ಸಂಸ್ಕೃತಿ, ಸಂಪ್ರದಾಯ; ಹೆಣ್ಣು ಮಕ್ಕಳ ಹಬ್ಬ ಗೌರಿ ಹುಣ್ಣಿಮೆ…

ಗೌರಿ ಹುಣ್ಣಿಮೆ ಹಬ್ಬದಂದು ಮಣ್ಣಿನಿಂದ ಮತ್ತು ಮರದ ಕಟ್ಟಿಗೆಯಿಂದ ತಯಾರಿಸಿದ ಗೌರಮ್ಮನನ್ನು ಕೂರಿಸುತ್ತಾರೆ.

Team Udayavani, Aug 29, 2022, 11:58 AM IST

ಸಂಸ್ಕೃತಿ, ಸಂಪ್ರದಾಯ; ಹೆಣ್ಣು ಮಕ್ಕಳ ಹಬ್ಬ ಗೌರಿ ಹುಣ್ಣಿಮೆ…

ಹಬ್ಬ ಹರಿದಿನಗಳು ಜನರ ಸಡಗರವನ್ನು ಮಾತ್ರ ಹೆಚ್ಚಿಸುವುದಿಲ್ಲ. ಬದಲಾಗಿ ಅವು ಸಂಸ್ಕೃತಿ, ಸಂಪ್ರದಾಯ, ಅಚಾರ ವಿಚಾರಗಳನ್ನು ಮುಂದಿನ ತಲೆಮಾರಿಗೆ ಹೊತ್ತು ಸಾಗುವ ನೌಕೆಗಳು.

ಗೌರಿ ಹುಣ್ಣಿಮೆ ಬಂತೆಂದರೆ ವಿಶೇಷವಾಗಿ ಮಹಿಳೆಯರಿಗೆ ಸಡಗರದ ವಾತಾವರಣ. ಸಕ್ಕರೆಯಿಂದ ವಿವಿಧ ಬಗೆಯ ಮೂರ್ತಿಗಳ ಮಧ್ಯೆ ದೀಪ, ಜಾನಪದ ಹಾಡುಗಳ ವಿಶಿಷ್ಟ ಸಮ್ಮಿಳಿತ ಇಲ್ಲಿ ಕಂಡುಬರುತ್ತದೆ.

ಪುರಾತನ ಕಾಲದಿಂದಲೂ ಸೀಗೆ ಹುಣ್ಣಿಮೆಯ ಅನಂತರ ಗೌರಮ್ಮನನ್ನು ಮನೆಯಲ್ಲಿ ಕೂಡಿಸುವ ಸಂಪ್ರದಾಯ ರೂಡಿಯಲ್ಲಿದೆ. ಗೌರಿ ಹುಣ್ಣಿಮೆ ಹಬ್ಬದಂದು ಮಣ್ಣಿನಿಂದ ಮತ್ತು ಮರದ ಕಟ್ಟಿಗೆಯಿಂದ ತಯಾರಿಸಿದ ಗೌರಮ್ಮನನ್ನು ಕೂರಿಸುತ್ತಾರೆ. ಈ ಗೌರಮ್ಮನಿಗೆ ಹದಿನೈದು ದಿನಗಳ ಕಾಲ ಪ್ರತೀ ಸಂಜೆಯ ಹೊತ್ತಿನಲ್ಲಿ ಚಂಡು ಹೂ ಮತ್ತು ಇನ್ನಿತರ ವಿಧವಿಧದ ಹೂಗಳಿಂದ ಅಲಂಕಾರ ಮಾಡಲಾಗುತ್ತದೆ. ಗೌರಿಯನ್ನು ನೆನೆದು ಅವಳ ಸಂಕಷ್ಟದ ಕುರಿತಾದ ಜಾನಪದ ಹಾಡುಗಳನ್ನು ಹಿರಿಯ ವಯಸ್ಸಿನ ಮಹಿಳೆಯರು ಹಾಡುತ್ತಾರೆ. ಅನಂತರ ಮಂಗಳಾರತಿ ಮಾಡಿ ಪ್ರಸಾದವನ್ನು ಹಂಚಲಾಗುತ್ತದೆ.

