ಅಮಾನತುಗೊಂಡಿದ್ದ ಪೇದೆಯ ಅನುಚಿತ ವರ್ತನೆ : ನ್ಯಾಯಾಂಗ ಬಂಧನ
Team Udayavani, Aug 16, 2021, 12:18 AM IST
ಹುಣಸೂರು: ಇಲಾಖಾ ವಿಚಾರಣೆ ವೇಳೆಯೇ ಹಿರಿಯ ಅಧಿಕಾರಿಗಳೊಂದಿಗೆ ಅನುಚಿತವಾಗಿ ವರ್ತಿಸಿದ್ದಲ್ಲದೆ ಬೆದರಿಕೆ ಒಡ್ಡಿದ ಆರೋಪದಡಿ ಅಮಾನತುಗೊಂಡಿರುವ ಮುಖ್ಯ ಪೇದೆಯೊರ್ವನನ್ನು ಬಂಧಿಸಿರುವ ಗ್ರಾಮಾಂತರ ಠಾಣೆ ಪೊಲೀಸರು ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ.
ಟೀ.ನರಸೀಪುರ ಠಾಣೆಯ ರೈಟರ್(ಠಾಣಾ ಬರಹಗಾರರಾಗಿದ್ದ ) ಕೃಷ್ಣೇಗೌಡ ಎಂಬಾತನೇ ಬಂಧನಕ್ಕೊಳಗಾದಾತ. ಇಲಾಖಾ ವಿಚಾರಣೆಯನ್ನು ಎದುರಿಸು ಬಂದಿದ್ದಾತ ಅನುಚಿತವಾಗಿ ವರ್ತಿಸಿದ್ದ.
2001ನೇ ಇಸವಿಯಲ್ಲಿ ಕೃಷ್ಣೇಗೌಡ ಪೊಲೀಸ್ ಇಲಾಖೆಗೆ ಪೇದೆಯಾಗಿ ಸೇರಿದ್ದು, ನಂಜನಗೂಡು ವಿಭಾಗದ ವಿವಿಧ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ, ನಂಜನಗೂಡು ವೃತ್ತದಲ್ಲಿ ಸುಧೀರ್ಘ ಸೇವೆ ಸಲ್ಲಿಸಿದ್ದರಿಂದ 2019ರಲ್ಲಿ ನಂಜನಗೂಡು ಠಾಣೆಯಿಂದ ಟಿ.ನರಸೀಪುರ ಠಾಣೆಗೆ ವರ್ಗಾವಣೆಗೊಂಡಿದ್ದ ಮುಖ್ಯಪೇದೆ ಕೃಷ್ಣೇಗೌಡ ಪ್ರಭಾವ ಬೀರಿ ರೈಟರ್ ಆಗಿ ಕೆಲಸ ನಿರ್ವಹಿಸುತ್ತಿದ್ದ, ಇಲ್ಲೂ ಸಹ ಸಮರ್ಪಕವಾಗಿ ಕಾರ್ಯ ನಿರ್ವಹಿಸದೆ ಹಿರಿಯ ಅಧಿಕಾರಿಗಳಿಗೆ ಅಗೌರವವಾಗಿ ನಡೆದುಕೊಳ್ಳುತ್ತಿದ್ದ ಎನ್ನಲಾಗಿದ್ದು, ಇದರಿಂದ ಕೃಷ್ಣೇಗೌಡನ ವರ್ತನೆಯಿಂದ ರೈಟರ್ ಕೆಲಸಕ್ಕೆ ಬೇರೆಯವರನ್ನು ನಿಯೋಜಿಸಲಾಗಿತ್ತು, ಇದರಿಂದ ಕುಪಿತಗೊಂಡ ಕೃಷ್ಣೇಗೌಡ ತನ್ನ ವಶದಲ್ಲಿದ್ದ ಇಲಾಖೆಗೆ ಸೇರಿದ 50 ಜೀವಂತ ಬುಲೆಟ್(ಗುಂಡು)ಗಳನ್ನು ಹೊತ್ತೊಯ್ದು, ಕಾವೇರಿ ನದಿ ಸೇತುವೆ ಕೆಳಗೆ ಬಿಸಾಡಿದ್ದ, ಟೀ.ನರಸೀಪುರ ಠಾಣೆಯಲ್ಲಿ ಅಂದೇ ಪ್ರಕರಣ ದಾಖಲಾಗಿತ್ತು. ನಂತರದಲ್ಲಿ ಸೇತುವೆ ಕೆಳಗಿನ ನದಿಯಲ್ಲಿ ಬುಲೆಟ್ಗಳು ದೊರೆತಿದ್ದವು.
