ಗ್ರಾಮಗಳ ಕಡೆ ಮಕ್ಕಳ ತಜ್ಞರ ನಡೆ : ಕೋವಿಡ್ 3ನೇ ಅಲೆಯಲ್ಲಿ ಮಕ್ಕಳಿಗೆ ಹೆಚ್ಚು ಅಪಾಯ ಸಾಧ್ಯತೆ
Team Udayavani, Jun 17, 2021, 7:20 AM IST
ಬೆಂಗಳೂರು / ದೇವನಹಳ್ಳಿ : ಕೊರೊನಾ ಎರಡನೇ ಅಲೆಯ ಅಬ್ಬರ ಮುಗಿಯುತ್ತಾ ಬಂದಿದ್ದು, ಇಡೀ ದೇಶವೇ ನಿಟ್ಟುಸಿರು ಬಿಡುತ್ತಿದೆ. ಈ ನಡುವೆಯೇ 3ನೇ ಅಲೆಯ ಅಪಾಯದ ಬಗ್ಗೆಯೂ ತಜ್ಞರು ಎಚ್ಚರಿಕೆ ನೀಡಿದ್ದು, ಮಕ್ಕಳೇ ಹೆಚ್ಚು ಬಾಧಿತರಾಗುತ್ತಾರೆ ಎಂದಿರುವುದು ಆತಂಕಕ್ಕೂ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರಕಾರ “ಮಕ್ಕಳ ತಜ್ಞ ವೈದ್ಯರ ನಡೆ ಹಳ್ಳಿ ಕಡೆ’ ಎಂಬ ವಿನೂತನ ಯೋಜನೆ ಜಾರಿ ಮಾಡಿದೆ.
ಕಂದಾಯ ಸಚಿವ ಆರ್. ಅಶೋಕ್ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಬುಧವಾರ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಯೋಜನೆಗೆ ಚಾಲನೆ ನೀಡಿದರು.
ಏನಿದು ಯೋಜನೆ?
– ಹಳ್ಳಿ ಹಳ್ಳಿಗಳಲ್ಲಿ ಮಕ್ಕಳ ತಪಾಸಣೆ ಮಾಡುವುದು
– ಸಮಸ್ಯೆ ಇರುವ ಮಕ್ಕಳಿಗೆ ಚಿಕಿತ್ಸೆ
– ಅಪೌಷ್ಟಿಕತೆ ಸಮಸ್ಯೆ ಇರುವ ಮಕ್ಕಳಿಗೆ ಪೌಷ್ಟಿಕ ಆಹಾರ ಕಿಟ್
ಹೇಗೆ ತಪಾಸಣೆ?
ಪ್ರತೀ ತಾಲೂಕಿನಲ್ಲಿ ಐವರು ತಜ್ಞ ವೈದ್ಯರಂತೆ 20 ತಂಡಗಳು ಕಾರ್ಯನಿರ್ವಹಿಸಲಿವೆ. ಅವರು ಹಳ್ಳಿಗಳಿಗೆ ಭೇಟಿ ನೀಡಿ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಮಕ್ಕಳ ಮನೆ, ಮನೆಗೆ ತೆರಳಿ ಆರೋಗ್ಯ ತಪಾಸಣೆ ಮಾಡಲಿದ್ದಾರೆ.
3ನೇ ಅಲೆ ತಡೆಯಲು ಸರಕಾರ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, “ಮಕ್ಕಳ ತಜ್ಞ ವೈದ್ಯರ ನಡೆ’ ಯೋಜನೆಯನ್ನು ಎಲ್ಲ ಜಿಲ್ಲೆಗಳಲ್ಲೂ ನಡೆಸುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
-ಆರ್. ಅಶೋಕ್, ಕಂದಾಯ ಸಚಿವ
ಕೊರೊನಾ 3ನೇ ಅಲೆ ಮಕ್ಕಳ ಮೇಲೆ ಹೆಚ್ಚಿನ ಪರಿಣಾಮ ಬೀಳಲಿದ್ದು ಮಕ್ಕಳ ರಕ್ಷಣೆ ಹಾಗೂ ಆರೈಕೆಗೆ ಮುಂಜಾಗ್ರತಾ ಕ್ರಮವಾಗಿ ಎಲ್ಲ ರೀತಿಯಲ್ಲೂ ಸನ್ನದ್ಧರಾಗುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ.
-ಶಶಿಕಲಾ ಅಣ್ಣಾಸಾಹೇಬ್ ಜೊÇÉೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
MUST WATCH
ಹೊಸ ಸೇರ್ಪಡೆ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