ಗೋಧಿ ಮತ್ತು ಮೈದಾ ಹಿಟ್ಟಿನಲ್ಲಿ ತಯಾರಿಸಿದ ಕಣಕದ ಆರತಿಯನ್ನು ವಿಶೇಷವಾಗಿ ದೇವಿಗೆ ಬೆಳಗಲಾಗುತ್ತದೆ. ಹದಿನೈದು ದಿನಗಳ ಕಾಲ ಗೌರಿಯನ್ನು ಭಕ್ತಿಯಿಂದ ಪೂಜೆ ಮಾಡಿದ ಬಳಿಕ ವಿಶೇಷವಾಗಿ ಅಲಂಕಾರವನ್ನು ಮಾಡಲಾಗುತ್ತದೆ. ಊರಿನ ಹಿರಿಯ ಮಹಿಳೆಯರನ್ನು ಗೌರಮ್ಮನ ಹಾಡುಗಳನ್ನು ಹಾಡಲು ವಿಶೇಷವಾಗಿ ಕರೆತರಲಾಗುತ್ತದೆ. ಎರಡು ಮೂರು ಗಂಟೆಗಳ ಕಾಲ ಗೌರಿಯ ಕುರಿತಾಗಿ ಹಾಡುಗಳನ್ನು ಹೇಳಿ ಗೌರಿಯನ್ನು ವಿಸರ್ಜನೆ ಮಾಡಲಾಗುತ್ತದೆ. ಪ್ರತೀ ಮನೆಯ ಹೆಣ್ಣು ಮಕ್ಕಳ ಹೆಸರನ್ನು ಹೇಳುವ ಮೂಲಕ ಹಾಡನ್ನು ಹಾಡಿ ಬಣ್ಣಿಸಲಾಗುತ್ತದೆ.

ಬನ್ನಿ ಮರದ ಕೆಳಗೆ ಗೌರಿಯ ವಿಸರ್ಜನೆ
ಹೆಣ್ಣು ಮಕ್ಕಳು ಹಾಡು ಹೇಳುತ್ತಾ, ಕೋಲಾಟವಾಡುತ್ತಾ ಗೌರಿಯ ವಿಸರ್ಜನೆಗೆ ತೆರಳುತ್ತಾರೆ. ಗದ್ದೆಯ ಬದಿಯಲ್ಲಿರುವ ಬನ್ನಿ ಮರದ ಕೆಳಗೆ ಗೌರಿಯನ್ನಿಟ್ಟು ಮತೊಂದು ಬಾರಿ ಪೂಜೆ ಮಾಡಿ ಹಿಂದಿರುಗುತ್ತಾರೆ. ಉತ್ತರ ಕರ್ನಾಟಕದ ಭಾಗದಲ್ಲಿ ಬನ್ನಿ ಮರಕ್ಕೆ ದೇವರ ಸ್ಥಾನವಿದೆ.

ಕೃಷಿಕರ ಹಬ್ಬ
ಗೌರಿ ಪ್ರತೀಯೊಂದು ಮನೆಯಲ್ಲಿಯೂ ನೆಲೆಸಿ ಸುಃಖ, ಶಾಂತಿ, ನೆಮ್ಮದಿ ನೀಡಲಿ, ಮತ್ತು ಕಾಲ ಕಾಲಕ್ಕೆ ಮಳೆ, ಬೆಳೆ ಬಂದು ಒಳ್ಳೆಯ ಫ‌ಸಲು ನೀಡಲಿ, ಮನೆಯ ತುಂಬೆಲ್ಲಾ ದವಸ, ಧಾನ್ಯ ತುಂಬಲಿ, ರೈತರಿಗೆ ಸಂತಸ ನೀಡಲಿ ಎಂದು ಆರಾಧಿಸಲಾಗುತ್ತದೆ. ಕೆಲವೆಡೆ ಈ ಹಬ್ಬ ಕೃಷಿಕರ ಹಬ್ಬ ಎಂದೇ ಪ್ರತೀತಿಯನ್ನು ಪಡೆದಿದೆ.

