ತಿಂಗಳಾದರೂ ಸೋಂಕು ಇಳಿದಿಲ್ಲ : ದ.ಕನ್ನಡ ಜಿಲ್ಲಾಡಳಿತಕ್ಕೆ ಪಾಸಿಟಿವಿಟಿ ದರ ಇಳಿಸುವ ಸವಾಲು
Team Udayavani, Jun 6, 2021, 7:20 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ಒಂದು ವಾರದೊಳಗೆ ಕೊರೊನಾ ಪಾಸಿಟಿವಿಟಿ ಪ್ರಮಾಣ ಕಡಿಮೆ ಮಾಡಲೇ ಬೇಕಾದ ಅನಿವಾರ್ಯ ಎದುರಾಗಿದೆ.
ಜೂ. 15ರೊಳಗೆ ಪಾಸಿಟಿವಿಟಿ ದರ ಶೇ. 5ಕ್ಕಿಂತ ಕೆಳಗಿಳಿದರೆ ಮಾತ್ರ ಅನ್ಲಾಕ್ ಜಿಲ್ಲೆಗಳ ಪಟ್ಟಿಗೆ ಸೇರಬಹುದು. ಸೋಂಕು ಸರಪಳಿ ಕಡಿಯಲು ಜಿಲ್ಲಾಡಳಿತ ಲಾಕ್ಡೌನನ್ನು ಉಳಿದೆಡೆಗಿಂತ ಮೊದಲೇ ಜಾರಿಗೊಳಿಸಿದರೂ ಬಹಳ ಲಾಭವಾಗಿಲ್ಲ. ಈಗಲೂ ಜನ ಸಹಕರಿಸದಿದ್ದರೆ, ಜಿಲ್ಲಾಡಳಿತ ನಿಯಮ ಪಾಲನೆಗೆ ಮುಂದಾಗದಿದ್ದರೆ ಮತ್ತಷ್ಟು ದಿನ ಲಾಕ್ಡೌನ್ ಮುಂದುವರಿಯಲಿದೆ.
ನಿಯಂತ್ರಣ ಇಲ್ಲ
ರಾಜ್ಯಾದ್ಯಂತ ಎ. 27ರಿಂದ ಲಾಕ್ಡೌನ್ ಜಾರಿಗೊಂಡರೂ ದಕ್ಷಿಣ ಕನ್ನಡದಲ್ಲಿ ಎ. 22ರಿಂದಲೇ ಭಾಗಶಃ ಲಾಕ್ಡೌನ್ ಜಾರಿಯಾಗಿತ್ತು.
ಯಾವೆಲ್ಲ ಗ್ರಾ.ಪಂ. ವ್ಯಾಪ್ತಿಯಲ್ಲಿ ಎಷ್ಟು ಸೋಂಕು ಇದೆ ಎಂಬ ಮಾಹಿತಿ ಕಲೆ ಹಾಕಲಾಗುತ್ತಿದೆ. ಹೆಚ್ಚು ಕೊರೊನಾ ಪ್ರಕರಣ ಇರುವಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಒಂದು ವೇಳೆ ವಾರದ ಬಳಿಕ ಲಾಕ್ಡೌನ್ ಸಡಿಲಿಕೆ ಮಾಡಿದರೂ ಹೆಚ್ಚು ಪಾಸಿಟಿವ್ ಪ್ರಕರಣ ಇರುವಲ್ಲಿ ಸಭೆ, ಕಾರ್ಯಕ್ರಮಗಳಿಗೆ ನಿರ್ಬಂಧ ಹೇರುತ್ತೇವೆ.
– ಡಾ| ರಾಜೇಂದ್ರ ಕೆ.ವಿ., ದ.ಕ. ಜಿಲ್ಲಾಧಿಕಾರಿ
ಕೂಡಲೇ ಮಾಡಬೇಕಾದದ್ದು
1. ಅನಗತ್ಯ ಸಂಚಾರಕ್ಕೆ ಕಡಿವಾಣ ಸಾಧ್ಯವಾಗಿಲ್ಲ, ಬಿಡುವಿನ ಸಮಯದಲ್ಲಿ ಜನಸಂದಣಿ ಕಡಿಮೆ ಮಾಡುವಲ್ಲಿ ಸಂಪೂರ್ಣ ಯಶಸ್ವಿಯಾಗಿಲ್ಲ. ಅದು ಸಾಧ್ಯವಾಗಬೇಕು.
2. ಮೈಕ್ರೊ ಕಂಟೈನ್ಮೆಂಟ್ ಜಾರಿಗೆ ಇನ್ನಷ್ಟು ಗಮನ ಕೊಡಬೇಕು ಮತ್ತು ಕಟ್ಟುನಿಟ್ಟಿನ ನಿಯಮ ಪಾಲನೆ ಆಗಬೇಕು.
3. ಚೆಕ್ ಪೋಸ್ಟ್ಗಳಲ್ಲಿ ಸೂಕ್ತ ತಪಾಸಣೆ ನಡೆ ಯುತ್ತಿಲ್ಲ ಎಂಬ ಟೀಕೆ ಇದೆ. ಜಿಲ್ಲಾಡಳಿತ ಮತ್ತು ಪೊಲೀಸರು ಗಮನ ಹರಿಸಬೇಕು.
4. ಗ್ರಾಮೀಣ ಭಾಗದಲ್ಲಿ ಸೋಂಕು ಕಡಿಮೆ ಮಾಡಲು ಅನಿವಾರ್ಯವೆನಿಸಿದಲ್ಲಿ ಉಡುಪಿ ಜಿಲ್ಲೆಯಂತೆ ಸೋಂಕು ಹೆಚ್ಚಿರುವಲ್ಲಿ ಗ್ರಾ.ಪಂ. ಲಾಕ್ಡೌನ್ ನಿಯಮ ಪಾಲಿಸಬಹುದು.
5. “ಟ್ರೇಸ್, ಟೆಸ್ಟ್, ಟ್ರೀಟ್’-3 ಟಿ ಸೂತ್ರ ವ್ಯಾಪಕ ಅನುಸರಣೆಯಾಗಬೇಕು.
6. ಜನರು ಅನಗತ್ಯ ಸಂಚಾರಕ್ಕೆ ಕಡಿವಾಣ ಹಾಕಿ ಜಿಲ್ಲಾಡಳಿತಕ್ಕೆ ಸಹಕರಿಸಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