ಲಸಿಕಾ ಅಭಿಯಾನ 100 ಮೀ. ಓಟ ಸ್ಪರ್ಧೆಯಲ್ಲ. ಇದೊಂದು ಮ್ಯಾರಥಾನ್‌: ಕೇಂದ್ರ


Team Udayavani, Jul 3, 2021, 7:25 AM IST

ಲಸಿಕಾ ಅಭಿಯಾನ 100 ಮೀ. ಓಟ ಸ್ಪರ್ಧೆಯಲ್ಲ. ಇದೊಂದು ಮ್ಯಾರಥಾನ್‌: ಕೇಂದ್ರ

ಹೊಸದಿಲ್ಲಿ: ದೇಶದ ಕೊನೆಯ ಪ್ರಜೆಗೂ ಲಸಿಕೆ ಹಾಕುವುದೇ ಸರಕಾರದ ಗುರಿ. ಜೂ.21ರ ಬಳಿಕ ಪ್ರತೀ ದಿನ ಸರಿ ಸುಮಾರು 50 ಲಕ್ಷ ಮಂದಿಗೆ ಅಂದರೆ ನಾರ್ವೆ ದೇಶದ ಜನಸಂಖ್ಯೆಯಷ್ಟು ಮಂದಿಗೆ ಲಸಿಕೆ ಹಾಕಲಾಗುತ್ತದೆ ಎಂದು ನೀತಿ ಆಯೋಗದ ಸದಸ್ಯ ಡಾ| ವಿ.ಕೆ.ಪೌಲ್‌ ಹೇಳಿದ್ದಾರೆ. ಹೊಸದಿಲ್ಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಸಿಕೆ ಹಾಕುವುದೆಂದರೆ ಪ್ರತೀ ದಿನದ ಸಾಂಖೀಕ ಗುರಿ ಅಲ್ಲ. ಹೀಗಾಗಿ ಲಸಿಕೆ ಹಾಕುವ ಪ್ರಕ್ರಿಯೆ 100 ಮೀಟರ್‌ ಓಟದಂತೆ ಅಲ್ಲ. ಬದಲಾಗಿ ಅದೊಂದು ಮ್ಯಾರಥಾನ್‌ ಎಂದು ಪೌಲ್‌ ಹೇಳಿ ದ್ದಾರೆ. ಜೂ.21ರ ಬಳಿಕ ಲಸಿಕೆ ಹಾಕುವ ಪ್ರಮಾಣ ಏಕೆ ಕಡಿಮೆಯಾಯಿತು ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರವಾಗಿ ಈ ಮಾತುಗಳನ್ನು ಪೌಲ್‌ ಹೇಳಿದ್ದಾರೆ. ಕೇವಲ ದೈನಂದಿನ ಗುರಿಯ ಬಗ್ಗೆಯೇ ಯೋಚನೆ ಮಾಡುತ್ತಿದ್ದರೆ, ದೀರ್ಘ‌ ಕಾಲಿಕವಾಗಿರುವ ಈ ಪ್ರಕ್ರಿಯೆ ಪೂರ್ತಿಗೊಳಿಸಲು ಅಡ್ಡಿಯಾದೀತು ಎಂದು ಹೇಳಲು ಪೌಲ್‌ ಮರೆಯಲಿಲ್ಲ.

ಪ್ರಗತಿಯಲ್ಲಿ: ಅಮೆರಿಕದ ಜಾನ್ಸನ್‌ ಆ್ಯಂಡ್‌ ಜಾನ್ಸನ್‌ ಸಿಂಗಲ್‌ ಡೋಸ್‌ ಲಸಿಕೆ ಪಡೆಯುವುದರ ಬಗ್ಗೆ ಇನ್ನೂ ಮಾತುಕತೆಗಳು ಪ್ರಗತಿಯಲ್ಲಿವೆ. ಹೈದರಾಬಾದ್‌ನ ಬಯಲಾಜಿಕಲ್‌ ಇ ಸಂಸ್ಥೆಯಲ್ಲಿ ಅದನ್ನು ಉತ್ಪಾದಿಸುವ ಬಗ್ಗೆಯೂ ಪರಿಶೀಲನೆ ನಡೆಸಲಾಗುತ್ತಿದೆ ಎಂದರು ಪೌಲ್‌.

ವೈಜ್ಞಾನಿಕವಾಗಿ ಸಾಧ್ಯ: ಸೋಂಕು ಪ್ರತಿಬಂಧಕ ಕ್ರಮಗಳನ್ನು ಸಮರ್ಪಕವಾಗಿ ಪಾಲಿಸಿದರೆ, ಮೂರನೇ ಅಲೆಯನ್ನು ಯಶಸ್ವಿಯಾಗಿ ಎದುರಿಸಲು ಸಾಧ್ಯವಿದೆ. ಇದರ ಹೊರತಾಗಿಯೂ ಸಂಭಾವ್ಯ ಪರಿಸ್ಥಿತಿಗೆ ದೇಶ ಸಿದ್ಧತೆ ಮಾಡಿಕೊಳ್ಳುತ್ತಿದೆ ಎಂದು ವಿ.ಕೆ. ಪೌಲ್‌ ಇದೇ ಸಂದರ್ಭದಲ್ಲಿ ತಿಳಿಸಿದರು.

