ಮುಂದಿನ ವರ್ಷ ಚೆನ್ನೈ ತಂಡದಲ್ಲಿ ಭಾರಿ ಬದಲಾವಣೆ: ಯುವ ಆಟಗಾರರಿಗೆ ಮಣೆ ಹಾಕಲಿರುವ ಸಿಎಸ್ ಕೆ

ಫೈನಲ್ ಸೋಲು ಹಿರಿಯ ಆಟಗಾರರಿಗೆ ಮುಳುವಾಯಿತೆ ?

Team Udayavani, May 14, 2019, 4:08 PM IST

fleming

ಚೆನ್ನೈ: ಬಹುತೇಕ ಹಿರಿಯ ಆಟಗಾರರನ್ನೇ ಹೊಂದಿರುವ ಚೆನ್ನೈ ಸೂಪರ್ ಕಿಂಗ್ಸ್ ಮುಂದಿನ ಐಪಿಎಲ್ ಆವೃತ್ತಿಗೆ ಬದಲಾವಣೆ ಮಾಡುವ ಸೂಚನೆ ನೀಡಿದೆ. ತಂಡದ ಮುಖ್ಯ ತರಬೇತುದಾರರಾಗಿರುವ ಸ್ಟೀಫನ್ ಫ್ಲೆಮಿಂಗ್ ತಂಡಕ್ಕೆ ಯುವ ಆಟಗಾರರನ್ನು ಆಯ್ಕೆ ಮಾಡುವ ಬಗ್ಗೆ ಸುಳಿವು ನೀಡಿದ್ದಾರೆ.

ಕಳೆದ ರವಿವಾರ ಫೈನಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧದ ಸೋಲಿನ ಬಳಿಕ ಮಾತನಾಡಿದ್ದ ಫ್ಲೆಮಿಂಗ್ ನಮ್ಮ ತಂಡದಲ್ಲಿ ಹಿರಿಯ ಆಟಗಾರರೇ ಇರುವುದು. ಹಾಗಾಗಿಯೂ ನಾವು ಕಳೆದ ವರ್ಷ ಚಾಂಪಿಯನ್ ಆಗಿದ್ದೆವು, ಈ ವರ್ಷ ಫೈನಲ್ ತಲುಪಿದ್ದೇವೆ. ಇದು ಉತ್ತಮ ವಿಚಾರ. ಆದರೆ ಮುಂದಿನ ದಿನಗಳಲ್ಲಿ ತಂಡವನ್ನು ಮರು ನಿರ್ಮಾಣ ಮಾಡುವ ಅಗತ್ಯವಿದೆ ಎಂದರು.

ಈ ವರ್ಷದ ಐಪಿಎಲ್ ನಲ್ಲಿ ನಮ್ಮ ತಂಡದ ಬೌಲಿಂಗ್ ಉತ್ತಮ ಮಟ್ಟದಲ್ಲಿತ್ತು. ಆದರೆ ಬ್ಯಾಟಿಂಗ್ ನಲ್ಲಿ ಸಮಸ್ಯೆ ಕಂಡು ಬಂತು. ಮುಂದಿನ ಆವೃತ್ತಿಗೆ ಬೇರೆ ತಂಡಗಳಂತೆ ನಾವು ಕೂಡಾ ಯುವ ಆಟಗಾರರನ್ನು ತಂಡಕ್ಕೆ ಸೇರಿಸಿಕೊಳ್ಳುವ ಅಗತ್ಯವಿದೆ ಎಂದರು.


ಈಗ ಐಪಿಎಲ್ ಮುಗಿದಿದ್ದು ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ವಿಶ್ವಕಪ್ ಕ್ರಿಕೆಟ್ ಕಡೆಗೆ ಗಮನ ಹರಿಸಲಿದ್ದಾರೆ. ಅವರು ವಿಶ್ವಕಪ್ ಮುಗಿಸಿ ಬಂದ ನಂತರ ಚೆನ್ನೈತಂಡದ ಭವಿಷ್ಯದ ಬಗ್ಗೆ ಚರ್ಚೆ ಮಾಡಲಿದ್ದೇವೆ. ಧೋನಿಯವರೇ ಹೊಸ ಆಟಗಾರರನ್ನು ಆಯ್ಕೆ ಮಾಡಲಿದ್ದಾರೆ ಎಂದು ಐಪಿಎಲ್ ನ ಯಶಸ್ವಿ ಕೋಚ್ ಗಳಲ್ಲಿ ಒಬ್ಬರಾದ ಫ್ಲೆಮಿಂಗ್ ನುಡಿದರು.

