
ನೀರಾವರಿ ಇಲಾಖೆ ಅವ್ಯವಹಾರಗಳ ತನಿಖೆಗೆ ಜಂಟಿ ಸದನ ಸಮಿತಿ ರಚನೆಗೆ ಡಿ.ಕೆ.ಶಿವಕುಮಾರ್ ಆಗ್ರಹ
Team Udayavani, Jun 19, 2021, 4:55 PM IST

ಬೆಂಗಳೂರು: ನೀರಾವರಿ ಇಲಾಖೆಯಲ್ಲಿ ನಿಯಮಾವಳಿ ಉಲ್ಲಂಘಿಸಿ 20 ಸಾವಿರ ಕೋಟಿ ರೂ. ಕಾಮಗಾರಿ ಟೆಂಡರ್ ಕರೆಯಲಾಗಿದೆ ಎಂದು ಬಿಜೆಪಿ ನಾಯಕರೇ ಆರೋಪ ಮಾಡಿದ್ದು, ಈ ಬಗ್ಗೆ ಮೌನ ವಹಿಸುವ ಮೂಲಕ ಮುಖ್ಯಮಂತ್ರಿಗಳು ಈ ಆರೋಪ ನಿಜ ಎಂದು ಒಪ್ಪಿಕೊಂಡಿದ್ದಾರೆ. ಹೀಗಾಗಿ ಹಗರಣದ ತನಿಖೆಗೆ ಸರಕಾರ ಜಂಟಿ ಸದನ ಸಮಿತಿ ರಚಿಸಲಿ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಗ್ರಹಿಸಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಮನ ಹೆಸರು ಹೇಳುವ ಪಕ್ಷದಲ್ಲಿ ರಾಮಾಯಣ, ಮಹಾಭಾರತ ಎಲ್ಲವೂ ನಡೆಯುತ್ತಿದೆ. ಬಿಜೆಪಿಯ ಯುದ್ಧಕಾಂಡ, ಜನಸಾಮಾನ್ಯರ ಕರ್ಮಕಾಂಡ. ಇದು ಮುಗಿಯದ ನರಕ ಯಾತನೆಯಾಗಿದೆ. ಈ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನವೇ ನಾನು ಸದನದಲ್ಲಿ ಈ ಬಗ್ಗೆ ಭವಿಷ್ಯ ಹೇಳಿದ್ದೆ. ಈ ಸಮಯದಲ್ಲಿ ಬಿಜೆಪಿಯವರಿಗೆ ಹೆಚ್ಚು ಮಾತನಾಡಲು ನಾವು ಅವಕಾಶ ಕೊಡಬೇಕು. ರಾಜ್ಯಕ್ಕೆ ಅವರೇ ಸಂದೇಶ ನೀಡುತ್ತಿದ್ದಾರೆ. ಅವರು ಆಡಳಿತ ಪಕ್ಷದ ಜನರ ಪ್ರತಿನಿಧಿಗಳು. ಅವರಿಗೆ ನಮಗಿಂತ ಹೆಚ್ಚಿನ ಸತ್ಯ ಗೊತ್ತಿರುತ್ತದೆ. ವಿಶ್ವನಾಥ್ ಅವರು ನೀರಾವರಿ ಇಲಾಖೆ ಅವ್ಯವಹಾರದ ಬಗ್ಗೆ ಮಾಡಿರುವ ಆರೋಪ ಸಂಬಂಧ ನನಗೂ ಮಾಹಿತಿ ಇದೆ. 10 ಕೋಟಿ ರೂ. ಕಾಮಗಾರಿಗೆ 20 ಕೋಟಿ ರೂ. ಅಂದಾಜು ವೆಚ್ಚ ಸಿದ್ಧವಾಗಿದೆ. ಈ ಸರ್ಕಾರ ಬಂದ ಮೇಲೆ ಆರ್ಥಿಕ ಸಮಸ್ಯೆ ಇದ್ದರೂ, ನೀರಾವರಿ ಇಲಾಖೆಯಲ್ಲಿ ಹೇಗೆ ನಿಯಮಗಳ ಉಲ್ಲಂಘನೆ ಮಾಡಿ ಕಾಮಗಾರಿಗಳಿಗೆ ಅನುಮತಿ ನೀಡಲಾಗುತ್ತಿದೆ ಎಂಬುದೂ ತಿಳಿದಿದೆ ಎಂದರು.
ಇದನ್ನೂ ಓದಿ:ರಾಜೀನಾಮೆ ನೀಡದೆ ಬಿಜೆಪಿಗೆ ಸೇರಿರುವ 10 ಶಾಸಕರನ್ನ ಪಕ್ಷಕ್ಕೆ ಸೇರಿಸಲ್ಲ : ಗುಂಡೂರಾವ್
ಈ ಎಲ್ಲ ವಿಚಾರಗಳ ಬಗ್ಗೆ ಸದನದಲ್ಲಿ ಪ್ರಸ್ತಾಪಿಸಲು ನಾನು ಸುಮ್ಮನಿದ್ದೆ. ಇನ್ನು ಏನೆಲ್ಲಾ ಮಾಡುತ್ತಾರೋ ಮಾಡಲಿ, ಸದನದಲ್ಲಿ ಎಲ್ಲವನ್ನೂ ಒಟ್ಟಿಗೆ ಚರ್ಚೆ ಮಾಡೋಣ ಅಂತಾ ಕಾಯುತ್ತಿದ್ದೆವು. ಈ ಮಧ್ಯದಲ್ಲಿ ವಿಶ್ವನಾಥ್ ಅವರು ರಾಜ್ಯದ ಜನರ ಮುಂದೆ ಈ ವಿಚಾರ ಬಿಚ್ಚಿಟ್ಟಿದ್ದಾರೆ. ಸಿಎಂ ಬಳಿ ಈ ಇಲಾಖೆ ಇದ್ದು, ಈ ಬಗ್ಗೆ ಅವರು ಸ್ಪಷ್ಟನೆ ನೀಡದೇ ಅಧಿಕಾರಿಗಳ ಮೂಲಕ ಹೇಳಿಕೆ ಕೊಡಿಸಿದ್ದಾರೆ. ಆ ಮೂಲಕ ಪರೋಕ್ಷವಾಗಿ ಈ ಆರೋಪ ಸತ್ಯ ಎಂದು ಒಪ್ಪಿಕೊಂಡಿದ್ದಾರೆ ಎಂದು ಡಿಕೆಶಿ ಆರೋಪಿಸಿದ್ದಾರೆ.
