ಆಸ್ತಿಗಾಗಿ ತಂದೆಯ ಮೇಲೆ ಬಿಸಿನೀರು ಎರಚಿ ಚಾಕುವಿನಿಂದ ಇರಿದು ಕೊಂದ ಡ್ರಗ್ಸ್‌ ವ್ಯಸನಿ!


Team Udayavani, Dec 31, 2020, 10:50 AM IST

ಆಸ್ತಿಗಾಗಿ ತಂದೆಯ ಮೇಲೆ ಬಿಸಿನೀರು ಎರಚಿ ಚಾಕುವಿನಿಂದ ಇರಿದು ಕೊಂದ ಡ್ರಗ್ಸ್‌ ವ್ಯಸನಿ!

ಬೆಂಗಳೂರು: ಆಸ್ತಿ ವಿಚಾರಕ್ಕೆ ನಿವೃತ್ತ ಆರ್‌ಬಿಐ ಅಧಿಕಾರಿಯೊಬ್ಬರು ಪುತ್ರನಿಂದಲೇ ಹತ್ಯೆಗೀಡಾಗಿರುವ ಘಟನೆ ಭಾರತೀನಗರ
ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಆರ್‌ಬಿಐ ಲೇಔಟ್‌ ನಿವಾಸಿ ಅಮರನಾಥ್‌ (61) ಕೊಲೆಯಾದವರು. ಈ ಸಂಬಂಧ ಅವರ ಪುತ್ರ ಆರೋಪಿ ಮನಾಂಕ್‌ (27) ಎಂಬಾತನನ್ನು ಬಂಧಿಸಲಾಗಿದೆ.

ಅಮರನಾಥ್‌ 1 ವರ್ಷದ ಹಿಂದಷ್ಟೇ ನಿವೃತ್ತಿ ಹೊಂದಿದ್ದು, ಪತ್ನಿಗೆ ವಿಚ್ಛೇಧನ ನೀಡಿದ್ದಾರೆ. ಮುಂಬೈನಲ್ಲಿ ಪುತ್ರ ಮನಾಂಕ್‌ ಜತೆ ವಾಸವಾಗಿದ್ದರು.

ಬೆಂಗಳೂರಿನ ಆರ್‌ಬಿಐ ಲೇಔಟ್‌ನಲ್ಲಿ ಹೊಸ ಮನೆ ನಿರ್ಮಾಣ ಮಾಡಲು ಕೆಲ ತಿಂಗಳಿಂದ ಆರ್‌ಬಿಐ ಲೇಔಟ್‌ನ ಬಾಡಿಗೆ
ಮನೆಯಲ್ಲಿ ವಾಸವಾಗಿದ್ದರು. ಈ ಮಧ್ಯೆ ವಿಪರೀತ ಮಾದಕ ವಸ್ತು ವ್ಯಸನಿ ಆಗಿದ್ದ ಮನಾಂಕ್‌ 3 ದಿನಗಳ ಹಿಂದಷ್ಟೇ ಬೆಂಗಳೂರಿಗೆ ಬಂದು ತಂದೆ ಜತೆ ಆಸ್ತಿ ವಿಚಾರಕ್ಕೆ ಜಗಳವಾಡಿದ್ದ. ಹೀಗಾಗಿ ತಂದೆ ಅಮರನಾಥ್‌, ತನ್ನ ಪರಿಚಯಸ್ಥ ಆಪ್ತ ಸಮಾಲೋಚರ ಬಳಿ ಕರೆದೊಯ್ದು ಪುತ್ರನಿಗೆ ಆಪ್ತ ಸಮಾಲೋಚನೆ ಕೊಡಿಸಿದ್ದರೆಂದು ಪೊಲೀಸರು ಹೇಳಿದರು.

ಇದನ್ನೂ ಓದಿ:ವಿಭಿನ್ನ ಕರಪತ್ರದಿಂದ ಗಮನ ಸೆಳೆದ ಕಲ್ಕೆರೆಯ ಗಂಗಮ್ಮ ಪಡೆದ ಮತ ಎಷ್ಟು ಗೊತ್ತಾ?

ತಂದೆಯನ್ನು ಕೊಲ್ಲುವುದಾಗಿ ಹೇಳಿದ್ದ: ಆಪ್ತ ಸಮಾಲೋಚನೆ ವೇಳೆ ಆರೋಪಿ ಮನಾಂಕ್‌ ತಂದೆ-ತಾಯಿಯನ್ನು ಕೊಂದರೆ ಎಲ್ಲಾ ಆಸ್ತಿ ತನಗೆ ಸಿಗುತ್ತದೆ ಅಲ್ಲವೇ? ಎಂದು ಆಪ್ತ ಸಮಾಲೋಚಕರನ್ನು ಪ್ರಶ್ನಿಸಿದ್ದಾನೆ. ಅದರಿಂದ ದಿಗ್ಭ್ರಮೆಗೊಂಡ ಆಪ್ತಸಮಾಲೋಚಕರು, ಈ ವಿಚಾರವನ್ನು ಅಮರನಾಥ್‌ ಬಳಿ ಹೇಳಿದ್ದರು.

