ಕಾರ್ಕಳ: ತಂಡದಿಂದ ತಾಯಿ-ಮಗನಿಗೆ ಹಲ್ಲೆ
Team Udayavani, May 3, 2022, 4:52 AM IST
ಕಾರ್ಕಳ: ಫೈನಾನ್ಸ್ ಸಂಸ್ಥೆಯೊಂದರಿಂದ ಟಿ.ವಿ.ಯನ್ನು ನಗದು ಸಾಲದ ರೂಪದಲ್ಲಿ ತೆಗೆದು ಕಂತು ತುಂಬುವ ವಿಚಾರಕ್ಕೆ ಸಂಬಂಧಿಸಿ ತಂಡವೊಂದು ತಾಯಿ ಮತ್ತು ಮಗನಿಗೆ ಹಲ್ಲೆ ನಡೆಸಿದ ಘಟನೆ ಬಂಗ್ಲೆಗುಡ್ಡೆಯಲ್ಲಿ ಮೇ 1ರಂದು ನಡೆದಿದೆ.
ಕಸಬಾ ಗ್ರಾಮ ನಿವಾಸಿ ಇನಾಯತ್ ಸಂಬಂಧಿ ಅಲ್ತಾಫ್ ಅವರ ಪತ್ನಿ ಆಸ್ಮಾ ಅವರು ತನ್ನ ಹೆಸರಿನಲ್ಲಿ ಫೈನಾನ್ಸ್ ಸಂಸ್ಥೆಯೊಂದರಿಂದ ಟಿ.ವಿ. ತೆಗೆದುಕೊಡುವುದಾಗಿ ಹೇಳಿ ಕಂತು ಕಟ್ಟುತ್ತಾ ಬರುವಂತೆ ಸೂಚಿಸಿದ್ದು. ಅದಕ್ಕೆ ಇನಾಯತ್ ಒಪ್ಪಿ ಟಿ.ವಿ. ತೆಗೆದುಕೊಂಡು ಮನೆಯಲ್ಲಿ ಇಟ್ಟಿದ್ದರು.
ಈ ವಿಚಾರಕ್ಕೆ ಸಂಬಂಧಿಸಿ ತಕರಾರು ಎದ್ದು ಮೇ 1ರಂದು ಅಲ್ತಾಫ್, ಅದ್ನಾನ್, ಅತೀಫ್, ಅಜೀಮ್ ಮತ್ತು ಶಬೀರ ಅವರು ಕಾರ್ಕಳ ಕಸಬಾದ ಬಂಗ್ಲೆಗುಡ್ಡೆಯಲ್ಲಿರುವ ದೂರುದಾರರ ಅಂಗಳಕ್ಕೆ ಮಾರಕಾಯುಧಗಳೊಂದಿಗೆ ಅಕ್ರಮ ಪ್ರವೇಶಗೈದು ಇನಾಯತ್ ಹಾಗೂ ಅವರ ತಾಯಿ ಬೀಬಿ ಭಾನು ಅವರಿಗೆ ಕಬ್ಬಿಣದ ರಾಡ್ಗಳಿಂದ ಹಲ್ಲೆ ನಡೆಸಿದ್ದರು. ತಾಯಿ-ಮಗನನ್ನು ಸಂಬಂಧಿಕರು ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
MUST WATCH
ಹೊಸ ಸೇರ್ಪಡೆ
Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