ಎಲ್ಲ ಸೇನಾನಿಗಳಿಗೆ ಪರಿಹಾರ ಸಿಗಲಿ : ಕೋವಿಡ್ ಯುದ್ಧನಿರತ ವಿವಿಧ ಇಲಾಖೆಗಳ ಯೋಧರು


Team Udayavani, May 25, 2021, 7:25 AM IST

ಎಲ್ಲ ಸೇನಾನಿಗಳಿಗೆ ಪರಿಹಾರ ಸಿಗಲಿ : ಕೋವಿಡ್ ಯುದ್ಧನಿರತ ವಿವಿಧ ಇಲಾಖೆಗಳ ಯೋಧರು

ಕೊರೊನಾ ವಿರುದ್ಧದ ಹೋರಾಟದಲ್ಲಿ ಮುಂಚೂಣಿ ಕಾರ್ಯಕರ್ತರ ಸೇವೆ ಗಣನೀಯ. ಇದನ್ನು ಯುದ್ಧವೆಂದೇ ಪರಿಗಣಿ ಸಿರುವ ಸರಕಾರಗಳು ಕೊರೊನಾ ವಿರುದ್ಧ ಅವಿರತ ಹೋರಾಟ ನಡೆಸುತ್ತಲೇ ಇವೆ. ಇದರಲ್ಲಿ ಹಲವಾರು ಯೋಧರನ್ನು ಕಳೆದುಕೊಂಡಿದ್ದೇವೆ. ಜೀವ ಪಣಕ್ಕಿಟ್ಟು ಹೋರಾಡುತ್ತಿರುವ ಇಂಥ ಯೋಧರ ಸಾವಿಗೆ ಬೆಲೆ ಸಿಗುತ್ತಿಲ್ಲ ಎಂಬುದು ದುರದೃಷ್ಟಕರ. ಸದ್ಯ ವೈದ್ಯರು ಮತ್ತು ಪೊಲೀಸರಿಗೆ ಮಾತ್ರ ಕೊರೊನಾ ವಿಮೆ ಸೌಲಭ್ಯ ಸಿಕ್ಕಿದ್ದರೆ ಉಳಿದವರಿಗೆ ಸಿಕ್ಕಿಲ್ಲ. ಇವರಿಗೂ ಬೇಗನೇ ಪರಿ ಹಾರ ಸಿಗಲಿ ಎಂಬುದು ಉದಯವಾಣಿ ಆಶಯ.

ಗುತ್ತಿಗೆ ವೈದ್ಯಕೀಯ ಸಿಬಂದಿ: 26 ಸಾವು
ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗುತ್ತಿಗೆ, ಹೊರ ಗುತ್ತಿಗೆ ನೌಕರರು ಈ ಹೋರಾಟ ದಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. 26 ವೈದ್ಯಕೀಯ ಸಿಬಂದಿ ಜೀವ ಕಳೆದುಕೊಂಡಿದ್ದಾರೆ. ಆದರೆ ಇದುವರೆಗೂ ಮೃತರ ಕುಟುಂಬಗಳಿಗೆ ಪರಿಹಾರ ಒದಗಿಸಿಲ್ಲ ಎಂದು ಗುತ್ತಿಗೆ, ಹೊರ ಗುತ್ತಿಗೆ ವೈದ್ಯಕೀಯ ಸಿಬಂದಿಯ ಸಂಘಟನೆ ತಿಳಿಸಿದೆ.

ಆಶಾ ಕಾರ್ಯಕರ್ತೆಯರು: 19 ಸಾವು
ಕೊರೊನಾ ಕರ್ತವ್ಯ ಸಂದರ್ಭ ಕಳೆದ ವರ್ಷ 12, ಈ ವರ್ಷ 7 ಮಂದಿ ಆಶಾ ಕಾರ್ಯಕರ್ತೆಯರು ಜೀವ ಕಳೆದುಕೊಂಡಿದ್ದಾರೆ. ಅವರಲ್ಲಿ ಕೇವಲ ಒಬ್ಬರಿಗೆ ಮಾತ್ರ ಪರಿಹಾರ ದೊರೆತಿದ್ದು, ಉಳಿದವರ ಕುಟುಂಬಕ್ಕೆ ಪರಿಹಾರ ಇನ್ನೂ ಮರಿಚೀಕೆಯಾಗಿದೆ. ತಾಂತ್ರಿಕ ಕಾರಣಗಳಿಂದ ಪರಿಹಾರ ವಿಳಂಬವಾಗುತ್ತಿದ್ದು, ನಿಧನ ಹೊಂದಿದವರ ಕುಟುಂಬಕ್ಕೆ ಪರಿಹಾರ ಗಗನಕುಸುಮವಾಗಿದೆ.