ಮುಖ್ಯಮಂತ್ರಿಗಳು ಈ ವಿಚಾರದಲ್ಲಿ ಜಂಟಿ ಸದನ ಸಮಿತಿ ರಚನೆ ಮಾಡಬೇಕು. ಬೇಕಾದರೆ ಸಮಿತಿಗೆ ನಿಮ್ಮ ಪಕ್ಷದವರನ್ನೇ ಅಧ್ಯಕ್ಷರನ್ನಾಗಿ ಮಾಡಿಕೊಂಡು ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಶಾಸಕರು ಹಾಗೂ ಪರಿಷತ್ ಸದಸ್ಯರನ್ನು ಸಮಿತಿಗೆ ಸೇರಿಸಿ. ಈ ವಿಚಾರ ಚರ್ಚಿಸಲು ತಕ್ಷಣ ಅಧಿವೇಶನ ಕರೆಯಿರಿ. ಈಗ ನಿಮ್ಮ ಕುರ್ಚಿ ಬಿಗಿಯಾಗಿದೆ. ಅಧಿವೇಶನ ಕರೆಯಲು ಯಾವುದೇ ಆತಂಕವಿಲ್ಲ. ವಿಮಾನ ನಿಲ್ದಾಣದಿಂದ ಕುಮಾರಕೃಪಾವರೆಗೂ ನಿಮ್ಮ ಸಿನಿಮಾದ ದೃಶ್ಯವನ್ನು ರಾಜ್ಯದ ಜನ ಕಣ್ತುಂಬಿಕೊಂಡಿದ್ದಾರೆ ಎಂದು ವ್ಯಂಗ್ಯವಾಡಿದರು.
ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ದೂರವಾಣಿ ಕದ್ದಾಲಿಕೆ ದೂರಿನ ತನಿಖೆಯನ್ನು ಯಡಿಯೂರಪ್ಪ ಅವರು ಅಧಿಕಾರಕ್ಕೆ ಬರುತ್ತಿದ್ದಂತೆ ಸಿಬಿಐಗೆ ವಹಿಸಿದ್ದರು. ಈಗ ಅವರದೇ ಪಕ್ಷದ ಬೆಲ್ಲದ್ ಅವರು ಕದ್ದಾಲಿಕೆ ಆರೋಪ ಮಾಡಿರುವಾಗ ಯಾಕೆ ಬೆಂಗಳೂರು ಪೊಲೀಸ್ ಆಯುಕ್ತರಿಂದ ತನಿಖೆ ನಡೆಸುತ್ತಿದ್ದಾರೆ? ನಾನು ಕಮಿಷನರ್ ಅವರು ಒಳ್ಳೆಯ ಕೆಲಸ ಮಾಡುವ ನಿರೀಕ್ಷೆ ಇಟ್ಟುಕೊಂಡಿದ್ದೆ. ಆದರೆ, ಅವರು ನಿರೀಕ್ಷೆ ಹುಸಿ ಮಾಡುತ್ತಿದ್ದಾರೆ. ಬಡ್ತಿ ಸಿಕ್ಕ ಕಾರಣ ಅನೇಕ ಕೇಸ್ ಗಳನ್ನು ಮುಚ್ಚಿಹಾಕಲು ತರಾತುರಿಯಲ್ಲಿದ್ದಾರೆ. ಮುಂದೆ ಈ ವಿಚಾರದಲ್ಲಿ ಏನು ಮಾಡಬೇಕೆಂದು ಪಕ್ಷ ತೀರ್ಮಾನಿಸಲಿದೆ ಎಂದಿದ್ದಾರೆ.
ನನ್ನ ದೂರವಾಣಿ ಕರೆ ಕದ್ದಾಲಿಕೆಯಾಗುತ್ತಿದೆ ಎಂದಾಗ ಅಶೋಕ್ ಅವರು ಇದು ಕಾಂಗ್ರೆಸ್ ಸಂಸ್ಕೃತಿ ಎಂದಿದ್ದರು. ಹಾಗಾದ್ರೆ ಬೆಲ್ಲದ್ ಅವರ ದೂರವಾಣಿ ಕರೆ ಕದ್ದಾಲಿಕೆ ಯಾರ ಸಂಸ್ಕೃತಿ? ನನ್ನ ದೂರವಾಣಿ ಕರೆ ಕದ್ದಾಲಿಕೆ ಈ ಕಾಲಕ್ಕೆ ಮುಗಿಯುವುದಿಲ್ಲ. ನನ್ನನ್ನು ಎಷ್ಟು ಸಂಸ್ಥೆಗಳು ಬೆನ್ನತ್ತಿವೆ ಎಂಬ ವಿಚಾರ ಈಗ ಬೇಡ. ಬಿಜೆಪಿಯ ಆಂತರಿಕ ಬಿಕ್ಕಟ್ಟನ್ನು ವಿರೋಧ ಪಕ್ಷದವರು ಬಳಸಿಕೊಳ್ಳುತ್ತಿಲ್ಲ ಅಂತಾ ಸಚಿವ ಈಶ್ವರಪ್ಪನವರೇ ಅಪ್ಪಣೆ ಕೊಡಿಸಿದ್ದಾರೆ. ಇದೆಲ್ಲವನ್ನೂ ನಾವು ಸದನದಲ್ಲೇ ಚರ್ಚೆ ಮಾಡೋಣ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

