3ನೇ ಅಲೆ ಇನ್ನೂ ಪ್ರವೇಶಿಸಿಲ್ಲ: ಆಸ್ಪತ್ರೆಗೆ ದಾಖಲಾತಿ ಸಂಖ್ಯೆ ಹೆಚ್ಚಾದರೆ ಆತಂಕ: ತಜ್ಞರು


Team Udayavani, Aug 7, 2021, 7:25 AM IST

Budgam-COVID-19 Vaccination

ಹೊಸದಿಲ್ಲಿ: ದೇಶದಲ್ಲಿ ಇನ್ನೂ ಕೊರೊನಾ 3ನೇ ಅಲೆಯ ಪ್ರವೇಶವಾಗಿಲ್ಲ. ಕೆಲವು ರಾಜ್ಯಗಳಲ್ಲಿ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವುದಕ್ಕೆ ಡೆಲ್ಟಾ ರೂಪಾಂತರಿಯಿಂದ ಶುರುವಾದ 2ನೇ ಅಲೆಯ ಮುಂದುವರಿಕೆಯೇ ಕಾರಣ ಎಂದು ಆರೋಗ್ಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ನಾವು ಇನ್ನೂ 2ನೇ ಅಲೆಯ ಕೊನೆಯ ಹಂತದಲ್ಲಿದ್ದೇವೆ. 3ನೇ ಅಲೆ ಇನ್ನೂ ಅಪ್ಪಳಿಸಿಲ್ಲ. ಎರಡನೇ ಅಲೆಯು ಈಶಾನ್ಯ ರಾಜ್ಯಗಳಿಗೆ ವಿಳಂಬವಾಗಿ ಅಪ್ಪಳಿಸಿದೆ. ಅಲ್ಲದೇ, ಕೇರಳದಲ್ಲಿ ಸೆರೋಪಾಸಿಟಿವಿಟಿ ದರ ಕಡಿಮೆಯಿರುವ ಕಾರಣ ಸೋಂಕು ನಿಧಾನವಾಗಿ ಹಬ್ಬುತ್ತಿದೆ ಎಂದು ಸಿಎಸ್‌ ಐಆರ್‌ ನಿರ್ದೇಶಕ ಅನುರಾಗ್‌ ಅಗರ್ವಾಲ್‌ ಹೇಳಿದ್ದಾರೆ.

“ಮೂರು ವಿಚಾರಗಳು 3ನೇ ಅಲೆ ಬಂದಿರುವುದರ ಸುಳಿವು ನೀಡುತ್ತವೆ. ಅವೆಂದರೆ, ಪ್ರಕರಣಗಳ ಸಂಖ್ಯೆ, ಸಾವು ಮತ್ತು ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ. ಯಾವಾಗ ಆಸ್ಪತ್ರೆಗೆ ದಾಖಲಾಗುವವರ ಪ್ರಮಾಣ ಹೆಚ್ಚಾಗುತ್ತದೋ ಆಗ 3ನೇ ಅಲೆ ಬಂದಿದೆ ಎಂದರ್ಥ’ ಎಂದು ಭಾರತೀಯ ಸಾರ್ವಜನಿಕ ಆರೋಗ್ಯ ಪ್ರತಿಷ್ಠಾನದ ಅಧ್ಯಕ್ಷ ಕೆ. ಶ್ರೀನಾಥ್‌ ರೆಡ್ಡಿ ಹೇಳಿದ್ದಾರೆ.

ಗುರುವಾರದಿಂದ ಶುಕ್ರವಾರಕ್ಕೆ ದೇಶಾದ್ಯಂತ 44,643 ಮಂದಿಗೆ ಸೋಂಕು ದೃಢಪಟ್ಟಿದ್ದು, 464 ಮಂದಿ ಸಾವಿಗೀಡಾಗಿದ್ದಾರೆ. ಕೇರಳದಲ್ಲಿ 19,948 ಮಂದಿಗೆ ಸೋಂಕು ದೃಢಪಟ್ಟಿದ್ದು, 187 ಮಂದಿ ಮೃತಪಟ್ಟಿದ್ದಾರೆ.

ಚೀನದಲ್ಲಿ ಏರುತ್ತಿದೆ ಸೋಂಕು: ಚೀನದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದ್ದು, ಶುಕ್ರವಾರ 124 ಹೊಸ ಪ್ರಕರಣ ಪತ್ತೆಯಾಗಿವೆ. ಅಮೆರಿಕದಲ್ಲೂ ಕಳೆದ 6 ತಿಂಗಳಲ್ಲೇ ಅತ್ಯಧಿಕ ಪ್ರಕರಣ ಗುರುವಾರ ವರದಿಯಾಗಿದೆ. ಒಂದು ವಾರದಲ್ಲಿ ಸರಾಸರಿ 94,819ರಷ್ಟು ಮಂದಿಗೆ ಸೋಂಕು ದೃಢಪಡುತ್ತಿದೆ.

50 ಕೋಟಿ ಡೋಸ್‌ ನೀಡಿಕೆ
ದೇಶದಲ್ಲಿ 50 ಕೋಟಿ ಡೋಸ್‌ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್‌ ಮಾಂಡವೀಯಾ ತಿಳಿಸಿದ್ದಾರೆ. ಶುಕ್ರವಾರ ಒಂದೇ ದಿನ 43.29 ಲಕ್ಷ ಡೋಸ್‌ ಲಸಿಕೆ ನೀಡಲಾಗಿದೆ. 18-44 ವಯೋಮಿತಿಯ 22,93,781 ಮಂದಿಗೆ ಮೊದಲ ಡೋಸ್‌ ನೀಡಲಾಗಿದೆ. 4,32,281 ಮಂದಿಗೆ ಎರಡನೇ ಡೋಸ್‌ ನೀಡಲಾಗಿದೆ ಎಂದು ಅವರು ಟ್ವೀಟ್‌ ಮಾಡಿದ್ದಾರೆ. ಒಟ್ಟಾರೆಯಾಗಿ 18-44 ವಯೋ ಮಿತಿಯ 17.23 ಕೋಟಿ ಮಂದಿಗೆ ಮೊದಲ ಡೋಸ್‌, 1.12 ಕೋಟಿ 2ನೇ ಡೋಸ್‌ ಲಸಿಕೆ ನೀಡಲಾಗಿದೆ.

