ಆಸ್ತಿಗಾಗಿ ದೊಡ್ಡಮ್ಮನ ಮಗನ ಕೊಲೆ : ಎಂಟು ತಿಂಗಳ ಬಳಿಕ ಆರೋಪಿ ಅಭಿಷೇಕ ಶೇಟ್‌ ಬಂಧನ


Team Udayavani, Nov 18, 2020, 10:25 AM IST

ಆಸ್ತಿಗಾಗಿ ದೊಡ್ಡಮ್ಮನ ಮಗನ ಕೊಲೆ : ಎಂಟು ತಿಂಗಳ ಬಳಿಕ ಆರೋಪಿ ಅಭಿಷೇಕ ಶೇಟ್‌ ಬಂಧನ

ಮುಂಡಗೋಡ: ಎಂಟು ತಿಂಗಳ ಹಿಂದೆ ತಾಲೂಕಿನ ಕಾತೂರ ಅರಣ್ಯದಲ್ಲಿ ಪತ್ತೆಯಾಗಿದ್ದ ಅಪರಿಚಿತ ಶವದ ಗುರುತು ಹಾಗೂ ಕೊಲೆಗಾರರನ್ನು ಪತ್ತೆ ಹಚ್ಚುವಲ್ಲಿ ಇಲ್ಲಿನ ಪೊಲೀಸ್‌ ತಂಡ ಯಶಸ್ವಿಯಾಗಿದೆ.

ಏಪ್ರಿಲ್‌ ತಿಂಗಳಲ್ಲಿ ತಾಲೂಕಿನ ಕಾತೂರ ಸನಿಹದ ಅರಣ್ಯದ ಕೆರೆ ದಡದಲ್ಲಿ ಕೊಳೆತ ಸ್ಥಿತಿಯಲ್ಲಿ ಮಾನವನ ಎಲಬುಗಳು ಪತ್ತೆಯಾಗಿದ್ದವು. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಇಲ್ಲಿನ ಪೊಲೀಸರು ಆರೋಪಿಗಳನ್ನು ಪತ್ತೆ ಹಚ್ಚುವ ಕಾರ್ಯಾಚರಣೆ ನಡೆಸಿದ್ದರು. ಜಿಲ್ಲೆ ಹಾಗೂ ಅಕ್ಕಪಕ್ಕದ ಜಿಲ್ಲೆಗಳಲ್ಲಿ ಕಾಣೆಯಾದ ವ್ಯಕ್ತಿಗಳ ಕುರಿತು ಮಾಹಿತಿ ಸಂಗ್ರಹಿಸಿದರು. ಆದರೆ ಈ ವ್ಯಕ್ತಿ ಕಾಣೆಯಾದ ಬಗ್ಗೆ ಎಲ್ಲಿಯೂ ದೂರು ದಾಖಲಾಗಿರಲಿಲ್ಲ. ಇದರಿಂದಾಗಿ ಕೊಲೆಯಾದ ವ್ಯಕ್ತಿ ಯಾರು? ಕೊಲೆ ಮಾಡಿದವರ್ಯಾರು? ಎಂಬ ಪ್ರಶ್ನೆ ಕಾಡುತ್ತಿತ್ತು.

ಸತತ ಪ್ರಯತ್ನದಿಂದ ಪೊಲೀಸರು ಕೊಲೆಯಾದ ವ್ಯಕ್ತಿ ಹುಬ್ಬಳ್ಳಿ ನವನಗರದ ವರದರಾಜ ಶ್ರೀನಿವಾಸ ನಾಯಕ (32) ಎಂದು ಪತ್ತೆ ಹಚ್ಚಿದ್ದಾರೆ. ವರದರಾಜನ ಚಿಕ್ಕಮ್ಮನ ಮಗ ಅಭಿಷೇಕ ಶೇಟ್‌ ಕೊಲೆ ಆರೋಪಿಯಾಗಿದ್ದಾನೆ. ವರದರಾಜನ ಕೊಲೆ ಮಾಡಿದರೆ ಆತನ ಆಸ್ತಿ ತನಗೆ ಸಿಗುತ್ತದೆ ಎಂಬ ಅತಿಯಾಸೆಯಿಂದ ಸ್ನೇಹಿತರಾದ ಉಣಕಲ್‌ ನಿವಾಸಿಗಳಾದ ಸುರೇಶ ನೂರಪ್ಪ ಲಮಾಣಿ, ರಾಮಕುಮಾರ ಕೃಷ್ಣ ತಾಟಿಸಮ್ಲಾ ಜೊತೆ ಸೇರಿ ಕೊಲೆ ಮಾಡಿದ್ದಾಗಿ ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ:ಟ್ರಕ್ ಗಳ ನಡುವೆ ಭೀಕರ ಅಪಘಾತ: 11 ಮಂದಿ ದಾರುಣ ಸಾವು, 17 ಜನರಿಗೆ ಗಂಭೀರ ಗಾಯ

