ಬೃಹತ್‌ ಕಾರು ಮಾರಾಟ ಜಾಲ ಪತ್ತೆ ಆರೋಪಿ ಬಂಧನ : 20 ಕಾರು ವಶ

ಕೊಲೆ ಪ್ರಕರಣದ ಕಾರು ಪತ್ತೆ ವೇಳೆ ಜಾಲ ಬಯಲಿಗೆ

Team Udayavani, Jul 14, 2021, 8:52 PM IST

ಬೃಹತ್‌ ಕಾರು ಮಾರಾಟ ಜಾಲ ಪತ್ತೆ ಆರೋಪಿ ಬಂಧನ : 20 ಕಾರು ವಶ

ಬೆಂಗಳೂರು: ಮೂರು ವರ್ಷಗಳ ಹಿಂದೆ ಎಟಿಎಂ ಕೇಂದ್ರಕ್ಕೆ ಹಣ ತುಂಬುವ ವಾಹನ ಚಾಲಕನ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ಆರೋಪಿಗಳು ಕೃತ್ಯಕ್ಕೆ ಬಳಸಿದ್ದ ಕಾರಿನ ಜಾಡು ಹಿಡಿದು ಹೊರಟ ಪೊಲೀಸರಿಗೆ ಬೃಹತ್‌ ಕಳವು ಕಾರುಗಳ ಮಾರಾಟ ಜಾಲ ಪತ್ತೆಯಾಗಿದೆ.

ಈ ಸಂಬಂಧ ಕಾರ್ಯಾಚರಣೆ ನಡೆಸಿದ ಗೋವಿಂದಪುರ ಪೊಲೀಸರು ಹೊಸೂರು ಮೂಲದ ಶಬ್ಬೀರ್‌ ಖಾನ್‌ (41) ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿಯಿಂದ 1,80 ಕೋಟಿ ರೂ.ಮೌಲ್ಯದ 5 ಇನ್ನೋವಾ, 2 ಟೆಂಪೋ ಟ್ರಾವೆಲರ್‌, 1 ಮಹಿಂದ್ರಾ ಎಕ್ಸ್‌.ಯು.ವಿ, 1 ಮಹಿಂದ್ರಾ ವೆರಿಟ್ಟೊ, 5 ಟಯೋಟಾ ಟಿಯೋಸ್‌, 3 ಸ್ವಿಪ್ಟ್ ಡಿಜೈರ್‌, 1 ಹೊಂಡಾ ಅಸೆಂಟ್‌, 1 ಟಾಟಾ ವಿಸ್ತಾ, ಮತ್ತು 1 ಮಾರುತಿ ಜೆನ್‌ ಸೇರಿ 20 ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈತನ ಸ್ನೇಹಿತರಾದ ತಮಿಳುನಾಡು ಮೂಲದ ಶಕ್ತಿವೇಲು ಹಾಗೂ ಶರಣ್‌ಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಪೊಲಿಸರು ಹೇಳಿದರು.

ತಮಿಳುನಾಡಲ್ಲಿ ಮಾರಾಟ
ಸದ್ಯ ತಲೆಮರೆಸಿಕೊಂಡಿರುವ ಆರೋಪಿಗಳಾದ ಶಕ್ತಿವೇಲು, ಶರಣ್‌ ಎಂಬುವವರು ಈ ಜಾಲದಲ್ಲಿ ಸಕ್ರಿಯವಾಗಿದ್ದರು. ಕದ್ದ ವಾಹನಗಳನ್ನು ಕಡಿಮೆ ಬೆಲೆಗೆ ಖರೀದಿಸಿ ಅದರ ಆರ್‌ಸಿ ಬುಕ್‌ ಹಾಗೂ ಚಾರ್ಸಿ ನಂಬರ್‌ನ್ನು ಬದಲಿಸುತ್ತಿದ್ದರು. ಕರ್ನಾಟಕದ ವಾಹನಕ್ಕೆ ತಮಿಳುನಾಡು ವಾಹನದ ನಕಲಿ ಚಾರ್ಸಿ ನಂಬರ್‌, ನಂಬರ್‌ ಪ್ಲೇಟ್‌ ಅಳವಡಿಸಿ ತಮಿಳುನಾಡಿನ ಕೆಲ ಜಿಲ್ಲೆಗಳಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು.