ಪಂಚಾಯತ್‌ ಇಲಾಖೆ ಸಿಬಂದಿ: 63 ಸಾವು
ಕಳೆದ ವರ್ಷ 23, ಈ ವರ್ಷ 40 ಮಂದಿ ಗ್ರಾಮೀಣಾಭಿವೃದ್ಧಿ ಮತ್ತು ಪಂ. ರಾಜ್‌ ಇಲಾಖೆಯ ಸಿಬಂದಿ ಮೃತಪಟ್ಟಿದ್ದಾರೆ. ಇದುವರೆಗೆ ಒಬ್ಬರಿಗೆ ಮಾತ್ರ ಪರಿಹಾರ ದೊರೆತಿದೆ. ಪಂಚಾಯತ್‌ ಸಿಬಂದಿ ಸರಕಾರಿ ನೌಕರರಾಗಿದ್ದು, ಸರಕಾರದಿಂದ ಪರಿಹಾರ ದೊರೆಯುತ್ತದೆ. ವಿಮೆ ಪರಿಹಾರದ ಬಗ್ಗೆ ಇಲಾಖೆ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ.

ಕೃಷಿ ಇಲಾಖೆ ಸಿಬಂದಿ : 9 ಸಾವು
ಕೊರೊನಾ ಸಂದರ್ಭದಲ್ಲಿ ಕೃಷಿ ಇಲಾಖೆಯನ್ನು ಅಗತ್ಯ ಸೇವೆ ವ್ಯಾಪ್ತಿಗೆ ಒಳಪಡಿಸಲಾಗಿದೆ. ಹೀಗಾಗಿ ಲಾಕ್‌ಡೌನ್‌ ಸಂದರ್ಭದಲ್ಲಿಯೂ ಕೃಷಿ ಇಲಾಖೆಯ ಸಿಬಂದಿ ಗ್ರಾಮೀಣ ಭಾಗದಲ್ಲಿ ರೈತರೊಂದಿಗೆ ನಿರಂತರ ಸಂಪರ್ಕ ಇರಿಸಿಕೊಂಡಿದ್ದಾರೆ. ಹೀಗಾಗಿ ಇವರೂ ಕೊರೊನಾ ಬಾಧಿತರಾಗಿದ್ದು, ಕರ್ತವ್ಯ ಸಂದರ್ಭದಲ್ಲಿ ಸೋಂಕಿನಿಂದ 9 ಜನ ಸಾವಿಗೀಡಾಗಿದ್ದಾರೆ. ಆದರೆ ಪರಿಹಾರ ಸಿಕ್ಕಿಲ್ಲ.

ವೈದ್ಯರು: 50 ಸಾವು
ಕೊರೊನಾ ಸೋಂಕಿನಿಂದ ರಾಜ್ಯದಲ್ಲಿ ಕಳೆದ ವರ್ಷ 40 ಜನ ವೈದ್ಯರು ಜೀವ ತೆತ್ತಿದ್ದಾರೆ. ಈ ವರ್ಷ 10 ಜನ ವೈದ್ಯರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ. ಅವರಲ್ಲಿ ಮೂವರು ಸರಕಾರಿ ವೈದ್ಯರು. ವೈದ್ಯರನ್ನು ಸರಕಾರ ಕೊರೊನಾ ಸೇನಾನಿಗಳು ಎಂದು ಆರಂಭದಿಂದಲೂ ಪರಿಗಣಿಸಿದೆ. ವೈದ್ಯರು ನಿಧನ ಹೊಂದಿದರೆ ಅವರ ಕುಟುಂಬಕ್ಕೆ ಕೇಂದ್ರ ಸರಕಾರದಿಂದ 50 ಲಕ್ಷ ರೂ. ಪರಿಹಾರ ನೀಡಲಾಗುತ್ತಿದೆ. ರಾಜ್ಯದಲ್ಲಿ ಮೃತಪಟ್ಟ ಬಹುತೇಕ ವೈದ್ಯರ ಕುಟುಂಬಕ್ಕೆ ಸೂಕ್ತ ಪರಿಹಾರ ದೊರಕಿಸಲಾಗಿದೆ.