ವರದರಾಜನನ್ನು ಶಿರಸಿ ಕಡೆಗೆ ಪ್ರವಾಸಕ್ಕೆ ಹೋಗೋಣ ಎಂದು ಕಾರಿನಲ್ಲಿ ಕರೆದುಕೊಂಡು ಬಂದು ಕಾತೂರ ಸನಿಹದಲ್ಲಿ ಕೊಲೆ ಮಾಡಿ, ನಂತರ ಕಾತೂರ ಗ್ರಾಮದ ಸ್ನೇಹಿತ ಬಸವರಾಜ ಅಜ್ಜಮ್ಮನವರ ಎಂಬವನ ಸಹಾಯ ಪಡೆದು ಕಾತೂರ ಸನಿಹದ ಅರಣ್ಯದಲ್ಲಿ ಶವವನ್ನು ಮುಚ್ಚಿ ಹಾಕಿ ಹೋಗಿದ್ದರು.

ಇದೀಗ ಪೊಲೀಸರು ಈ ನಾಲ್ಕು ಜನ ಆರೋಪಿಗಳನ್ನು ಹಾಗೂ ಕೊಲೆಗೆ ಬಳಸಿದ್ದ ಸ್ವಿಪ್ಟ್ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಎಸ್‌ಪಿ ಶಿವಪ್ರಕಾಶ ದೇವರಾಜು ಹಾಗೂ ಎಡಿಶನಲ್‌ ಎಸ್‌ಪಿ. ಎಸ್‌.ಬದರಿನಾಥ, ಶಿರಸಿ ಡಿವೈಎಸ್‌ಪಿ ಜಿ.ಟಿ. ನಾಯ್ಕ ಮಾರ್ಗದರ್ಶನದಲ್ಲಿ ಸಿಪಿಐ ಪ್ರಭುಗೌಡ ಕಿರದಳ್ಳಿ ಹಾಗೂ ಪಿಎಸ್‌ಐ ಬಸವರಾಜ ಮಬನೂರ, ಮೋಹಿನಿ ಶೆಟ್ಟಿ ಹಾಗೂ ಎಎಸ್‌ಐ ಅಶೋಕ ರಾಠೊಡ, ಸಿಬ್ಬಂದಿ ಶರತ್‌ ದೇವಳ್ಳಿ, ಭಗವಾನ ಗಾಂವ್ಕರ, ವಿನೋದಕುಮಾರ ಜೆ.ಬಿ, ರಾಘವೇಂದ್ರ ನಾಯ್ಕ, ಅರುಣ ಬಾಗೇವಾಡಿ, ಕುಮಾರ ಬಣಕಾರ, ವಿವೇಕ ಪಟಗಾರ, ತಿರುಪತಿ ಚೌಡಣ್ಣವರ, ರಾಘವೇಂದ್ರ ಪಟಗಾರ ಹಾಗೂ ಎಸ್‌ಪಿ ಕಚೇರಿ ಸಿಡಿಆರ್‌ ಹಾಗೂ ತಾಂತ್ರಿಕ ವಿಭಾಗದ ಸಿಬ್ಬಂದಿ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.

ಟಾಪ್ ನ್ಯೂಸ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

ಬೊಮ್ಮಾಯಿ

Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.