ಯಾರನ್ನು ಕೈ ಬಿಡಬಹುದು: ವಯಸ್ಸಿನ ಆಧಾರದಲ್ಲಿ ಕೆಲ ಕ್ರಿಕೆಟಿಗರನ್ನು ಚೆನ್ನೈತಂಡ ಕೈ ಬಿಡುವ ಸಾಧ್ಯತೆ ಇದೆ. ಯಾಕೆಂದರೆ ಇವರು ಫೀಲ್ಡಿಂಗ್ ನಲ್ಲಿ ಕಷ್ಟ ಪಡುತ್ತಾರೆ. ಇದೇ ಕಾರಣಕ್ಕೆ ಧೋನಿ ಭಾರತ ತಂಡದಲ್ಲಿ ಸೆಹವಾಗ್, ದ್ರಾವಿಡ್ ಮುಂತಾದವರನ್ನು ಕೈ ಬಿಟ್ಟಿದ್ದನ್ನು ಇಲ್ಲಿ ನೆನಪಿಸಬಹುದು. ಮುರಳಿ ವಿಜಯ್ ( 34 ವರ್ಷ), ಶೇನ್ ವ್ಯಾಟ್ಸನ್ ( 37 ವರ್ಷ), ಅಂಬಾಟಿ ರಾಯುಡು (33 ವರ್ಷ), ಕೇದಾರ್ ಜಾಧವ್ (33 ವರ್ಷ) ಇಮ್ರಾನ್ ತಾಹಿರ್ ( 39 ವರ್ಷ), ಹರ್ಭಜನ್ ಸಿಂಗ್ ( 38 ವರ್ಷ), ಡ್ವೇನ್ ಬ್ರಾವೋ (35 ವರ್ಷ). ಈ ಆಟಗಾರರು ಮುಂದಿನ ವರ್ಷಕ್ಕೆ ಚೆನ್ನೈ ಕೈಬಿಡಬಹುದಾದ ಸಂಭಾವ್ಯ ಆಟಗಾರರ ಪಟ್ಟಿಯಲ್ಲಿದ್ದಾರೆ. ನಾಯಕ ಧೋನಿಗೆ 37 ವರ್ಷವಾದರೂ ಅವರು ಮುಂದುವರಿಯುವುದು ಬಹುತೇಕ ಖಚಿತ.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sffdsfds

ದಯನೀಯ ವೈಫಲ್ಯದ ಬಳಿಕವೂ ರೋಹಿತ್, ಇಶಾನ್ ಗೆ ಜಯವರ್ಧನೆ ಬೆಂಬಲ

1-sdsdsad

ಕೋವಿಡ್ ಆತಂಕದ ನಡುವೆಯೂ ನಡೆಯುತ್ತಿರುವ ಡೆಲ್ಲಿ-ಪಂಜಾಬ್ ಪಂದ್ಯ

1-fdsfdsf

ಡಿಸಿಯ ಟಿಮ್ ಸೀಫರ್ಟ್ ಗೆ ಕೋವಿಡ್: ಇಂದಿನ ಪಂಜಾಬ್ ವಿರುದ್ಧದ ಪಂದ್ಯ ಅನುಮಾನ

1-aa

ಚೆನ್ನೈ ವಿರುದ್ಧ ಪಂಜಾಬ್ ಗೆಲುವು: ಪ್ಲೇ ಆಫ್ ಹೊಸ ಲೆಕ್ಕಾಚಾರ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಕೊಲೆ ಪ್ರಕರಣ: ಸುಶೀಲ್ ಕುಮಾರ್ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.