ಪೋಲೀಸರು: 146 ಸಾವು
ಪೋಲೀಸರು ಮುಂಚೂಣಿ ಯೋಧರಾಗಿದ್ದು, ಎರಡು ವರ್ಷಗಳಲ್ಲಿ 146 ಮಂದಿ ಮೃತಪಟ್ಟಿದ್ದಾರೆ. ಕಳೆದ ವರ್ಷ 103, ಈ ವರ್ಷ 43 ಜನ ಪೋಲೀಸರು ಜೀವ ತೆತ್ತಿದ್ದಾರೆ. ಗೃಹ ಸಚಿವ ಬಸವರಾಜ ಬೊಮ್ಮಾಯಿ ಮತ್ತು ಡಿಜಿಪಿ ಪ್ರವೀಣ್‌ ಸೂದ್‌ ಮುತುವರ್ಜಿ ವಹಿಸಿದ್ದು, ಮೃತ ಪೊಲೀಸರ ಕುಟುಂಬಕ್ಕೆ 30 ಲಕ್ಷ ರೂ. ವಿಮೆ ಪರಿಹಾರ ಒದಗಿಸುವ ಕೆಲಸ ಮಾಡಲಾಗುತ್ತಿದೆ.

ಅಂಗನವಾಡಿ ಕಾರ್ಯಕರ್ತೆಯರು: 44 ಸಾವು
ಕಳೆದ ವರ್ಷ 25, ಈ ವರ್ಷ 19 ಅಂಗನವಾಡಿ ಕಾರ್ಯಕರ್ತೆ ಯರು ಸಾವಿಗೀಡಾಗಿದ್ದಾರೆ. ಇದುವರೆಗೆ ಐವರಿಗೆ ಮಾತ್ರ ಪರಿಹಾರ ನೀಡಲಾಗಿದೆ. 15 ಜನರಿಗೆ ಪರಿಹಾರ ನೀಡಲು ತಾಂತ್ರಿಕ ಕಾರಣದಿಂದ ವಿಳಂಬವಾಗಿದ್ದು, ಅವರಿಗೂ ಪರಿಹಾರ ನೀಡಲು ಇಲಾಖೆ ನಿರ್ಧರಿಸಿದೆ. ಈ ವರ್ಷ ನಿಧನ ಹೊಂದಿದ ಕಾರ್ಯಕರ್ತೆಯರ ಬಗ್ಗೆ ಇಲಾಖೆ ಅಧಿಕೃತ ಮಾಹಿತಿ ಕಲೆ ಹಾಕುತ್ತಿದೆ.

ಶಿಕ್ಷಕರು: 300 ಸಾವು
ಸರಕಾರ ಶಿಕ್ಷಕರನ್ನು ಕೊರೊನಾ ಕರ್ತವ್ಯಕ್ಕೆ ನಿಯೋಜಿಸುತ್ತಿದೆ. ಸೋಂಕಿನಿಂದ 300ಕ್ಕೂ ಹೆಚ್ಚು ಶಿಕ್ಷಕರು ನಿಧನ ಹೊಂದಿದ್ದಾರೆ. ಅಧಿಕೃತ ಮಾಹಿತಿ ನೀಡುವಂತೆ ಶಿಕ್ಷಣ ಇಲಾಖೆ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ. ಸರಕಾರ ಶಿಕ್ಷಕರನ್ನು ಇದುವರೆಗೆ ಮುಂಚೂಣಿ ಯೋಧರೆಂದು ಪರಿಗಣಿಸಿರಲಿಲ್ಲ. ಇದರಿಂದ ನಿಧನ ಹೊಂದಿದ ಶಿಕ್ಷಕರ ಕುಟುಂಬಕ್ಕೆ ಪರಿಹಾರ ಮರೀಚಿಕೆಯಾಗಿದೆ.