ಆದರೆ, ಅಮರನಾಥ್‌ ಹೆಚ್ಚು ತಲೆಕೆಡಿಸಿಕೊಂಡಿರಲಿಲ್ಲ. ಅಲ್ಲದೆ, ಮಂಗಳವಾರ ರಾತ್ರಿ ಮನೆಗೆ ಊಟಕ್ಕೆ ಬರುವಂತೆ ಆಪ್ತ ಸಮಾಲೋಚಕರಿಗೆ ಅಮರನಾಥ್‌ ಆಹ್ವಾನ ನೀಡಿದ್ದರು. ರಾತ್ರಿ 10 ಗಂಟೆ ಸುಮಾರಿಗೆ ಡ್ರಗ್ಸ್‌ ಅಮಲಿನಲ್ಲೇ ಆರೋಪಿ, ಕುಳಿತಿದ್ದ ತಂದೆ ಮೇಲೆ ಬಿಸಿ ನೀರನ್ನು ಎರಚಿದ್ದಾನೆ. ಅದರಿಂದ ಗಂಭೀರವಾಗಿ ಗಾಯಗೊಂಡ ಅವರು ಪ್ರಜ್ಞೆ ಕಳೆದುಕೊಂಡಿದ್ದಾರೆ. ಬಳಿಕ ಚಾಕುವಿನಿಂದ ಇರಿದು ಕೊಲೆಗೈದಿದ್ದಾನೆ. ಕೆಲ ಹೊತ್ತು ಮೃತ ದೇಹದ ಬಳಿಯೇ ಕುಳಿತುಕೊಂಡಿದ್ದ. ಮತ್ತೂಂದೆಡೆ ಊಟಕ್ಕೆಂದು ಮನೆಗೆ ಬಂದ ಆಪ್ತ ಸಮಾಲೋಚಕರು, ಘಟನೆ ಕಂಡು ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಬಂದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಆಸ್ತಿ ಪರಸ್ತ್ರೀಗೆ ಬರೆಯುತ್ತಾರೆ…
ಆರೋಪಿ ವಿಚಾರಣೆ ವೇಳೆ ಕೆಲ ಮಾಹಿತಿ ಬಹಿರಂಗ ಪಡಿಸಿದ್ದಾನೆ. “ತಾನೂ ವಿಪರೀತ ಮಾದಕ ವಸ್ತು ವ್ಯಸನಿಯಾಗಿದ್ದು, ತನಗೆ ತಂದೆ ಹಣ ಕೊಡುತ್ತಿರಲಿಲ್ಲ. ಸಾಕಷ್ಟು ಬಾರಿ ಕೇಳಿದರೂ ಡ್ರಗ್ಸ್‌ ಸೇವನೆಗೆ ಹಣ ಕೊಡುವುದಿಲ್ಲ ಎಂದು ನಿಂದಿಸಿದ್ದರು.
ಅಲ್ಲದೆ, ತಂದೆ ಅಮರನಾಥ್‌, ತನ್ನ ತಾಯಿಗೆ ವಿಚ್ಛೇಧನ ನೀಡಿ, ಪರಸ್ತ್ರೀ ಜತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಾರೆ. ಹೀಗಾಗಿ ಆಸ್ತಿ ಆಕೆಗೆ ಬರೆಯುತ್ತಾರೆ ಎಂದು ಭಾವಿಸಿ ಕೊಲೆಗೈದೆ. ಡ್ರಗ್ಸ್‌ ಅಮಲಿನಲ್ಲಿ ಕೃತ್ಯ ಎಸಗಿದ್ದೇನೆ ಎಂದು ಹೇಳಿಕೆ ನೀಡಿದ್ದಾನೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

Loksabha Poll: ತಮಿಳುನಾಡು ಮಾಜಿ ಕಾಂಗ್ರೆಸ್‌ ನಾಯಕ ಈಗ ಬಿಜೆಪಿ ರಾಷ್ಟ್ರೀಯ ವಕ್ತಾರ

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ

Lok Sabha Election; ಇಂದಿನಿಂದ 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ

Lok Sabha Election; ಇಂದಿನಿಂದ 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬಂದಿಯ ಗುಂಡಿಕ್ಕಿ ಹತ್ಯೆ… ಭಯಾನಕ ದೃಶ್ಯ ಸೆರೆ

Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.