ಲಸಿಕೆ ಪ್ರೂಫ್ಗೆ ಟೀಕೆ
ಅಂಗಡಿಗೆ ಹೋಗುವುದಿದ್ದರೂ ಲಸಿಕೆ ಪಡೆದಿರುವ ದಾಖಲೆ ಅಥವಾ ಕೊರೊನಾ ನೆಗೆಟಿವ್‌ ವರದಿ ಕಡ್ಡಾಯಗೊಳಿಸಿರುವ ಕೇರಳ ಸರಕಾರದ ನಿರ್ಧಾರಕ್ಕೆ ವಿಪಕ್ಷಗಳಿಂದ ಆಕ್ಷೇಪ ವ್ಯಕ್ತವಾಗಿದೆ. ಈ ರೀತಿಯ ನಿಯಮಗಳಿಂದಾಗಿ, ಪೊಲೀಸರ ಅತಿರೇಕದ ವರ್ತನೆಗೆ ಅವಕಾಶ ಕೊಟ್ಟಂತಾಗುತ್ತದೆ ಎಂದು ಅಸೆಂಬ್ಲಿಯಲ್ಲಿ ವಿಪಕ್ಷಗಳು ಕಿಡಿಕಾರಿವೆ. ಆದರೆ, ನಿರ್ಧಾರವನ್ನು ಸರಕಾರ ಸಮರ್ಥಿಸಿಕೊಂಡಿದೆ.

ನೆಗೆಟಿವ್‌ ರಿಪೋರ್ಟ್‌ ಬೇಕಿಲ್ಲ: ಯಾರು ಕೊರೊನಾದ ಎರಡೂ ಡೋಸ್‌ ಲಸಿಕೆ ಹಾಕಿಸಿಕೊಂಡಿದ್ದಾರೋ, ಅಂಥವರಿಗೆ ಪ್ರಯಾಣದ ವೇಳೆ ಆರ್‌ ಟಿಪಿಸಿಆರ್‌ ನೆಗೆಟಿವ್‌ ವರದಿ ಅಗತ್ಯವಿಲ್ಲ ಎಂದು ರಾಜ್ಯಗಳಿಗೆ ಕೇಂದ್ರ ಸರಕಾರ ಸೂಚಿಸಿದೆ. ಅಗತ್ಯ ಇರುವಲ್ಲಿ ಮಾತ್ರವೇ ಆರ್‌ ಟಿಪಿಸಿಆರ್‌ ಪರೀಕ್ಷೆ ನಡೆಸಿದರೆ ಸಾಕು. ಪ್ರಯಾಣದ ಉದ್ದೇಶಕ್ಕೆ ಎರಡೂ ಡೋಸ್‌ ಲಸಿಕೆ ಪಡೆದ ಪ್ರಮಾಣ ಪತ್ರ ಇದ್ದರೆ ಸಾಲುತ್ತದೆ ಎಂದು ಲಸಿಕೆಗೆ ಸಂಬಂಧಿಸಿದ ರಾಷ್ಟ್ರೀಯ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷ ಎನ್‌.ಕೆ. ಅರೋರಾ ಹೇಳಿದ್ದಾರೆ.

2022ರಲ್ಲಿ ಮಕ್ಕಳಿಗೆ ಕೊವೊವ್ಯಾಕ್ಸ್‌ ಲಸಿಕೆ
ಸೀರಂ ಇನ್‌ಸ್ಟಿಟ್ಯೂಟ್‌ ಸಿಇಒ ಅಡಾರ್‌ ಪೂನಾವಾಲ ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್‌ ಶಾರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ತಮ್ಮ ಕಂಪೆನಿ ಉತ್ಪಾದಿಸುತ್ತಿರುವ ಕೊವೊವ್ಯಾಕ್ಸ್‌ ಲಸಿಕೆಯು (ವಯಸ್ಕರಿಗೆ) ಅಕ್ಟೋಬರ್‌ ವೇಳೆಗೆ ಲಭ್ಯವಾಗಲಿದ್ದು, ಮಕ್ಕಳ ಲಸಿಕೆ 2022ರ ಎಪ್ರಿಲ್‌-ಜೂನ್‌ ಅವಧಿಯಲ್ಲಿ ಮಾರುಕಟ್ಟೆಗೆ ಬರಲಿದೆ ಎಂದು ತಿಳಿಸಿದ್ದಾರೆ. ಇದೇ ವೇಳೆ, ನೊವೊವ್ಯಾಕ್ಸ್‌ ಕಂಪೆನಿಯು ಭಾರತದಲ್ಲಿ ಕೊವೊವ್ಯಾಕ್ಸ್‌ಗೆ ತುರ್ತು ಬಳಕೆಗೆ ಅನುಮತಿ ಕೋರಿ ಅರ್ಜಿ ಸಲ್ಲಿಸಿದೆ.

ಟಾಪ್ ನ್ಯೂಸ್

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

Baragala (2)

IMD; ಕರ್ನಾಟಕ ಸೇರಿ 23 ರಾಜ್ಯಗಳ 125 ಜಿಲ್ಲೆಗಳಿಗೆ ‘ಬರ’ಸಿಡಿಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.