ಕಂದಾಯ ಇಲಾಖೆ: 43 ಸಾವು
ಕಂದಾಯ ಇಲಾಖೆ ಕೊರೊನಾ ನಿಯಂತ್ರಣದಲ್ಲಿ ಮಾತೃ ಇಲಾಖೆಯಾಗಿ ಕಾರ್ಯ ನಿರ್ವಹಿಸುತ್ತಿದೆ. ಗ್ರಾಮೀಣ ಮಟ್ಟದಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳು ಜನರೊಂದಿಗೆ ನೇರವಾಗಿ ಬೆರೆಯುತ್ತಿದ್ದಾರೆ. ಈ ವರೆಗೆ 43 ಮಂದಿ ಕೊರೊನಾದಿಂದ ಜೀವ ಕಳೆದುಕೊಂಡಿದ್ದಾರೆ. ಆದರೆ ಇದುವರೆಗೆ ಯಾರಿಗೂ ಸರಕಾರದಿಂದ ಪರಿಹಾರ ದೊರೆತಿಲ್ಲ.

– ಶಂಕರ ಪಾಗೋಜಿ 

ಟಾಪ್ ನ್ಯೂಸ್

4 children found alive in Colombian Amazon rain forest

ವಿಮಾನ ಅಪಘಾತದಲ್ಲಿ ನಾಪತ್ತೆ: 40 ದಿನಗಳ ಬಳಿಕ ಅಮೆಜಾನ್ ಕಾಡಿನಲ್ಲಿ ಪತ್ತೆಯಾದ 4 ಮಕ್ಕಳು

Balasore Tragedy; ಭೀಕರ ರೈಲ್ವೆ ದುರಂತದಲ್ಲಿ ಶವಾಗಾರವಾಗಿದ್ದ ಶಾಲೆ ನೆಲಸಮ

Balasore Tragedy; ಭೀಕರ ರೈಲ್ವೆ ದುರಂತದಲ್ಲಿ ಶವಾಗಾರವಾಗಿದ್ದ ಶಾಲೆ ನೆಲಸಮ

BIPARJOY ಚಂಡಮಾರುತ 24ಗಂಟೆಯಲ್ಲಿ ತೀವ್ರ ಸ್ವರೂಪ-ಕರಾವಳಿ ಭಾಗದಲ್ಲಿ ತೀವ್ರ ಮಳೆ ಸಾಧ್ಯತೆ

BIPARJOY ಚಂಡಮಾರುತ 24ಗಂಟೆಯಲ್ಲಿ ತೀವ್ರ ಸ್ವರೂಪ-ಕರಾವಳಿ ಭಾಗದಲ್ಲಿ ತೀವ್ರ ಮಳೆ ಸಾಧ್ಯತೆ

Human Milk Bank: ಎದೆ ಹಾಲು ಕೊರತೆ: 4 ಜಿಲ್ಲೆಯಲ್ಲಿ ಅಮೃತಧಾರೆ ಕೇಂದ್ರ

Human Milk Bank: ಎದೆ ಹಾಲು ಕೊರತೆ: 4 ಜಿಲ್ಲೆಯಲ್ಲಿ “ಅಮೃತಧಾರೆ ಕೇಂದ್ರ”

Tokyo airport

Tokyo airport ರನ್ ವೇಯಲ್ಲಿ ಮುಖಾಮುಖಿಯಾದ ಎರಡು ಪ್ಯಾಸೆಂಜರ್ ವಿಮಾನಗಳು

Vijayapura; 5ನೇ ಸ್ನಾತಕೋತ್ತರ ಪರೀಕ್ಷೆ ಬರೆಯುತ್ತಿರುವ 81ರ ವೃದ್ಧ

Vijayapura; 5ನೇ ಸ್ನಾತಕೋತ್ತರ ಪರೀಕ್ಷೆ ಬರೆಯುತ್ತಿರುವ 81ರ ವೃದ್ಧ

Shardul Thakur joins a list of elite names with his third successive fifty-plus score at The Oval

WTC Final 2023: ಬ್ರಾಡ್ಮನ್-  ಬಾರ್ಡರ್‌ ದಾಖಲೆ ಸರಿಗಟ್ಟಿದ ಶಾರ್ದೂಲ್ ಠಾಕೂರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪಠ್ಯ ಪರಿಷ್ಕರಣೆಗೆ ಮಾಜಿ ಸಚಿವರ ಸಲಹೆ ಪಡೆಯಲಿ: ಬಿಜೆಪಿ

ಪಠ್ಯ ಪರಿಷ್ಕರಣೆಗೆ ಮಾಜಿ ಸಚಿವರ ಸಲಹೆ ಪಡೆಯಲಿ: ಬಿಜೆಪಿ

ಮುಂದುವರಿದ ಜೆಡಿಎಸ್‌ “ಆತ್ಮಾವಲೋಕನ’

ಮುಂದುವರಿದ ಜೆಡಿಎಸ್‌ “ಆತ್ಮಾವಲೋಕನ’

bhima sankalpa

ಶೋಷಿತರಿಗೆ ಸಮಾನ ಅವಕಾಶಕ್ಕೆ ಬದ್ಧ -“ಭೀಮ ಸಂಕಲ್ಪ” ಸಮಾವೇಶಕ್ಕೆ ಸಿದ್ದರಾಮಯ್ಯ ಚಾಲನೆ

THUNDER LIGHTENING

Mansoon: ರಾಜ್ಯದ ಕೆಲವೆಡೆ ಮುಂದುವರಿದ ಮಳೆ

ಶಾಸಕರು ಜೂ. 30ರೊಳಗೆ ಆಸ್ತಿವಿವರ ಸಲ್ಲಿಸಿ: ಲೋಕಾಯುಕ್ತ

ಶಾಸಕರು ಜೂ. 30ರೊಳಗೆ ಆಸ್ತಿವಿವರ ಸಲ್ಲಿಸಿ: ಲೋಕಾಯುಕ್ತ

MUST WATCH

udayavani youtube

ಮನೆಯಲ್ಲಿಯೇ ಮಾಡಿ ರುಚಿಕರವಾದ ಎಗ್‌ ಘೀ ರೋಸ್ಟ್‌

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

ಹೊಸ ಸೇರ್ಪಡೆ

5-gangavathi

Gangavathi: ಲಘುವಿಮಾನ ಹಾರಾಟ; ಗಾಬರಿಗೊಂಡ ಜನತೆ; ಅಧಿಕಾರಿಗಳಿಗೆ ಮೊಬೈಲ್ ಕರೆ

4 children found alive in Colombian Amazon rain forest

ವಿಮಾನ ಅಪಘಾತದಲ್ಲಿ ನಾಪತ್ತೆ: 40 ದಿನಗಳ ಬಳಿಕ ಅಮೆಜಾನ್ ಕಾಡಿನಲ್ಲಿ ಪತ್ತೆಯಾದ 4 ಮಕ್ಕಳು

Balasore Tragedy; ಭೀಕರ ರೈಲ್ವೆ ದುರಂತದಲ್ಲಿ ಶವಾಗಾರವಾಗಿದ್ದ ಶಾಲೆ ನೆಲಸಮ

Balasore Tragedy; ಭೀಕರ ರೈಲ್ವೆ ದುರಂತದಲ್ಲಿ ಶವಾಗಾರವಾಗಿದ್ದ ಶಾಲೆ ನೆಲಸಮ

Kannada movie darbar review

Movie Review: ದರ್ಬಾರ್‌ ಒಳಗೊಂದು ನಗೆಹಬ್ಬ

BIPARJOY ಚಂಡಮಾರುತ 24ಗಂಟೆಯಲ್ಲಿ ತೀವ್ರ ಸ್ವರೂಪ-ಕರಾವಳಿ ಭಾಗದಲ್ಲಿ ತೀವ್ರ ಮಳೆ ಸಾಧ್ಯತೆ

BIPARJOY ಚಂಡಮಾರುತ 24ಗಂಟೆಯಲ್ಲಿ ತೀವ್ರ ಸ್ವರೂಪ-ಕರಾವಳಿ ಭಾಗದಲ್ಲಿ ತೀವ್ರ ಮಳೆ ಸಾಧ್ಯತೆ