Election Preparation: ನೋಡಲ್ ಅಧಿಕಾರಿಗಳಿಗೆ ಡಿಸಿ ಸೂಚನೆ
Team Udayavani, Apr 6, 2023, 6:38 AM IST
ಮಂಗಳೂರು: ಚುನಾವಣ ಕಾರ್ಯಕ್ಕೆ ನಿಯೋಜಿತರಾಗಿರುವ ವಿವಿಧ ಸಮಿತಿಗಳ ನೋಡಲ್ ಅಧಿಕಾರಿಗಳು ಪೂರ್ವ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾ ಚುನಾ ವಣ ಅಧಿಕಾರಿ ಹಾಗೂ ಡಿಸಿ ರವಿಕುಮಾರ್ ಎಂ.ಆರ್. ಸೂಚಿಸಿದ್ದಾರೆ.
ಬುಧವಾರ ತಮ್ಮ ಕಚೇರಿಯ ಸಭಾಂ ಗಣದಲ್ಲಿ ನೋಡಲ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ, ಅಧಿಕಾರಿಗಳು ತಮ್ಮ ಕರ್ತವ್ಯದ ಬಗ್ಗೆ ಚೆನ್ನಾಗಿ ತಿಳಿದು ಕೊಂಡಿರಬೇಕು. ನಾಮಪತ್ರ ಸಲ್ಲಿಕೆ ಆರಂಭವಾಗುತ್ತಿದ್ದಂತೆ ಸಾಮಾಜಿಕ ಮಾಧ್ಯಮಗಳಲ್ಲೂ ಪ್ರಚಾರ ಕಾರ್ಯಗಳು ಬಿರುಸು ಪಡೆಯುತ್ತವೆ. ಇದಕ್ಕೆ ಸಂಬಂಧಪಟ್ಟ ಅಧಿ ಕಾರಿಗಳು ಅಗತ್ಯ ಮಾಹಿತಿ ಸಂಗ್ರಹಿಸಿ ಸಿದ್ಧರಾಗಿರಬೇಕು ಎಂದರು.
ಸಿ-ವಿಜಿಲ್, ಸುವಿಧಾ ಸೇರಿದಂತೆ ಎಲ್ಲದರ ಬಗ್ಗೆ ಮಾಹಿತಿ ಹೊಂದಿದ್ದು, ಯಾವುದೇ ದೂರು ದಾಖಲಾದ ಕೂಡಲೇ ಅದಕ್ಕೆ ಪ್ರತಿ ಕ್ರಿಯಿಸಬೇಕು. ಮಂಗಳೂರು ವಾಯು ಹಾಗೂ ಜಲ ಮಾರ್ಗ ಹೊಂದಿರುವ ಕಾರಣ ಹೊರಗಿನಿಂದ ಬರಬಹುದಾದ ವಸ್ತುಗಳ ಬಗ್ಗೆ ನಿಗಾ ವಹಿಸಬೇಕು ಎಂದು ಸೂಚಿಸಿದರು.
ಜಿ.ಪಂ. ಸಿಇಒ ಡಾ| ಕುಮಾರ್, ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಅನುÏ ಕುಮಾರ್, ಜಿಲ್ಲಾ ಎಸ್ಪಿ ವಿಕ್ರಂ ಅಮಟೆ, ಪಾಲಿಕೆ ಆಯುಕ್ತ ಚೆನ್ನಬಸಪ್ಪ, ಅಪರ ಜಿಲ್ಲಾಧಿಕಾರಿ ಕೃಷ್ಣ ಮೂರ್ತಿಎಚ್.ಕೆ. ಉಪಸ್ಥಿತರಿದ್ದರು.
ಸಾರ್ವ ಜನಿಕರಿಂದ ನೀತಿ ಸಂಹಿತೆ ಕುರಿತ ದೂರು ದಾಖ ಲಾದ ಕೂಡಲೇ ಅದನ್ನು ಪರಿಶೀಲಿಸಿ ಪ್ರತಿಕ್ರಿಯಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಸಲ್ಲದು.
-ರವಿಕುಮಾರ್ ಎಂ.ಆರ್., ಜಿಲ್ಲಾಧಿಕಾರಿ, ದಕ್ಷಿಣ ಕನ್ನಡ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
MUST WATCH
ಹೊಸ ಸೇರ್ಪಡೆ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್