ರಾಣಿ ಚನ್ನಮ್ಮ ವಿವಿ : 40ಕ್ಕೂ ಹೆಚ್ಚು ಮಂದಿಯಲ್ಲಿ ಪಾಸಿಟಿವ್ ಪ್ರಕರಣ ಪತ್ತೆ, ಹೆಚ್ಚಿದ ಆತಂಕ


Team Udayavani, Jan 31, 2022, 8:51 PM IST

ರಾಣಿ ಚನ್ನಮ್ಮ ವಿವಿ : 40ಕ್ಕೂ ಹೆಚ್ಚು ಮಂದಿಯಲ್ಲಿ ಪಾಸಿಟಿವ್ ಪ್ರಕರಣ ಪತ್ತೆ, ಹೆಚ್ಚಿದ ಆತಂಕ

ಬೆಳಗಾವಿ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಹಾಸ್ಟೆಲ್ ವಿದ್ಯಾರ್ಥಿಗಳು ಸೇರಿದಂತೆ 40ಕ್ಕೂ ಹೆಚ್ಚು ಮಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ತರಗತಿಗೆ ಬರಲು ವಿದ್ಯಾರ್ಥಿಗಳಲ್ಲಿ ಭೀತಿ ಉಂಟಾಗಿದೆ.

ವಿಶ್ವವಿದ್ಯಾಲಯ ಕುಲಪತಿ ಪ್ರೊ. ರಾಮಚಂದ್ರಗೌಡ ಅವರಿಗೆ ಕೆಲ ದಿನಗಳ ಹಿಂದೆಯಷ್ಟೇ ಕೊರೊನಾ ಪಾಸಿಟಿವ್ ದೃಢಪಟ್ಟಿತ್ತು. ಸದ್ಯ ಕ್ಯಾಂಪಸ್‌ನ ಬೋಧಕೇತರ ಸಿಬ್ಬಂದಿಗೆ ಪಾಸಿಟಿವ್ ಬಂದಿದೆ.

ಹಾಸ್ಟೆಲ್‌ನಲ್ಲಿರುವ ಶನಿವಾರ 42 ವಿದ್ಯಾರ್ಥಿಗಳ ಮೂಗು ಮತ್ತು ಗಂಟಲು ದ್ರವ ಮಾದರಿ ಪಡೆದು ಆರ್‌ಟಿಪಿಸಿಆರ್ ತಪಾಸಣೆ ನಡೆಸಿದಾಗ ಸೋಮವಾರ ಸುಮಾರು 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂದು ತಿಳಿದು ಬಂದಿದೆ.

ವಿಶ್ವವಿದ್ಯಾಲಯದ ಬೋಧಕೇತರ ಸಿಬ್ಬಂದಿಗೂ ಕೊರೊನಾ ಪಾಸಿಟಿವ್ ಬಂದಿದೆ. ವಿವಿ ಆವರಣದಲ್ಲಿ ಪಾಸಿಟಿವ್ ಪ್ರಮಾಣ ಹೆಚ್ಚಾಗಿದ್ದರಿಂದ ವಿದ್ಯಾರ್ಥಿಗಳು ಆತಂಕಕ್ಕೀಡಾಗಿದ್ದಾರೆ.

ಹಾಸ್ಟೆಲ್‌ನಲ್ಲಿರುವ ಅನೇಕ ವಿದ್ಯಾರ್ಥಿಗಳು ತಮ್ಮ ಊರುಗಳಿಗೆ ತೆರಳುತ್ತಿದ್ದಾರೆ. ಇಡೀ ಹಾಸ್ಟೆಲ್ ಡೇಂಜರ್ ಝೋನ್ ಆಗಿ ಮಾರ್ಪಟ್ಟಿದೆ. ಸರಿಯಾದ ವ್ಯವಸ್ಥೆ ಇಲ್ಲದೇ ತೊಂದರೆ ಅನುಭವಿಸುವಂತಾಗಿದೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಇದನ್ನೂ ಓದಿ : ಹನಗೋಡು, ನೇರಳಕುಪ್ಪೆಯಲ್ಲಿ ಹುಲಿ ಹೆಜ್ಜೆಗುರುತು ಪತ್ತೆ : ಭೀತಿಯಲ್ಲಿ ಗ್ರಾಮಸ್ಥರು

