ಲಸಿಕೆ; ಶೇ.0.01ರಷ್ಟು ಮಂದಿಗೆ ಮಾತ್ರ ಪ್ರತಿಕೂಲ ಪರಿಣಾಮ
Team Udayavani, Jun 14, 2021, 9:34 PM IST
ನವ ದೆಹಲಿ: ಭಾರತದಲ್ಲಿ ಶೇ.0.01ರಷ್ಟು ಮಂದಿಯ ಮೇಲೆ ಮಾತ್ರ ಕೊರೊನಾ ಲಸಿಕೆಯು ಪ್ರತಿಕೂಲ ಪರಿಣಾಮ ಬೀರಿದೆ. ಜನವರಿ 16ರಿಂದ ಜೂನ್ 7ರವರೆಗೆ 23.5 ಕೋಟಿ ಡೋಸ್ ಗಳನ್ನು ನೀಡಲಾಗಿದ್ದು, ಆ ಪೈಕಿ ಸುಮಾರು 26 ಸಾವಿರ ಮಂದಿಗಷ್ಟೇ ಸಮಸ್ಯೆ ಕಾಣಿಸಿಕೊಂಡಿದೆ ಮತ್ತು 488 ಸಾವು ಸಂಭವಿಸಿದೆ ಎಂದು ಕೇಂದ್ರ ಸರ್ಕಾರದ ದತ್ತಾಂಶಗಳನ್ನು ಆಧರಿಸಿ ಸಿಎನ್ಎನ್-ನ್ಯೂಸ್18 ವರದಿ ಮಾಡಿದೆ.
ಅಂದರೆ, 143 ದಿನಗಳ ಅವಧಿಯಲ್ಲಿ ಪ್ರತಿ 10 ಸಾವಿರ ಜನರಲ್ಲಿ ಒಬ್ಬರಿಗೆ ಮಾತ್ರ ಲಸಿಕೆ ಪ್ರತಿಕೂಲ ಪರಿಣಾಮ ಬೀರಿದೆ. ಪ್ರತಿ 10 ಲಕ್ಷ ಮಂದಿಯಲ್ಲಿ ಇಬ್ಬರು ಮಾತ್ರ ಸಾವಿಗೀಡಾಗಿದ್ದಾರೆ ಎಂಬುದು ಈ ದತ್ತಾಂಶಗಳಿಂದ ತಿಳಿದುಬಂದಿದೆ.
ಈ ನಡುವೆ, ಪಿಎಂ ಕೇರ್ಸ್ ನಿಧಿಯನ್ನು ಬಳಸಿಕೊಂಡು ಹಲವು ಜಿಲ್ಲೆಗಳಲ್ಲಿ ಸುಮಾರು 850 ಆಕ್ಸಿಜನ್ ಸ್ಥಾವರಗಳನ್ನು ಸ್ಥಾಪಿಸಲಾಗಿದೆ ಎಂದು ಭಾರತೀಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಮಾಹಿತಿ ನೀಡಿದೆ. ಸೋಮವಾರ ಕೇಂದ್ರ ಸರ್ಕಾರವು ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ಹೆಚ್ಚುವರಿ 1.06 ಲಕ್ಷ ವಯಲ್ ಗಳಷ್ಟು ಔಷಧವನ್ನು ರಾಜ್ಯಗಳಿಗೆ ಹಂಚಿಕೆ ಮಾಡಿದೆ.
ಇದನ್ನೂ ಓದಿ: 2020-21ರ ಆರ್ಥಿಕ ವರ್ಷದಲ್ಲಿ ವಿಪ್ರೋ ಸಂಸ್ಥೆಯ ಸಿಇಒ ಪಡೆದ ವಾರ್ಷಿಕ ವೇತನ 64 ಕೋಟಿ..!
ಇದೇ ವೇಳೆ, ಕೊರೊನಾ ಸೋಂಕು ಬಂದು ಗುಣಮುಖರಾದವರು ಒಂದು ಡೋಸ್ ಲಸಿಕೆ ಪಡೆದರೆ ಸಾಲುತ್ತದೆ ಎಂದು ಹೊಸ ಅಧ್ಯಯನ ವರದಿ ಹೇಳಿದೆ. ಜ.16ರಿಂದ ಫೆ.5ರವರೆಗೆ ಲಸಿಕೆ ಪಡೆದ 260 ಆರೋಗ್ಯ ಸಿಬ್ಬಂದಿಯ ಮೇಲೆ ಪ್ರಯೋಗ ನಡೆಸಿ ಈ ವರದಿ ತಯಾರಿಸಲಾಗಿದೆ.
ನೊವಾವ್ಯಾಕ್ಸ್ ಶೇ.90 ಪರಿಣಾಮಕಾರಿ
ಅಮೆರಿಕದ ನೊವಾವ್ಯಾಕ್ಸ್ ಲಸಿಕೆಯು ಕೊರೊನಾ ಸೋಂಕಿನ ಮೇಲೆ ಶೇ.90ರಷ್ಟು ಪರಿಣಾಮಕಾರಿಯಾಗಿದೆ ಎಂದು ಕಂಪನಿ ಹೇಳಿದ್ದು, ಲಸಿಕೆಯ 3ನೇ ಹಂತದ ಪ್ರಯೋಗದ ವರದಿಯನ್ನು ಬಹಿರಂಗ ಪಡಿಸಿದೆ. ಭಾರತದಲ್ಲಿ ಈ ಲಸಿಕೆಯನ್ನು ಸೀರಂ ಇನ್ಸ್ಟಿಟ್ಯೂಟ್ ತಯಾರಿಸಲಿದೆ. ಇನ್ನೊಂದೆಡೆ, ರಷ್ಯಾದಲ್ಲಿ 8-12 ವಯಸ್ಸಿನ ಮಕ್ಕಳ ಮೇಲೆ ಸ್ಪುಟ್ನಿಕ್ ವಿ ಲಸಿಕೆಯ ಪ್ರಯೋಗ ಆರಂಭವಾಗಿದ್ದು, ಸೆಪ್ಟೆಂಬರ್ ನಲ್ಲಿ ಲಸಿಕೆಯನ್ನು ಬಿಡುಗಡೆ ಮಾಡುವುದಾಗಿ ರಷ್ಯಾ ತಿಳಿಸಿದೆ. ನವದೆಹಲಿಯ ಏಮ್ಸ್ ನಲ್ಲಿ 6-12 ವಯೋಮಾನದವರ ಮೇಲೆ ಕೊವ್ಯಾಕ್ಸಿನ್ ಪ್ರಯೋಗಕ್ಕೆ ಸಿದ್ಧತೆ ಶುರುವಾಗಿದ್ದು, ಮಂಗಳವಾರದಿಂದ ಬಾಲ ಪ್ರತಿನಿಧಿಗಳ ನೇಮಕ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Telangana Election 2024: ಕಳೆಗುಂದಿದ ಬಿಆರ್ಎಸ್: ಕಾಂಗ್ರೆಸ್-ಬಿಜೆಪಿ ಕಾದಾಟ
Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ
MUST WATCH
ಹೊಸ ಸೇರ್ಪಡೆ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil