ಅಕ್ರಮ ಸಂಬಂಧ ನಿರಾಕರಿಸಿದ ಮಹಿಳೆಯ ಸಹೋದರನ ಅಪಹರಣ : ಭಗ್ನ ಪ್ರೇಮಿ ಸೇರಿ ಆರು ಮಂದಿ ಬಂಧನ


Team Udayavani, Jan 22, 2022, 8:27 PM IST

ಅಕ್ರಮ ಸಂಬಂಧ ನಿರಾಕರಿಸಿದ ಮಹಿಳೆಯ ಸಹೋದರನ ಅಪಹರಣ : ಆರು ಮಂದಿ ಬಂಧನ

ಬೆಂಗಳೂರು: ಅಕ್ರಮ ಸಂಬಂಧ ಮುಂದುವರಿಸಲು ನಿರಾಕರಿಸಿದ ಮಹಿಳೆಯ ಅಣ್ಣನನ್ನು ಅಪಹರಿಸಿದ ಭಗ್ನ ಪ್ರೇಮಿ ಸೇರಿ ಆರು ಮಂದಿಯನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ರಾಜಗೋಪಾಲನಗರದ ಶ್ರೀನಿವಾಸ್‌ (32) ಹಾಗೂ ಆತನ ಸಹಚರರಾದ ಪ್ರತಾಪ್‌ (28), ಆಕಾಶ್‌ (31), ಹುಚ್ಚೇಗೌಡ (34), ಶಿವ (31), ಗಂಗಾಧರ್‌ (34) ಬಂಧಿತರು. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಕಾರನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.

ಆರೋಪಿ ಶ್ರೀನಿವಾಸ್‌ ಫೈನ್ಯಾನ್ಸ್‌ ಕಂಪನಿಯೊಂದರಲ್ಲಿ ಹಣ ಪಡೆದು ಸರಿಯಾಗಿ ಹಣ ಪಾವತಿಸದಿದ್ದರೆ ಅಂತಹವರ ವಾಹನಗಳ ಜಪ್ತಿ ಮಾಡುವ ಕೆಲಸ ಮಾಡುತ್ತಿದ್ದ. ಈತನಿಗೆ ಮದುವೆಯಾಗಿದ್ದು, ಪತ್ನಿ ದೂರವಾಗಿ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ. ಈ ಮಧ್ಯೆ ಮನೆ ಸಮೀಪದ ವಿವಾಹಿತ ಮಹಿಳೆಯನ್ನು ಪ್ರೀತಿಸುತ್ತಿದ್ದು, ಆಕೆ ಜತೆ ಅಕ್ರಮ  ಸಂಬಂಧ ಹೊಂದಿದ್ದ. ಮೂರು ತಿಂಗಳ ಹಿಂದೆ ಆಕೆ ಕೂಡ ಪತಿ, ಮಕ್ಕಳನ್ನು ತೊರೆದು ಶ್ರೀನಿವಾಸ್‌ ಜತೆ ಲಿವಿಂಗ್‌ ಟುಗೆದರ್‌ ಮಾದರಿಯಲ್ಲಿ ಪ್ರತ್ಯೇಕವಾಗಿ ವಾಸವಾಗಿದ್ದರು. ಜ.17ರಂದು ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿ ಮನಸ್ತಾಪವಾಗಿತ್ತು. ಅದರಿಂದ ಮನನೊಂದ ಮಹಿಳೆ, ಶ್ರೀನಿವಾಸ್‌ನಿಂದ ದೂರವಾಗಿ ಪ್ರತ್ಯೇಕವಾಗಿ ವಾಸಿಸುತ್ತಿದ್ದರು ಎಂದು ಪೊಲೀಸರು ಹೇಳಿದರು.