ವಿಶ್ವವಿದ್ಯಾಲಯದಲ್ಲಿ ಕಳೆದ ಒಂದು ವಾರದಿಂದ ಕೊರೊನಾ ಸೋಂಕು ವ್ಯಾಪಿಸುತ್ತಿದ್ದರೂ ಆಡಳಿತ ಮಂಡಳಿ ಮುಂಜಾಗ್ರತ ಕ್ರಮ ಕೈಗೊಳ್ಳುತ್ತಿಲ್ಲ. ಸೋಂಕು ನಿಯಂತ್ರಣಕ್ಕೆ ಬರಬೇಕಾದರೆ ವಿವಿಗೆ ರಜೆ ನೀಡಬೇಕಾದ ಅಗತ್ಯವಿದೆ. ಆದರೆ ಇದರ ಬಗ್ಗೆ ಅಧಿಕಾರಿಗಳು ರಜೆ ನೀಡುವ ಗೋಜಿಗೆ ಹೋಗುತ್ತಿಲ್ಲ. ಸೋಂಕು ಹರಡುತ್ತಿದ್ದರೂ ತರಗತಿಗಳು ನಡೆಯುತ್ತಿವೆ. ಅನೇಕ ವಿದ್ಯಾರ್ಥಿಗಳಿಗೆ ಕೆಮ್ಮು, ನೆಗಡಿ ಇದ್ದರೂ ತರಗತಿಗೆ ಹಾಜರಾಗುತ್ತಿದ್ದು, ಇದರಿಂದ ಇನ್ನುಳಿದ ವಿದ್ಯಾವರ್ಥಿಗಳು ಮತ್ತು ಉಪನ್ಯಾಸಕರು ತರಗತಿಗೆ ಆತಂಕದಿಂದಲೇ ಬರುತ್ತಿದ್ದಾರೆ ಎಂದು ದೂರಿದರು.

ಈ ಬಗ್ಗೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ‘ಉದಯವಾಣಿ’ಯೊಂದಿಗೆ ಮಾತನಾಡಿ, ಸರ್ಕಾರದ ನಿಯಮಾವಳಿಯಂತೆ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸೂಕ್ತ ಕ್ರಮ ಕೈಗೊಳ್ಳಲಿದೆ. ಸೋಂಕು ನಿಯಂತ್ರಣಕ್ಕೆ ಕ್ರಮ ವಹಿಸುವಂತೆ ಸೂಚಿಸಲಾಗುವುದು ಎಂದು ಹೇಳಿದರು.

ಪ್ರತಿಕ್ರಿಯಿಸಿದ ಕುಲಪತಿ ಪ್ರೊ. ರಾಮಚಂದ್ರಗೌಡ, ಕೆಲವು ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಬಂದವರಿಗೆ ರಜೆ ನೀಡುವಂತೆ ಸೂಚನೆ ನೀಡಲಾಗಿದೆ. ಹಾಸ್ಟೆಲ್‌ನಲ್ಲಿ ವೈದ್ಯರನ್ನು ನೇಮಿಸಲಾಗಿದೆ. ಸದ್ಯ ಪರೀಕ್ಷೆ ಇರುವುದರಿಂದ ರಜೆ ನೀಡಲು ಬರುವುದಿಲ್ಲ. ಅಗತ್ಯ ಮುಂಜಾಗ್ರತ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಈ ಬಗ್ಗೆ ಜಿಲ್ಲಾ ಆರೋಗ್ಯಾಧಿಕಾರಿಗಳು ಹಾಗೂ ತಾಲೂಕು ಆರೋಗ್ಯಾಧಿಕಾರಿಗಳು ಸಂಪರ್ಕಕ್ಕೆ ಸಿಗಲಿಲ್ಲ.

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.