ಶೇ.86ರಷ್ಟು ಇಳಿಕೆ: ದೇಶದಲ್ಲಿ 2ನೇ ಅಲೆಯ ಸೋಂಕು ಸಂಖ್ಯೆಯ ಗರಿಷ್ಠ ಮಿತಿಯ ದಿನಗಳಿಗೆ ಹೋಲಿಕೆ ಮಾಡಿದರೆ ಸದ್ಯ ಸಕ್ರಿಯ ಸಂಖ್ಯೆಯ ಪ್ರಮಾಣ ಶೇ.86ಕ್ಕೆ ಇಳಿಕೆಯಾಗಿದೆ. ಮೇಯಲ್ಲಿ ಚೇತರಿಕೆ ಪ್ರಮಾಣ ಶೇ.81 ಇದ್ದದ್ದು ಈಗ ಶೇ.97ಕ್ಕೆ ಏರಿಕೆಯಾಗಿದೆ. ಜೂ.23-29ರ ವಾರದಲ್ಲಿ 71 ಜಿಲ್ಲೆಗಳಲ್ಲಿ ವಾರದ ಪಾಸಿಟಿವಿಟಿ ಪ್ರಮಾಣ ಶೇ.100 ದಾಖಲಾಗಿತ್ತು ಎಂದಿದ್ದಾರೆ ಆರೋಗ್ಯ ಖಾತೆ ಜಂಟಿ ಕಾರ್ಯದರ್ಶಿ ಲವ ಅಗರ್ವಾಲ್‌.

34.41 ಕೋಟಿ: ಗುರುವಾರ ರಾತ್ರಿ 7 ಗಂಟೆಯ ವರೆಗೆ ದೇಶಾದ್ಯಂತ 34.41 ಕೋಟಿ ಮಂದಿಗೆ ಲಸಿಕೆ ಹಾಕಲಾಗಿದೆ. 18-44 ವರ್ಷ ಮೇಲ್ಪಟ್ಟವರಿಗೆ ಇದುವರೆಗೆ 9.85 ಕೋಟಿ ಡೋಸ್‌ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಸರಕಾರ ತಿಳಿಸಿದೆ.

ವಿಸ್ತರಣೆ: ತಮಿಳುನಾಡಿನಲ್ಲಿ ಕೊರೊನಾ ಲಾಕ್‌ಡೌನ್‌ ಅನ್ನು ಜು.12ರ ವರೆಗೆ ಹಲವು ರಿಯಾಯಿತಿ ಗಳ ಸಹಿತ ವಿಸ್ತರಿಸಲಾಗಿದೆ. ಸೋಮವಾರ ದಿಂದ ಉತ್ತರ ಪ್ರದೇಶದಲ್ಲಿ ಜಿಮ್‌ಗಳು, ಮಲ್ಟಿಪ್ಲೆಕ್ಸ್‌ಗಳನ್ನು ತೆರೆಯಲು ಅನುಮತಿ ನೀಡಲಾಗಿದೆ.

ಚೇತರಿಕೆ ಪ್ರಮಾಣ ಶೇ.97: ದೇಶದಲ್ಲಿ ಸೋಂಕಿ ನಿಂದ ಚೇತರಿಸಿಕೊಳ್ಳುವವರ ಪ್ರಮಾಣ ಶೇ.97.01ಕ್ಕೆ ಏರಿಕೆಯಾಗಿದೆ. ಗುರುವಾರದಿಂದ ಶುಕ್ರವಾರದ ಅವಧಿಯಲ್ಲಿ ದೇಶದಲ್ಲಿ 46,617 ಹೊಸ ಪ್ರಕರಣಗಳು ದೃಢಪಟ್ಟಿವೆ. ಇದೇ ಅವಧಿ ಯಲ್ಲಿ 853 ಮಂದಿ ಸೋಂಕಿನಿಂದಾಗಿ ಅಸುನೀಗಿದ್ದಾರೆ.

ಡೆಲ್ಟಾ ರೂಪಾಂತರಿ ಸೋಂಕು ಅಪಾಯಕಾರಿ ಎಂದು ಡಬ್ಲ್ಯುಎಚ್‌ಒ ಮುಖ್ಯಸ್ಥ ಟೆಡೋìಸ್‌ ಅಧೊನಮ್‌ ಘೇಬ್ರಯೋಸಿಸ್‌ ಎಚ್ಚರಿಸಿದ್ದಾರೆ. ಇದರ ಜತೆಗೆ ಸದ್ಯ ನಡೆಯುತ್ತಿರುವ ಯೂರೋ ಕಪ್‌ ಫ‌ುಟ್ಬಾಲ್‌, ವಿಂಬಲ್ಡನ್‌ ಟೆನಿಸ್‌ ಕೂಟವೂ ಸೂಪರ್‌ ಸ್ಪೆಡರ್‌ ಆಗುವ ಸಾಧ್ಯತೆ ಇದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ತಪ್ಪಿದ ಅನಾಹುತ: ಮಧ್ಯಪ್ರದೇಶದ ಛಿಂದ್ವಾರಾ ಜಿಲ್ಲೆಯಲ್ಲಿ ಗುರುವಾರ ಲಸಿಕೆ ಪಡೆಯಲು ನೂಕು ನುಗ್ಗಲು ಉಂಟಾಗಿದೆ. ಸಣ್ಣ ಹಾಲ್‌ನಲ್ಲಿ ಲಸಿಕೆ ಪಡೆಯಲು ಜನರು ಮುಗಿ ಬಿದ್ದಿದ್ದರಿಂದ ಈ ಸಮಸ್ಯೆ ಉಂಟಾಗಿದೆ. ಅದರ ವಿಡಿಯೋ ವೈರಲ್‌ ಆಗಿದೆ.

ಟಾಪ್ ನ್ಯೂಸ್

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.