ಇದನ್ನೂ ಓದಿ :ಐಪಿಎಲ್ನಲ್ಲಿ ಆಡಲು ಶ್ರೇಯಸ್ ಅಯ್ಯರ್, ನಟರಾಜನ್ಗೆ ಬಿಸಿಸಿಐ ಹಸಿರು ನಿಶಾನೆ
ಆರೋಪಿ ಕೃಷ್ಣೇಗೌಡನನ್ನು ಬಂಧಿಸಿ ವಿಚಾರಣೆ ನಡೆಸಿ, ನ್ಯಾಯಾಂಗ ಬಂಧನಕ್ಕೊಪ್ಪಿಸಿ ಇಲಾಖಾ ವಿಚಾರಣೆ ಕಾಯ್ದಿರಿಸಲಾಗಿತ್ತು. ಹುಣಸೂರು ಡಿವೈಎಸ್ಪಿ ರವಿಪ್ರಸಾದ್ರಿಗೆ ವಿಚಾರಣೆ ಜವಾಬ್ದಾರಿ ವಹಿಸಲಾಗಿತ್ತು. ಆ.14ರಂದು ಬೆಳಗ್ಗೆ ವಿಚಾರಣೆಗೆ ಹಾಜರಾದ ಕೃಷ್ಣೇಗೌಡ ಅನುಚಿತವಾಗಿ ವರ್ತಿಸಿದ್ದಾನೆ. ಈ ವೇಳೆ ಡಿವೈಎಸ್ಪಿ ನಗರ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದರ ಮೇರೆಗೆ ಸ್ಥಳಕ್ಕಾಗಮಿಸಿದ ಇನ್ಸ್ಪೆಕ್ಟರ್ ಸಿ.ವಿ.ರವಿ ಯವರ ಮೇಲೂ ಹರಿಹಾಯ್ದು ಏಕಾಏಕಿ ಕಚೇರಿಯಿಂದ ಹೊರಬಂದು ಇಲಾಖೆಯಲ್ಲಿ ಹಿರಿಯ ಅಧಿಕಾರಿಗಳು ನನ್ನ ಕೈಯಲ್ಲಿದ್ದಾರೆ, ನೀವೇನೂ ಮಾಡಲಾಗಲ್ಲವೆಂದು ಸಾರ್ವಜನಿಕವಾಗಿ ಬೆದರಿಕೆ ಹಾಕಿದ್ದಲ್ಲದೆ ಪೊಲೀಸರು ಹೊಡೆಯುತ್ತಿದ್ದಾರೆಂದು ಆವರಣದಲ್ಲಿ ತನ್ನ ಬಟ್ಟೆ ಹರಿದುಕೊಂಡು ಕೂಗಾಟನಡೆಸಿದ್ದಾನೆ.
ಡಿವೈಎಸ್ಪಿ ರವಿಪ್ರಸಾದ್ ನೀಡಿರುವ ದೂರಿನ ಮೇರೆಗೆ ಕೃಷ್ಣೇಗೌಡರ ವಿರುದ್ದ ಪ್ರಕರಣ ದಾಖಲಿಸಿರುವ ನಗರಠಾಣೆ ಪೊಲೀಸರು ಇದೀಗ ಪ್ರಕರಣವನ್ನು ಗ್ರಾಮಾಂತರ ಠಾಣೆಗೆ ವರ್ಗಾಯಿಸಿದ್ದಾರೆ. ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ.
ಪುಕ್ಕಟೆ ಮನರಂಜನೆ: ಡಿವೈಎಸ್ಪಿ ಕಚೇರಿ ಪಕ್ಕದಲ್ಲೇ ಗ್ರಾಮಾಂತರ ಠಾಣೆ ಇದ್ದು, ಇಲ್ಲಿಗೆ ಬಂದಿದ್ದವರು ಹಾಗೂ ಆವರಣದ ಪೊಲೀಸ್ ಕ್ಯಾಂಟಿನ್ನಲ್ಲಿದ್ದ ಜನರು ಕೃಷ್ಣೇಗೌಡನ ಕೂಗಾಟಕಂಡು ಓಡಿ ಬಂದರಾದರೂ ಸತ್ಯಾಂಶ ತಿಳಿದು ಪುಕ್ಕಟೆ ಮನರಂಜನೆ ಪಡೆದು ತೆರಳಿದರು.
ಸೂಕ್ತ ಕ್ರಮಕ್ಕಾಗಿ ಒತ್ತಾಯ: ಶಿಸ್ತಿನ ಇಲಾಖೆಯಾಗಿರುವ ಪೊಲೀಸ್ ಇಲಾಖೆಯಲ್ಲಿ ಇಂತಹ ಕೃತ್ಯ ಎಸಗುವವರಿಂದ ಇಡೀ ಇಲಾಖೆಗೆ ಕೆಟ್ಟ ಹೆಸರು ಬರಲಿದೆ. ಈತನನ್ನು ವಜಾಗೊಳಿಸಿ ಇಲಾಖೆ ಮರ್ಯಾದೆ ಕಾಪಾಡುವಂತೆ ಸ್ಥಳದಲ್ಲಿದ್ದ ಸಾರ್ವಜನಿಕರು ಹಿರಿಯ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ
MUST WATCH
ಹೊಸ ಸೇರ್ಪಡೆ
Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು
New Jersey: ಸ್ಥಳೀಯ ಶಾಪ್ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್