ನೀರ ಬಿಟ್ಟು ರಸ್ತೆಗೆ ಬಂದ ಮೊಸಳೆ! ಕುಮಾರಧಾರಾ ನದಿಯಲ್ಲಿ ಹೆಚ್ಚುತ್ತಿದೆ ಮೊಸಳೆಗಳ ಸಂಖ್ಯೆ
Team Udayavani, Nov 5, 2022, 9:13 AM IST
ಆಲಂಕಾರು/ಕಡಬ : ಕಡಬ ತಾಲೂಕಿನ ಆಲಂಕಾರು ಕೊಂಡಾಡಿಕೊಪ್ಪ ಕಿರಿಯ ಪ್ರಾಥಮಿಕ ಶಾಲೆಯ ಹತ್ತಿರದ ರಸ್ತೆಯಲ್ಲಿ ಶುಕ್ರವಾರ ಮುಂಜಾನೆ ಮೊಸಳೆಯೊಂದು ಪತ್ತೆಯಾಗಿದೆ.
ಬೆಳಗಿನ ಜಾವ ರಬ್ಬರ್ ಟ್ಯಾಪಿಂಗ್ಗೆ ಹೊರಟಿದ್ದ ಸ್ಥಳೀಯ ನಿವಾಸಿ ಶೀನಪ್ಪ ಕುಂಬಾರ ಅವರು ಮೊಸಳೆಯೊಂದು ತೆವಳಿಕೊಂಡು ರಸ್ತೆ ದಾಟುತ್ತಿರುವುದನ್ನು ಗಮನಿಸಿ ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು.
ಅರಣ್ಯ ಇಲಾಖೆಯ ಸಿಬಂದಿಗಳಾದ ಬಾಲಚಂದ್ರ ಗೌಡ ಮತ್ತು ರವಿಕುಮಾರ್ ಕೂಡಲೇ ಸ್ಥಳಕ್ಕೆ ಅಗಮಿಸಿ, ಸ್ಥಳೀಯರಾದ ಶೀನಪ್ಪ ಕುಂಬಾರ, ಕಿರಣ್ ಕೊಂಡಾಡಿ ಮತ್ತು ಧರ್ಮಸ್ಥಳ ಶೌರ್ಯ ತಂಡದ ಕಾರ್ಯಕರ್ತರಾದ ಹರೀಶ್, ವಿನೋದ್ ಮುಂತಾದವರ ಜತೆಗೂಡಿ ಮೊಸಳೆಯನ್ನು ಹಿಡಿದು ಸುರಕ್ಷಿತವಾಗಿ ಕುಮಾರಧಾರಾ ನದಿಗೆ ಬಿಟ್ಟರು.
ಬೀಡುಬಿಟ್ಟಿರುವ ಮೊಸಳೆಗಳು
ಕುಮಾರಧಾರಾ ನದಿಯಲ್ಲಿ ಮೊಸಳೆಗಳ ಸಂಖ್ಯೆ ಹೆಚ್ಚುತ್ತಿದ್ದು, ಇತ್ತೀಚಿನ ದಿನಗಳಲ್ಲಿ ನದಿ ತಟದಲ್ಲಿರುವ ಆಲಂಕಾರು ಗ್ರಾಮದ ಕೊಂಡಾಡಿ ಕೊಪ್ಪ, ಏಂತಡ್ಕ, ಶಾಂತಿಮೊಗೆರು, ಪಜ್ಜಡ್ಕ, ಕಕ್ವೆ ಭಾಗಗಳ ಹಲವು ತೋಟಗಳ ಕೆರೆಗಳಲ್ಲಿ ಆಗಾಗ ಮೊಸಳೆಗಳು ಕಾಣಸಿಗುತ್ತಿ¤ವೆ. ಆಗಾಗ ಮೇಲೆ ಬಂದು ಸಂಚಾರಕ್ಕೆ ಹೊರಡುವುದೂ ಸಾಮಾನ್ಯವಾಗಿದೆ. ಕಳೆದ ವರ್ಷ ಪಜ್ಜಡ್ಕದ ಕೆರೆಯಲ್ಲಿ ಠಿಕಾಣಿ ಹೂಡಿದ್ದ ಮೊಸಳೆಯನ್ನು ಅರಣ್ಯ ಇಲಾಖೆಯವರು ಹಿಡಿದು ಕುಮಾರಧಾರಾ ನದಿಗೆ ಬಿಟ್ಟಿದ್ದರು.
ಜನ ಸಂಚಾರ ಇರುವ ಪ್ರದೇಶಗಳಲ್ಲಿ ಮೊಸಳೆಗಳ ಸಂಚಾರ ಹೆಚ್ಚುತ್ತಿರುವುದರಿಂದ ನಾಗರಿಕರು ಭೀತಿಗೊಳಗಾಗಿದ್ದು, ಅರಣ್ಯ ಇಲಾಖೆಯವರು ತತ್ಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಇದನ್ನೂ ಓದಿ : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಎನ್ಐಎ ಅಧಿಕಾರಿಗಳಿಂದ ಮತ್ತೆ ಮೂವರ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
Dharmasthala; ಕೆಎಸ್ಸಾರ್ಟಿಸಿ ಬಸ್ನಡಿ ಸಿಲುಕಿ ಮಹಿಳೆ ಸಾವು