ಓಣಿ ಓಣಿ (ಏರಿಯಾ)ಗಳಿಗೆ ತಿರುಗಾಡಿಕೊಂಡು ಸಕ್ಕರೆ ಗೊಂಬೆಗಳನ್ನು ತಲೆಯ ಮೇಲೆ ಹೊತ್ತುಕೊಂಡು ಮನೆ ಮನೆಗೆ ಹೋಗಿ ಆರತಿ ಬೆಳಗುವ ವಾಡಿಕೆಯೂ ರೂಢಿಯಲ್ಲಿರುವುದು ಈ ಗೌರಿ ಹುಣ್ಣಿಮೆಯ ವಿಶೇಷವಾಗಿದೆ. ಉತ್ತರ ಕರ್ನಾಟಕದ ಹಳ್ಳಿಗಳಲ್ಲಿ ಇಂದಿಗೂ ಕೂಡ ಕುಟುಂಬಗಳು ಶ್ರದ್ಧೆ, ಭಯ, ಭಕ್ತಿಯಿಂದ ಗೌರಿ ಹುಣ್ಣಿಮೆಯ ಶಿಷ್ಟಾಚಾರಗಳನ್ನು ಪಾಲನೆ ಮಾಡುತ್ತಾ ಬರುತ್ತಿವೆ. ಆಧುನಿಕ ಕಾಲದಲ್ಲೂ ತನ್ನ ಮೂಲ ಸ್ವರೂಪವನ್ನು ಬದಲಿಸದೆ ಮೊದಲಿನಂತೆಯೇ ಗ್ರಾಮೀಣ ಸೊಗಡಿನ ಜಾನಪದ ಶೈಲಿಯಲ್ಲಿ ಗೌರಿ ಹುಣ್ಣಿಮೆ ತನ್ನ ಮೂಲ ಆಚರಣೆ, ಸಡಗರವನ್ನು ಉಳಿಸಿಕೊಂಡು ಬಂದಿದೆ.

 ಅನ್ನಪೂರ್ಣಾ ಕಲಬುರಗಿ ವಿ.ವಿ. 

ಟಾಪ್ ನ್ಯೂಸ್

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿನಾಯಕ ಗಣಗಳ ನಾಯಕ…ಗಣಪತಿಯ ಮದುವೆ ಬಗ್ಗೆ ಪುರಾಣ ಕಥೆಯಲ್ಲೇನಿದೆ…

ವಿನಾಯಕ ಗಣಗಳ ನಾಯಕ…ಗಣಪತಿಯ ಮದುವೆ ಬಗ್ಗೆ ಪುರಾಣ ಕಥೆಯಲ್ಲೇನಿದೆ…

web exclusive news ojijofkbh

ಭಾಂದವ್ಯ ಬೆಸೆಯುವ ರಾಷ್ಟ್ರೀಯ ಹಬ್ಬ ಗಣೇಶ ಚತುರ್ಥಿ

thumb gauri

ಗೌರಿಯ ಪ್ರಥಮ ಪೂಜೆ…ತವರಲ್ಲಿ ಮಾಡಿದ ಮೊದಲ ಹಬ್ಬ

CHAUTI GANESHA uv web exclusive thumb copy CHAUTI

ಗಣೇಶ ಚತುರ್ಥಿ: ಗಣೇಶನಿಂದ ನಾವು ಕಲಿಯೋದೇನು ? ಹೇಗಿರಬೇಕು ಸಾಂಪ್ರದಾಯಿಕ ಆಚರಣೆ

ಗಣೇಶೋತ್ಸವ ಸ್ಪೆಷಲ್ ; ವಿಶ್ವನಾಯಕ ವಿನಾಯಕ

ಗಣೇಶೋತ್ಸವ ಸ್ಪೆಷಲ್ ; ಶರಣು ಶರಣಯ್ಯ ಶರಣು ಬೆನಕ ನೀಡಯ್ಯ ಬಾಳಲ್ಲಿ ಬೆಳಗುವ ಬೆಳಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.