ಸರಕಾರಿ ನೌಕರರಿಗೂ ಸಮಸ್ಯೆಗಳಿವೆ, ಅವರ ಸಂಬಳ ಕಡಿತ ಮಾಡಬೇಡಿ: ಡಿ ಕೆ ಶಿವಕುಮಾರ್ ಆಗ್ರಹ
Team Udayavani, Apr 7, 2020, 12:15 PM IST
ಬೆಂಗಳೂರು: ರಾಜ್ಯದ ಸರಕಾರಿ ನೌಕರರ ಸಂಬಳದಲ್ಲಿ ದಯವಿಟ್ಟು ಕಡಿತ ಮಾಡಬೇಡಿ. ನೀವೇ ಅವರನ್ನು ಕೆಲಸಕ್ಕೆ ಬರಬೇಡಿ, ರಜೆ ತೆಗೊಳ್ಲಿ ಎಂದು ಹೇಳಿ ಈಗ ಸಂಬಳದಲ್ಲಿ ಕಡಿತ ಮಾಡಿದರೆ ಹೇಗೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಸರಕಾರಕ್ಕೆ ಆಗ್ರಹಿಸಿದರು.
ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಡಿ ಕೆ ಶಿವಕುಮಾರ್ ಅವರು ಸರಕಾರಿ ನೌಕರರಿಗೆ ಸಂಬಳ ನೀಡುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.
ಕೆಲವು ಸರಕಾರಿ ನೌಕರರಿಗೆ ವೇತನ ಆಗಿಲ್ಲ. ಇಂತಹ ಸಮಸ್ಯೆ ಯಾವ ಸರಕಾರದಲ್ಲೂ ಆಗಿರಲಿಲ್ಲ. ಕೆಲವೊಂದು ಯೋಜನೆಗಳನ್ನು ಬೇಕಾದರೆ ನಿಲ್ಲಿಸಿ. ಆದರೆ ಯಾವ ಸಕಾರಿ ನೌಕರರ ವೇತನವನ್ನೂ ನಿಲ್ಲಿಸಬಾರದು ಎಂದು ಆಗ್ರಹಿಸಿದ್ದಾರೆ.
ಕೋವಿಡ್-19 ಲಾಕ್ ಡೌನ್ ಸರಕಾರಿ ನೌಕರರಿಗೂ ಹಿನ್ನೆಲೆ ಸಾಕಷ್ಟು ಸಮಸ್ಯೆಗಳಿವೆ. ಅವರಿಗೆ ತಮ್ಮದೇ ಆದ ಕಷ್ಟಗಳಿವೆ. ಆದ್ದರಿಂದ ಸರಕಾರ ಅವರ ವೇತನವನ್ನು ನಿಲ್ಲಿಸಬಾರದು. ಮೊದಲು ಅವರ ವೇತನ ಬಿಡುಗಡೆ ಮಾಡಬೇಕು ಎಂದು ಡಿ ಕೆ ಶಿವಕುಮಾರ್ ಅವರು ಸರ್ಕಾರಕ್ಕೆ ಒತ್ತಾಯ ಮಾಡಿದರು.
ವಿಶ್ವ ಆರೋಗ್ಯ ದಿನಾಚರಣೆಗೆ ಶುಭಕೋರಿದ ಡಿ ಕೆ ಶಿವಕುಮಾರ್, ರಾಜ್ಯದಲ್ಲಿ ಕೋವಿಡ್-19 ಸೋಂಕು ಹೆಚ್ಚಳವಾಗುತ್ತಿದೆ. ಕೆಪಿಸಿಸಿ ವತಿಯಿಂದ ವೈದ್ಯಕೀಯ ಸೆಲ್ ಪ್ರಾರಂಭಿಸಿದ್ದೇವೆ. ನೂರಕ್ಕೂ ಹೆಚ್ಚು ವೈದ್ಯರು ಸೇವೆ ನೀಡುತ್ತಾರೆ. ಜನರಿಗೆ ಅಗತ್ಯವಾದ ಟ್ರೀಟ್ ಮೆಂಟ್ ಕೊಡುತ್ತಾರೆ ಎಂದರು.
ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಉಗ್ರಪ್ಪ, ಅಜಯ್ ಸಿಂಗ್ ಪತ್ರಿಕಾಗೋಷ್ಟಿಯಲ್ಲಿ ಭಾಗಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
Bangaluru cafe ಸ್ಫೋಟದ ಸಂಚುಕೋರ ಎನ್ಐಎ ಬಲೆಗೆ: ಯಾರಿದು ಷರೀಫ್?
MUST WATCH
ಹೊಸ ಸೇರ್ಪಡೆ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್