ಚಿನ್ನದ ಬ್ರೇಸ್ಲೆಟ್ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಬ್ಲೂ ಫ್ಲ್ಯಾಗ್ ಸಿಬಂದಿ

ಗ್ರಾಚ್ಯುಟಿಗೆ ಒಪ್ಪಿಗೆ: ಧರಣಿ ಕೈಬಿಟ್ಟ ಅಂಗನವಾಡಿ ಕಾರ್ಯಕರ್ತೆಯರು

ಶಾಲಾ ಮಕ್ಕಳ ಸಮವಸ್ತ್ರ: ಸರಕಾರದ ವಿರುದ್ಧ ಎಚ್ಡಿಕೆ ಕಿಡಿ

ರಾಜ್ಯ ಸರಕಾರದ ಕಮಿಷನ್ ಶೇ.80ಕ್ಕೆ: ಟ್ವೀಟ್ ಮೂಲಕ ಕುಟುಕಿದ ಕಾಂಗ್ರೆಸ್

ಕೊಣಾಜೆ ಪೊಲೀಸರ ದಾಳಿ: 27 ಲಕ್ಷ ರೂ ಮೌಲ್ಯದ 111ಕೆ.ಜಿ. ಗಾಂಜಾ ವಶ, ಮೂವರ ಬಂಧನ