ಆಸ್ಪತ್ರೆ ಸೇರಲು ಪಾಸಿಟಿವ್ ವರದಿ ಬೇಕಿಲ್ಲ : ಕೇಂದ್ರ ಸರಕಾರದಿಂದ ಹೊಸ ನಿಯಮ
Team Udayavani, May 9, 2021, 7:30 AM IST
ಹೊಸದಿಲ್ಲಿ: ಇನ್ನು ಮುಂದೆ ಕೊರೊನಾ ಲಕ್ಷಣ ಹೊಂದಿರುವವರನ್ನು ಆಸ್ಪತ್ರೆಗೆ ದಾಖಲಿಸಲು ಪಾಸಿಟಿವ್ ವರದಿ ಬೇಕಿಲ್ಲ ಎಂದು ಸರಕಾರ ಹೇಳಿದೆ.
ಈ ಸಂಬಂಧ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ. ಇದುವರೆಗೆ ಕೊರೊನಾ ಲಕ್ಷಣ ಇದ್ದರೂ ಬಿಯು ನಂಬರ್ ಇಲ್ಲದಿದ್ದರೆ ಆಸ್ಪತ್ರೆಗೆ ದಾಖಲು ಮಾಡಿಕೊಳ್ಳುತ್ತಿರಲಿಲ್ಲ. ಇದರಿಂದ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೆ ಹೆಚ್ಚಿನ ಸಾವು ಸಂಭವಿಸುತ್ತಿತ್ತು. ಇದನ್ನು ಮನಗಂಡಿರುವ ಸರಕಾರ ಮಾರ್ಗಸೂಚಿಯನ್ನು ಬದಲಾಯಿಸಿದೆ.
ಈ ನಿಯಮ ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಅನ್ವಯವಾಗುತ್ತದೆ ಎಂದು ಸೂಚಿಸಲಾಗಿದೆ.
ನಿರಾಕರಿಸುವಂತಿಲ್ಲ
ಆಸ್ಪತ್ರೆಗೆ ದಾಖಲಿಸಿಕೊಳ್ಳಲು ನಿರಾಕರಿಸುವುದಕ್ಕೆ ಸರಿಯಾದ ವಿಳಾಸ ಅಥವಾ ಗುರುತಿನ ಚೀಟಿ ಇಲ್ಲ, ದೂರದ ಊರಿನವರು ಎಂಬ ಕಾರಣವನ್ನೂ ನೀಡುವಂತಿಲ್ಲ. ಕಡಿಮೆ ಲಕ್ಷಣ ಇರುವಂಥವರಿಗೆ ಆಸ್ಪತ್ರೆ ದಾಖಲಾತಿ ಅಗತ್ಯವಿಲ್ಲ. ರೋಗಿಗಳ ಸ್ಥಿತಿ ಪರಿಶೀಲಿಸಿ ನಿರ್ಧಾರ ತೆಗೆದುಕೊಳ್ಳಬಹುದು ಎಂದೂ ಹೇಳಿದೆ.
ಆಮ್ಲಜನಕ: ಟಾಸ್ಕ್ ಫೋರ್ಸ್
ಆಮ್ಲಜನಕ ಹಂಚಿಕೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಮಧ್ಯಪ್ರವೇಶಿಸಿದೆ. ಸಮರ್ಪಕ ಮತ್ತು ರಾಜ್ಯಗಳ ಬೇಡಿಕೆಗೆ ಅನುಗುಣವಾಗಿ ಆಮ್ಲಜನಕ ಹಂಚಿಕೆ ಮಾಡುವುದಕ್ಕೆ 12 ಸದಸ್ಯರ ಸಮಿತಿಯನ್ನು ಅದು ರಚಿಸಿದೆ. ನ್ಯಾ| ಡಿ.ವೈ. ಚಂದ್ರಚೂಡ್ ಮತ್ತು ನ್ಯಾ| ಎಂ.ಆರ್. ಶಾ ಅವರು ಎಲ್ಲ ಸದಸ್ಯರ ಜತೆಗೆ ಚರ್ಚೆ ನಡೆಸಿದ್ದು, ಸಮರ್ಪಕವಾಗಿ ಆಮ್ಲಜನಕ ಹಂಚಿಕೆಯ ವ್ಯವಸ್ಥೆ ನೋಡಿಕೊಳ್ಳುವಂತೆ ಸೂಚಿಸಿದ್ದಾರೆ. ಈ ಸಮಿತಿ ತಾನು ಮಾಡಿದ ಕೆಲಸದ ಬಗ್ಗೆ ಸುಪ್ರೀಂ ಕೋರ್ಟ್ ಮತ್ತು ಕೇಂದ್ರ ಸರಕಾರಕ್ಕೆ ವರದಿ ಸಲ್ಲಿಸಲಿದೆ. ಬೆಂಗಳೂರಿನ ಖ್ಯಾತ ವೈದ್ಯ ಡಾ| ದೇವಿಪ್ರಸಾದ್ ಶೆಟ್ಟಿ ಅವರು ಸಮಿತಿಯ ಸದಸ್ಯರಾಗಿದ್ದಾರೆ.
ಹೊಸ ಔಷಧಕ್ಕೆ ಒಪ್ಪಿಗೆ
ರಕ್ಷಣ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ ಡಿಒ) ದೇಶವಾಸಿಗಳಿಗೆ ಒಂದು ಖುಷಿಯ ಸುದ್ದಿ ನೀಡಿದೆ. ಕೊರೊನಾ ಪೀಡಿತರಿಗಾಗಿ ಅದು ಹೊಸ ಔಷಧವೊಂದನ್ನು ಅಭಿವೃದ್ಧಿಪಡಿಸಿದ್ದು, ಇದರ ಬಳಕೆಗೆ ದೇಶದ ಔಷಧ ನಿಯಂತ್ರಣ ಮಹಾನಿರ್ದೇಶಕರು (ಡಿಸಿಜಿಐ) ಒಪ್ಪಿಗೆ ನೀಡಿದ್ದಾರೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮತ್ತು ಆಮ್ಲಜನಕ ಅಗತ್ಯವಿರುವ ರೋಗಿಗಳಿಗೆ 2-ಡಿಯಾಕ್ಸಿ -ಡಿ-ಗ್ಲುಕೋಸ್(2-ಡಿಜಿ) ಎಂಬ ಈ ಔಷಧ ಪರಿಣಾಮಕಾರಿಯಾಗಿರುತ್ತದೆ ಎಂದು ಡಿಆರ್ ಡಿಒ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ
Delhi: ಬ್ಯಾಂಕ್ ಮ್ಯಾನೇಜರ್ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!
ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು
Usman Ghani: ಮೋದಿ ಹೇಳಿಕೆ ಟೀಕೆ ಮಾಡಿದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಉಚ್ಛಾಟನೆ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
MUST WATCH
ಹೊಸ ಸೇರ್ಪಡೆ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