ಜನ ಸೇರುವ ಕಾರ್ಯಕ್ರಮ ಸದ್ಯಕ್ಕೆ ಬೇಡ : ಕೇಂದ್ರ ಆರೋಗ್ಯ ಸಚಿವಾಲಯದ ಮನವಿ
ಹಲವು ಸಮಯದ ವರೆಗೆ ಸೋಂಕು ನಿಯಮ ಪಾಲಿಸಲು ಒತ್ತಾಯ
Team Udayavani, Jun 9, 2021, 12:25 AM IST
ನವದೆಹಲಿ: ದೇಶದಲ್ಲಿ ಕೊರೊನಾ ಪರಿಸ್ಥಿತಿ ಇಳಿಮುಖವಾಗುತ್ತಿದ್ದರೂ, ಮುಂದಿನ ಕೆಲವು ತಿಂಗಳ ವರೆಗೆ ದೊಡ್ಡ ಪ್ರಮಾಣದಲ್ಲಿ ಜನರು ಸೇರುವ ಕಾರ್ಯಕ್ರಮಗಳನ್ನು ಹಾಕಿಕೊಳ್ಳುವುದು ಬೇಡ. ಹೀಗೆಂದು ಕೇಂದ್ರ ಆರೋಗ್ಯ ಖಾತೆ ಜಂಟಿ ಕಾರ್ಯದರ್ಶಿ ಲವ ಅಗರ್ವಾಲ್ ಮನವಿ ಮಾಡಿದ್ದಾರೆ.
ಮಂಗಳವಾರ ನವದೆಹಲಿಯಲ್ಲಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಸೋಂಕು ತಡೆಯಲು ಪ್ರತಿಬಂಧಕ ನಿಯಮಗಳನ್ನು ಅನುಸರಿಸಲೇಬೇಕಾಗಿದೆ ಎಂದಿದ್ದಾರೆ. ಮೇ 7ರ ಬಳಿಕ ದೇಶದಲ್ಲಿ ಸದ್ಯ ಶೇ.70ರಷ್ಟು ಸೋಂಕು ಪ್ರಕರಣಗಳು ತಗ್ಗಿವೆ. ಜತೆಗೆ ದಿನದಿಂದ ದಿನಕ್ಕೆ ದಿನವಹಿ ಸೋಂಕು ಸಂಖ್ಯೆ ಇಳಿಮುಖವಾಗುತ್ತಿದೆ ಎಂದು ಹೇಳಿದ್ದಾರೆ. ಅಗರ್ವಾಲ್ ಹೇಳಿದ ಪ್ರಕಾರ ಪ್ರತಿ ಮಿಲಿಯ ಜನಸಂಖ್ಯೆಗೆ 20,822 ಸೋಂಕು ಪ್ರಕರಣ ಮತ್ತು 252 ಮಂದಿ ಅಸುನೀಗಿದ್ದಾರೆ. ಜಗತ್ತಿನ ಇತರ ದೇಶಗಳಿಗೆ ಹೋಲಿಕೆ ಮಾಡಿದರೆ ಇದು ಅತ್ಯಂತ ಕನಿಷ್ಠ ಪ್ರಮಾಣದ್ದು ಎಂದು ಅಗರ್ವಾಲ್ ಹೇಳಿದ್ದಾರೆ.
ಇದನ್ನೂ ಓದಿ :ಚುನಾವಣಾ ಸುಧಾರಣೆ ಬಾಕಿ: ಸರ್ಕಾರಕ್ಕೆ ಸಿಇಸಿ ಪತ್ರ
ಇತರ ಸಮಸ್ಯೆಗಳಿಂದ: ದೇಶದಲ್ಲಿ ಸದ್ಯಕ್ಕೆ 3ನೇ ಅಲೆ ಉಂಟಾಗಿದೆ ಎಂದು ಹೇಳಲು ಸಾಧ್ಯವಿಲ್ಲ. 2ನೇ ಅಲೆಯಲ್ಲಿ ಮಕ್ಕಳು ಆಸ್ಪತ್ರೆಗೆ ದಾಖಲಾಗಿದ್ದರೂ ಕೂಡ ಇತರ ಆರೋಗ್ಯ ಸಮಸ್ಯೆ ಹಿನ್ನೆಲೆಯಲ್ಲಿ ಶೇ.60-70 ಮಂದಿ ಮಕ್ಕಳು ಚಿಕಿತ್ಸೆಗಾಗಿ ದಾಖಲಾಗಿದ್ದಾರೆ ಎಂದು ನವದೆಹಲಿಯ ಏಮ್ಸ್ ನಿರ್ದೇಶಕ ಡಾ.ರಣದೀಪ್ ಗುಲೇರಿಯಾ ಹೇಳಿದ್ದಾರೆ. ಜಗತ್ತಿನ ಮತ್ತು ನಮ್ಮ ದೇಶದ ಮಾಹಿತಿ ವಿಶ್ಲೇಷಿಸುವುದಿದ್ದರೆ ಹಳೆಯ ಅಥವಾ ರೂಪಾಂತರಿ ಸೋಂಕು ಮಕ್ಕಳಿಗೆ ಬಾಧಿಸಿದ್ದು ಖಚಿತವಾಗಿಲ್ಲ ಎಂದುಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