ಇದನ್ನೂ ಓದಿ : ಕೋವಿಡ್: ರಾಜ್ಯದಲ್ಲಿಂದು 2537 ಸೋಂಕಿತರು ಗುಣಮುಖ; 1990 ಹೊಸ ಪ್ರಕರಣ ಪತ್ತೆ

ಮೈಸೂರು ಹಾಗೂ ಬೆಂಗಳೂರಿನ ಹಲವು ಕಾರುಗಳು ಆರೋಪಿಗಳ ಕೈ ಸೇರಿರುವುದು ಗೊತ್ತಾಗಿದೆ. ಅಂದಾಜು 75ಕ್ಕೂ ಅಧಿಕ ವಾಹನಗಳನ್ನು ಇದೇ ಮಾದರಿಯಲ್ಲಿ ಮಾರಾಟ ಮಾಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಆರೋಪಿಗಳು ತಮಿಳುನಾಡು ಆರ್‌ಟಿಓ ಅಧಿಕಾರಿಗಳ ಒಡನಾಟ ಹೊಂದಿರುವ ಅನುಮಾನ ವ್ಯಕ್ತವಾಗಿದೆ. ಶಬ್ಬಿರ್‌ನಿಂದ ಇದುವರೆಗೆ ಕಾರು ಖರೀದಿಸಿದವರನ್ನು ಸಂಪರ್ಕಿಸಿದ ಗೋವಿಂದಪುರ ಪೊಲೀಸರು ತಮಿಳುನಾಡಿಗೆ ತೆರಳಿ 20 ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಹೊಸೂರಲ್ಲೇ ಡೀಲ್‌
ಕರ್ನಾಟಕ-ತಮಿಳುನಾಡು ಗಡಿ ಪ್ರದೇಶವಾದ ಹೊಸೂರಿನಲ್ಲಿ ಕದ್ದ ಕಾರುಗಳ ಚಾರ್ಸಿ ನಂಬರ್‌ ಬದಲಿಸುವ ಕಾರ್ಯ ನಡೆಸುತ್ತಿದ್ದರು. ಅಲ್ಲೇ ಕಳ್ಳರಿಂದ ಕಡಿಮೆ ಬೆಲೆಗೆ ಕಾರು ಖರೀದಿಸಿದ ಕೂಡಲೇ ಕರ್ನಾಟಕ ನೋಂದಣಿ ಫ‌ಲಕ ಬದಲಾಯಿಸಿ ತಮಿಳುನಾಡು ನೊಂದಣಿಯ ನಂಬರ್‌ಗಳನ್ನು ಅಳವಡಿಸುತ್ತಿದ್ದರು. ಲಾಕ್‌ಡೌನ್‌ನಿಂದ ಆರ್ಥಿಕ ಸಂಕಷ್ಟಕ್ಕೊಳಗಾಗಿ ಕಡಿಮೆ ಬೆಲೆಗೆ ನಮ್ಮ ಕಾರು ಮಾರಾಟ ಮಾಡುತ್ತಿರುವುದಾಗಿ ಗ್ರಾಹಕರನ್ನು ನಂಬಿಸುತ್ತಿದ್ದರು ಎಂದು ಪೊಲೀಸರು ಹೇಳಿದರು.

ಇದನ್ನೂ ಓದಿ : ಚೀನಾದಿಂದ ಸಣ್ಣ ರಿಯಾಕ್ಟರ್‌ ನಿರ್ಮಾಣ ಶುರು : ಉಪಗ್ರಹ ಚಿತ್ರಗಳ ಪರಿಶೀಲನೆಯಿಂದ ದೃಢ

ಪ್ರಕರಣದ ಹಿನ್ನೆಲೆ?
2018 ನ.5ರಂದು ಕೆ.ಜಿ.ಹಳ್ಳಿಯ ನಾಗವಾರ ಮುಖ್ಯರಸ್ತೆಯಲ್ಲಿರುವ ಆಕ್ಸಿಸ್‌ ಬ್ಯಾಂಕ್‌ ಎಟಿಎಂಗೆ ಸಿಬ್ಬಂದಿ ಹಣ ತುಂಬಿಸಲು ಹೋಗಿದ್ದರು. ಎಟಿಎಂ ವಾಹನ ಚಾಲಕ ಅಬ್ದುಲ್ ಶಾಹೀದ್‌ಗೆ 5 ಲಕ್ಷ ರೂ. ಕೊಡುವುದಾಗಿ ಆಮಿಷವೊಡ್ಡಿದ್ದ ಎನ್‌.ಕುಮಾರ್‌, ಮಧುಸೂದನ್‌, ಪ್ರಸನ್ನ, ಮಹೇಶ್‌ ಎಟಿಎಂ ವಾಹನ ಸಮೇತ ಪರಾರಿಯಾಗಿದ್ದರು. ನಂತರ ಎಟಿಎಂ ವಾಹನದಲ್ಲಿದ್ದ 75 ಲಕ್ಷ ರೂ. ಪಡೆದು, ತಮ್ಮ ಸ್ವಿಫ್ಟ್‌ ಕಾರಿನಲ್ಲಿ ಅಬ್ದುಲ್‌ ಶಾಹಿದ್‌ನ್ನು ಕರೆದೊಯ್ದು ಆತನನ್ನು ಹತ್ಯೆ ಮಾಡಿ ಮೃತದೇಹವನ್ನು ಸಕಲೇಶಪುರ ಘಾಟ್‌ನಲ್ಲಿ ಎಸೆದಿದ್ದರು. ಈ ಪ್ರಕರಣದಲ್ಲಿ ಕಳೆದ ಮೇ ನಲ್ಲಿ ಗೋವಿಂದಪುರ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದರು. ಆರೋಪಿಗಳು ಕೃತ್ಯಕ್ಕೆ ಬಳಸಿದ ಸ್ವಿಫ್ಟ್‌ ಕಾರನ್ನು ಶಬ್ಬಿರ್‌ ಖಾನ್‌ ಎಂಬಾತನಿಗೆ ಹೊಸೂರು ಬಳಿ ಮಾರಾಟ ಮಾಡಿರುವ ಸಂಗತಿ ವಿಚಾರಣೆಯಲ್ಲಿ ಬೆಳಕಿಗೆ ಬಂದಿತ್ತು.

ಟಾಪ್ ನ್ಯೂಸ್

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

ಅನಂತಸ್ವಾಮಿ ಧಾಟಿಯಲ್ಲೇ ನಾಡಗೀತೆ; ರಾಜ್ಯ ಸರಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್‌

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್‌ಸಿ ಮೀಸಲಾತಿ ಹೇಳಿಕೆಗೆ ವಿರೋಧ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.