ಇದನ್ನೂ ಓದಿ : ರಾತ್ರಿ ಕರ್ಫ್ಯೂನಿಂದ ವಿನಾಯಿತಿ ನೀಡಲು ರಂಗಭೂಮಿ ಕಲಾವಿದರ ವೇದಿಕೆಯಿಂದ ಸಚಿವರಿಗೆ ಮನವಿ

ಆದರೆ, ಶ್ರೀನಿವಾಸ್‌, ಪ್ರೇಯಸಿಯನ್ನು ದೂರ ಇರಲು ಇಷ್ಟ ಪಡದೆ, ಪದೇ-ಪದೆ ಕರೆ ಮಾಡಿ ಮತ್ತೆ ತನ್ನೊಂದಿಗೆ ಜೀವನ ನಡೆಸುವಂತೆ ಒತ್ತಾಯ ಮಾಡುತ್ತಿದ್ದ. ಆದರೆ, ಆಕೆ ನಿರಾಕರಿಸಿದ್ದಳು. ಅದರಿಂದ ಆಕ್ರೋಶಗೊಂಡ ಶ್ರೀನಿವಾಸ್‌, ತನ್ನ ಸಹಚರರ ಜತೆಗೆ ಸೇರಿ ಆಕೆಯ ಸಹೊದರ ವೆಂಕಟೇಶ್‌ನನ್ನು ಅಪಹರಣ ಮಾಡಲು ಸಂಚು ರೂಪಿಸಿದ್ದ.

ಅದರಂತೆ ಜ.20ರಂದು ರಾತ್ರಿ 9 ಗಂಟೆಗೆ ವೆಂಕಟೇಶ್‌ ಕೆಲಸ ಮುಗಿಸಿಕೊಂಡು ಮನೆಗೆ ಬರುತ್ತಿದ್ದಾಗ ಆತನನ್ನು ಭೇಟಿಯಾದ ಶ್ರೀನಿವಾಸ್‌, “ನಿನ್ನ ಬಳಿ ಸ್ವಲ್ಪ ಮಾತನಾಡಬೇಕು’ ಎಂದು ಕಾರಿನಲ್ಲಿ ಕೂರಿಸಿಕೊಂಡು ಹೊಸಕೋಟೆ-ಕೋಲಾರಕ್ಕೆ ಕರೆದೊಯ್ದು ಹಲ್ಲೆ ನಡೆಸಿದ್ದ. ನಂತರ ಪ್ರೇಯಸಿಗೆ ಕರೆ ಮಾಡಿ, “ನೀನು ನನ್ನ ಜತೆಗೆ ಜೀವಿಸದಿದ್ದರೆ, ನಿನ್ನ ಅಣ್ಣ ವೆಂಕಟೇಶ್‌ ನನ್ನು ಕೊಲೆ ಮಾಡುತ್ತೇನೆ’ ಎಂದು ಬೆದರಿಕೆ ಹಾಕಿದ್ದಾನೆ. ಆತಂಕಗೊಂಡ ಮಹಿಳೆ, ಈ ಬಗ್ಗೆ ಬ್ಯಾಡರಹಳ್ಳಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡು ಕಾರ್ಯಾಚರಣೆಗಿಳಿದ ಪೊಲೀಸರು, ಶ್ರೀನಿವಾಸ್‌ ಮಹಿಳೆಗೆ ಕರೆ ಮಾಡಿದ ಪ್ರದೇಶವನ್ನು ಪರಿಶೀಲಿಸಿದಾಗ ಆತ ಹೊಸಕೋಟೆಯಲ್ಲಿರುವುದು ಪತ್ತೆಯಾಗಿತ್ತು. ಕೂಡಲೇ ಹೊಸಕೋಟೆ ಬಳಿ ತೆರಳಿದ ಪೊಲೀಸರ ತಂಡ ಆರೋಪಿ ಹಾಗೂ ಆತನ ಸಹಚರರನ್ನು ಬಂಧಿಸಿ, ವೆಂಕಟೇಶ್‌ನನ್ನು ರಕ್ಷಣೆ ಮಾಡಿದೆ ಎಂದು ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದರು.

ಟಾಪ್ ನ್ಯೂಸ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

Tollywood: ‘ಪುಷ್ಪʼ ನಿರ್ದೇಶಕನ ಜೊತೆ ರಾಮ್‌ ಚರಣ್ ಸಿನಿಮಾ? 2ನೇ ಬಾರಿಯೂ ಮಾಡ್ತಾರಾ ಮೋಡಿ?

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

11-kushtagi

Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.