ಲಸಿಕೆಗಳ ಅಭಿವೃದ್ಧಿ ಅಡ್ಡಿ ಸೃಷ್ಟಿಯಾಗದಿರಲಿ


Team Udayavani, Nov 24, 2020, 5:30 AM IST

ಲಸಿಕೆಗಳ ಅಭಿವೃದ್ಧಿ ಅಡ್ಡಿ ಸೃಷ್ಟಿಯಾಗದಿರಲಿ

ಕೋವಿಡ್‌-19 ಸಾಂಕ್ರಾಮಿಕದ ಸಮಯದಲ್ಲಿ ಜಗತ್ತಿನ ಆರೋಗ್ಯ ವಲಯ, ವೈಜ್ಞಾನಿಕ ವಲಯ ಆರ್ಥಿಕತೆ ಮತ್ತು ರಾಜಕೀಯ ವ್ಯವಸ್ಥೆಗಳು ಹಿಂದೆಂದೂ ಕಾಣದ ರೀತಿಯಲ್ಲಿ ಒಟ್ಟುಗೂಡಿ ಹೆಜ್ಜೆ ಹಾಕುವಂಥ ಸನ್ನಿವೇಶ ನಿರ್ಮಾಣವಾಗಿದೆ. ಲಸಿಕೆ ಅಭಿವೃದ್ಧಿ ಮತ್ತು ಉತ್ಪಾದನೆಯ ನಿಟ್ಟಿನಲ್ಲಿ ಬಹುತೇಕ ರಾಷ್ಟ್ರಗಳು ಈಗ ಗಮನಾರ್ಹ ಹೆಜ್ಜೆಯಿಡುತ್ತಿವೆ. ಜಾಗತಿಕವಾಗಿ ಅಭಿವೃದ್ಧಿ ಹೊಂದುತ್ತಿರುವ ಅನೇಕ ಲಸಿಕೆಗಳಲ್ಲಿ ಕೆಲವು ಶೇ.90, ಶೇ.95ರ ವರೆಗೆ ಪರಿಣಾಮಕಾರಿತ್ವ ತೋರುತ್ತಿರುವ ವರದಿಗಳು ಬರುತ್ತಿವೆ.

ಫೈಜರ್‌, ಮಾಡರ್ನಾ, ಆಕ್ಸ್‌ ಫ‌ರ್ಡ್‌ ಲಸಿಕೆಗಳು ಜಾಗತಿಕ ಆರೋಗ್ಯ ವ್ಯವಸ್ಥೆ ತುದಿಗಾಲ ಮೇಲೆ ನಿಲ್ಲುವಂತೆ ಮಾಡಿವೆ.
ಇನ್ನೇನು ಕೆಲವು ತಿಂಗಳಲ್ಲೇ ಭಾರತದಲ್ಲೂ ಲಸಿಕೆಗಳು ಜನೋಪಯೋಗಕ್ಕೆ ಬರುವ ಸಾಧ್ಯತೆಗಳು ಗೋಚರಿಸುತ್ತಿವೆ. ಆದರೆ ಲಸಿಕೆ ಅಭಿವೃದ್ಧಿಯಷ್ಟೇ ಮುಖ್ಯವಾದದ್ದು, ಅವುಗಳ ಡೋಸ್‌ಗಳ ಉತ್ಪಾದನೆ, ಶೇಖರಣೆ ಮತ್ತು ಹಂಚಿಕೆ. ಈ ವಿಚಾರವಾಗಿ ಮಾತನಾಡಿರುವ ಕೇಂದ್ರ ಆರೋಗ್ಯ ಸಚಿವ ಡಾ| ಹರ್ಷವರ್ಧನ್‌, ಭಾರತವು ಮೊದಲ ಹಂತದ ಭಾಗವಾಗಿ ದೇಶದ 25ರಿಂದ 30 ಕೋಟಿ ಜನರಿಗೆ ಲಸಿಕೆ ಒದಗಿಸುವ ಸಿದ್ಧತೆ ಮಾಡಿಕೊಂಡಿದೆ ಎಂದು ಹೇಳಿದ್ದಾರೆ.

