ದಕ್ಷಿಣಕನ್ನಡ ಹಾಗೂ ಉಡುಪಿಯಲ್ಲಿ ರವಿವಾರ ಕರ್ಫ್ಯೂ ಹಿಂದೆಗೆತ: ಸೀಮಿತ ಬಸ್ ಸಂಚಾರ
Team Udayavani, Aug 1, 2020, 9:48 PM IST
ಮಂಗಳೂರು/ ಉಡುಪಿ: ಕೋವಿಡ್ ನಿಯಂತ್ರಿಸುವ ನಿಟ್ಟಿನಲ್ಲಿ ವಿಧಿಸಲಾಗಿದ್ದ ರವಿವಾರದ ಕರ್ಫ್ಯೂವನ್ನು ಹಿಂಪಡೆದಿರುವ ಕಾರಣ ಆ. 2ರಿಂದ ರವಿವಾರಗಳಲ್ಲಿ ವ್ಯಾಪಾರ ವಹಿವಾಟಿಗೆ ಯಾವುದೇ ನಿರ್ಬಂಧ ಇರುವುದಿಲ್ಲ.
ಆ. 2ರಂದು ದ.ಕ. ಜಿಲ್ಲೆಯಲ್ಲಿ ಕೆಎಸ್ಸಾರ್ಟಿಸಿ ಮತ್ತು ಖಾಸಗಿ ಬಸ್ಗಳು ಸಂಚರಿಸಲಿವೆ. ಮಂಗಳೂರು ನಗರದಲ್ಲಿ ಸೀಮಿತ ಸಂಖ್ಯೆಯಲ್ಲಿ ಸಿಟಿ ಬಸ್ಗಳು ಓಡಾಡಲಿವೆ.
ಉಡುಪಿ ಜಿಲ್ಲೆಯಾದ್ಯಂತ ರವಿವಾರ ಜನರ ಓಡಾಟಕ್ಕೆ ಮುಕ್ತ ಅವಕಾಶ ಕಲ್ಪಿಸಲಾಗಿದೆ. ಕಂಟೈನ್ಮೆಂಟ್ ವಲಯಗಳಲ್ಲಿ ಮಾತ್ರ ಆಗಸ್ಟ್ 31ರ ವರೆಗೆ ಕಟ್ಟುನಿಟ್ಟು ಮುಂದುವರಿಯಲಿದೆ.
ಎಂದಿನಂತೆ ಸಂತೆ
ರವಿವಾರ ಲಾಕ್ಡೌನ್ ಇದ್ದಾಗ ಸಂತೆಕಟ್ಟೆ ಸಂತೆ ಶನಿವಾರ ನಡೆಯುತ್ತಿತ್ತು. ಆ. 2ರಿಂದ ಮತ್ತೆ ಪ್ರತೀ ರವಿವಾರ ನಡೆಯಲಿದೆ.
ಸಿಟಿ ಬಸ್ ಸಂಚಾರ ಇಲ್ಲ
ಪ್ರಯಾಣಿಕರು ಇರುವುದಿಲ್ಲ ಎಂಬ ಕಾರಣಕ್ಕೆ ಈ ರವಿವಾರವೂ ಸಿಟಿ ಬಸ್ಗಳು ಸಂಚಾರ ಮೊಟಕುಗೊಳಿಸಲಿವೆ. ರವಿವಾರ ಬಸ್ ಓಡಿಸುವುದರಿಂದ ಆರ್ಥಿಕ ನಷ್ಟ ಉಂಟಾಗಲಿದೆ ಎಂದು ಉಡುಪಿ ಸಿಟಿ ಬಸ್ ಮಾಲಕರ ಸಂಘದ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.
ನರ್ಮ್ ಬಸ್ ಇದೆ
ನರ್ಮ್ ಹಾಗೂ ಕೆಎಸ್ಸಾರ್ಟಿಸಿ ಬಸ್ಗಳು ಸಾರ್ವಜನಿಕರ ಸೇವೆಗೆ ಲಭ್ಯವಿರಲಿವೆ ಎಂದು ಕೆಎಸ್ಸಾರ್ಟಿಸಿ ಉಡುಪಿ ವಿಭಾಗದ ಡಿಪೋ ಮ್ಯಾನೇಜರ್ ಉದಯ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