮಾರ್ಗಸೂಚಿಗಳನ್ನು ಜನತೆ ಕಡ್ಡಾಯವಾಗಿ ಪಾಲಿಸುವ ಮೂಲಕ ಸಹಕರಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮನವಿ ಮಾಡಿದರು.
ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು ಜನರು ಮಾರುಕಟ್ಟೆ, ಸಾರ್ವಜನಿಕ ಸ್ಥಳಗಳಲ್ಲಿ ಜನಸಂದಣಿಯಾಗದಂತೆ ಸ್ವಯಂ ಪ್ರೇರಿತವಾಗಿ ನಡೆದುಕೊಳ್ಳಬೇಕು. ಕೋವಿಡ್ ಆರ್ಥಿಕ, ಶೈಕ್ಷಣಿಕ ಚಟುವಟಿಕೆಗಳ ದೃಷ್ಟಿಯಿಂದ ನಿರ್ಬಂಧಗಳು ಮುಂದುವರೆಯುತ್ತವೆ. ಜನರು ಎಚ್ಚರಿಕೆಯಿಂದ ನಡೆದುಕೊಳ್ಳುವಂತೆ ಮುಖ್ಯಮಂತ್ರಿಗಳು ತಿಳಿಸಿದರು.
ಇದನ್ನೂ ಓದಿ :ಕೋವಿಡ್: ರಾಜ್ಯದಲ್ಲಿಂದು 1453 ಪ್ರಕರಣ ಪತ್ತೆ| 1408 ಸೋಂಕಿತರು ಗುಣಮುಖ