ಪ್ರತೀ ರಾಜ್ಯದಲ್ಲೂ ಲಸಿಕೆಯ ಹಂಚಿಕೆಗಾಗಿ ವಿಶೇಷ ತಂಡಗಳನ್ನು, ಶೇಖರಣಾ ಘಟಕಗಳನ್ನು ಸ್ಥಾಪಿಸಲೂ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಸಜ್ಜಾಗಿವೆ. ಸೀರಂ ಇನ್ಸ್‌ಟಿಟ್ಯೂಟ್‌ ಆಫ್ ಇಂಡಿಯಾದಂಥ ಖಾಸಗಿ ಕಂಪೆನಿಗಳೂ ಬೃಹತ್‌ ಪ್ರಮಾಣದಲ್ಲಿ ಡೋಸ್‌ಗಳ ಉತ್ಪಾದನೆಯ ಭರವಸೆಯನ್ನೂ ನೀಡಿವೆ. ಅನ್ಯ ದೇಶಗಳ ಲಸಿಕೆಗಳ ಉತ್ಪಾದನೆಯ ಒಡಂಬಡಿಕೆಗಳ ಜತೆ ಜತೆಗೇ ಪ್ರಯೋಗ ಹಂತದಲ್ಲಿರುವ ಲಸಿಕೆಗಳ ಅಭಿವೃದ್ಧಿಗೂ ಭಾರತ ಒತ್ತು ನೀಡುತ್ತಿದೆ.

ಪರಿಣತರ ಪ್ರಕಾರ, ವ್ಯಾಕ್ಸಿನೇಷನ್‌ ವಿಚಾರದಲ್ಲಿ ಭಾರತ, ಚೀನದಂಥ ರಾಷ್ಟ್ರ ಗಳ ಅನುಭವ ಬಲಿಷ್ಠವಾಗಿರುವುದರಿಂದ, ಈ ವಲಯದಲ್ಲಿನ ನೆಟ್ ವರ್ಕ್‌ ಕೂಡ ಉತ್ತಮವಾಗಿದ. ಅನ್ಯ ದೇಶಗಳಿಗೆ ಹೋಲಿಸಿದರೆ ನಮ್ಮಲ್ಲಿ ಲಸಿಕಾಕರಣ ಪ್ರಕ್ರಿಯೆಯ ಬಗ್ಗೆ ಆತಂಕ ಪಡುವ ಅಗತ್ಯ ಅಷ್ಟಾಗಿ ಇಲ್ಲ. ಆದರೂ ಆರಂಭದಲ್ಲಿ ಕೆಲವು ಸಮಸ್ಯೆಗಳು ಖಂಡಿತ ಎದುರಾಗುತ್ತವೆ. ಅತೀ ಕಡಿಮೆ ಅವಧಿಯಲ್ಲೇ ದೇಶಾದ್ಯಂತ ಲಸಿಕೆ ವಿತರಿಸಬೇಕೆಂದರೆ ಲಸಿಕೆಯ ಶೇಖರಣೆ, ಸಾಗಣೆಯ ವಿಚಾರದಲ್ಲಿ ಹಲವು ವಿಘ್ನಗಳು ಎದುರಾಗಬಹುದು.

ಅಂಥ ಸಮಸ್ಯೆಗಳ ನಿವಾರಣೆಗೆ ರಾಜ್ಯ ಸರಕಾರಗಳು ಕೇಂದ್ರದ ಜತೆಗೆ ಹೆಚ್ಚು ಸಕ್ರಿಯವಾಗಿ ಜವಾಬ್ದಾರಿ ವಹಿಸಿಕೊಳ್ಳಬೇಕಾಗುತ್ತದೆ. ಇನ್ನು ಕೇವಲ ಒಂದೇ ಲಸಿಕೆ ಬರುತ್ತದೆಯೇ ಅಥವಾ ಹಲವು ಕಂಪೆನಿಗಳ ಲಸಿಕೆಗಳು ಬರುತ್ತವಾ ಎನ್ನುವ ಪ್ರಶ್ನೆಯೂ ಸಾರ್ವಜನಿಕರಿಗಿದೆ. ಲಸಿಕೆಯ ಬೆಲೆಯ ವಿಚಾರದಲ್ಲೂ ಗೊಂದಲ ಉಂಟಾಗಬಹುದಾದ ಸಾಧ್ಯತೆ ಇದೆ. ಈ ಕಾರಣಕ್ಕಾಗಿಯೇ, ಉಚಿತವಾಗಿ ಅಥವಾ ಸಬ್ಸಿಡಿ ದರದಲ್ಲಿ ಲಸಿಕೆ ಸಿಗುವಂತೆ ಮಾಡಲು ಸರಕಾರಗಳು ಖಾಸಗಿ ಕಂಪೆನಿಗಳ ಜತೆಗೆ ಒಡಂಬಡಿಕೆ ಮಾಡಿಕೊಳ್ಳಬೇಕು. ಇದರಿಂದ ಸರಕಾರದ ಬೊಕ್ಕಸದ ಮೇಲೆ ಹೊರೆ ಉಂಟಾಗಬಹುದಾದರೂ, ದೇಶವಾಸಿಗಳ ಸ್ವಾಸ್ಥ್ಯ ಸುಧಾರಣೆಯು, ದೇಶದ ಆರ್ಥಿಕತೆಯ ಸ್ವಾಸ್ಥ್ಯವನ್ನೂ ಸುಧಾರಿಸುತ್ತದೆ ಎನ್ನುವುದರಲ್ಲಿ ಸಂಶಯವಿಲ್ಲ. ಇನ್ನು ಯಾವ ಲಸಿಕೆಯು ಐಚ್ಛಿಕ ಯಾವುದು ಅತ್ಯವಶ್ಯಕ ಎನ್ನುವ ವಿಚಾರದಲ್ಲೂ ಗೊಂದಲ ಸೃಷ್ಟಿಯಾಗದಂತೆ ನೋಡಿಕೊಳ್ಳಬೇಕಿದೆ.

ಟಾಪ್ ನ್ಯೂಸ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ

EVM VVPAT case:  ಚುನಾವಣಾ ಪ್ರಕ್ರಿಯೆಯಲ್ಲಿ ಪಾವಿತ್ರ್ಯತೆ ಇರಬೇಕು: ಆಯೋಗಕ್ಕೆ ಸುಪ್ರೀಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

ಅಣ್ವಸ್ತ್ರಸಜ್ಜಿತ ರಾಷ್ಟ್ರಗಳು ವಿವೇಕದಿಂದ ವರ್ತಿಸಲಿ

War: ಮತ್ತೆ ಯುದ್ಧ ಬೇಡ

War: ಮತ್ತೆ ಯುದ್ಧ ಬೇಡ-ಮೊದಲ ಬಾರಿ ನೇರಾನೇರ ಹಣಾಹಣಿ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

PU: ಕನ್ನಡ ಮಾಧ್ಯಮದ ಕಡಿಮೆ ಫ‌ಲಿತಾಂಶ ಚಿಂತನಾರ್ಹ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

West Bengal; ಕೇಂದ್ರೀಯ ತನಿಖಾ ಸಂಸ್ಥೆಗಳ ಮೇಲಣ ದಾಳಿ ಅಕ್ಷಮ್ಯ

7-rbi

Editorial: ರೆಪೊ ದರದಲ್ಲಿ ಯಥಾಸ್ಥಿತಿ: ಆರ್‌ಬಿಐ ಜಾಣ್ಮೆಯ ನಡೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

18

Honesty: ಪ್ರಾಮಾಣಿಕರಿಗಿದು ಕಾಲವಲ್ಲ…

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.