ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಮಳೆ


Team Udayavani, May 10, 2023, 8:10 AM IST

ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಮಳೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಸೋಮವಾರ ತಡರಾತ್ರಿ ಮಂಗಳವಾರ ಮುಂಜಾನೆ ವೇಳೆ ಸಾಧಾರಣ ದಿಂದ ಉತ್ತಮ ಸುರಿದಿದೆ.

ಸುಬ್ರಹ್ಮಣ್ಯ, ಸುಳ್ಯ, ಬೆಳ್ತಂಗಡಿ, ಉಪ್ಪಿನಂಗಡಿ, ಧರ್ಮಸ್ಥಳ, ಪುತ್ತೂರು, ಮೂಡುಬಿದಿರೆ, ಮಂಗಳೂರು ನಗರ ಸೇರಿದಂತೆ ಹಲವೆಡೆ ಮಳೆ ಯಾಗಿದೆ. ಮಂಗಳೂರು ಹಾಗೂ ಸುತ್ತ ಮುತ್ತಲ ಪ್ರದೇಶಗಳಲ್ಲಿ ಸುರಿದ ಮಳೆಗೆ ರಸ್ತೆಗಳಲ್ಲೇ ನೀರು ಹರಿದಿದೆ. ಮುಂಜಾನೆ ವೇಳೆ ತಂಪಿನ ವಾತಾವರಣವಿದ್ದರೂ ಮಧ್ಯಾಹ್ನವಾಗುತ್ತಿದ್ದಂತೆ ಬಿಸಿಲ ಧಗೆ ಹೆಚ್ಚಾಗಿದೆ. ಹಗಲು ವೇಳೆಯಲ್ಲೂ ಆಕಾಶದಲ್ಲಿ ಮೋಡದ ಚಲನೆ ಕಂಡು ಬಂದಿದೆ. ಸಂಜೆ ವೇಳೆಗೆ ಜಿಲ್ಲೆಯ ಅಲ್ಲಲ್ಲಿ ಮತ್ತೆ ಮಳೆ ಸುರಿದಿದೆ.

ಆಗ್ನೇಯ ಬಂಗಾಲಕೊಲ್ಲಿ ಮತ್ತು ದಕ್ಷಿಣ ಅಂಡಮಾನ್‌ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಬಲ ಪಡೆಯುತ್ತಿದ್ದು, ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆಯಿದೆ. ಸದ್ಯದ ಪ್ರಕಾರ ಮ್ಯಾನ್ಮಾರ್‌ಗೆ ಅಪ್ಪಳಿಸುವ ಲಕ್ಷಣಗಳಿವೆ. ಇದರ ಪರಿಣಾಮ ಬುಧವಾರ ಕರಾವಳಿಗೆ ಎಲ್ಲೋ ಅಲರ್ಟ್‌ ಘೋಷಿಸಲಾಗಿದ್ದು, ಹಲವು ಕಡೆಗಳಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆ ಇದೆ.

ಮಂಗಳೂರಿನಲ್ಲಿ ದಿನದ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್‌ ಮತ್ತು ಕನಿಷ್ಠ ತಾಪಮಾನ 24.2 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ.

ಸುಳ್ಯ, ಸುಬ್ರಹ್ಮಣ್ಯ ಮಳೆ
ಸುಬ್ರಹ್ಮಣ್ಯ/ಸುಳ್ಯ: ಕಡಬ ಹಾಗೂ ಸುಳ್ಯ ತಾಲೂಕಿನ ಹಲವೆಡೆ ಮಂಗಳವಾರ ಸಂಜೆ ವೇಳೆ ಹನಿ ಮಳೆಯಾಯಿತು. ಎಣ್ಮೂರು, ಎಡಮಂಗಲ ಭಾಗದಲ್ಲಿ ಸಾಧಾರಣ ಮಳೆಯಾಗಿದೆ. ಸುಬ್ರಹ್ಮಣ್ಯ, ಪಂಜ, ನಿಂತಿಕಲ್ಲು, ಬೆಳ್ಳಾರೆ, ಐವರ್ನಾಡು, ಸೋಣಂಗೇರಿ, ಸುಳ್ಯ, ಕಲ್ಮಕಾರು, ಐನಕಿದು, ಕೊಲ್ಲಮೊಗ್ರು, ಹರಿಹರ ಪಳ್ಳತ್ತಡ್ಕ, ಕಡಬದ ಕೆಲವೆಡೆ ಭಾಗದಲ್ಲಿ ಹನಿ ಮಳೆಯಾಗಿದೆ.

ಸೋಮವಾರ ರಾತ್ರಿ ಕಡಬ, ಸುಳ್ಯ ತಾಲೂಕಿನ ಹಲವೆಡೆ ಗುಡುಗು ಸಹಿತ ಉತ್ತಮ ಮಳೆಯಾಗಿದೆ. ಸುಬ್ರಹ್ಮಣ್ಯ, ಸುಳ್ಯ, ಕಡಬ ಪರಿಸರದಲ್ಲಿ ಧಾರಾಕಾರ ಮಳೆ ತಡರಾತ್ರಿ ವರೆಗೂ ಮುಂದುವರಿದಿತ್ತು.

ಬೆಳ್ತಂಗಡಿಯಲ್ಲಿ ಉತ್ತಮ ಮಳೆ
ಬೆಳ್ತಂಗಡಿ: ತಾಲೂಕಿನ ಹೆಚ್ಚಿನ ಭಾಗಗಳಲ್ಲಿ ಸೋಮವಾರ ರಾತ್ರಿ ಗುಡುಗು ಮಿಂಚು ಸಹಿತ ಉತ್ತಮ ಮಳೆಯಾಗಿದ್ದು, ಮಂಗಳವಾರ ಸಂಜೆ ತಾಲೂಕಿನ ಅಲ್ಲಲ್ಲಿ ಸಾಮಾನ್ಯ ಮಳೆ ಸುರಿದಿದೆ.
ಸೋಮ ವಾರ ರಾತ್ರಿ ಮಳೆ ಆರಂಭ ವಾಗು ತ್ತಿದ್ದಂತೆ ಕೆಲವೆಡೆ ವಿದ್ಯುತ್‌ ಅಡಚಣೆ ಉಂಟಾಯಿತು.

ಬಂಟ್ವಾಳದಲ್ಲಿ ಸಾಧಾರಣ ಮಳೆ
ಬಂಟ್ವಾಳ: ತಾಲೂಕಿನ ಹೆಚ್ಚಿನ ಕಡೆ ಸೋಮವಾರ ತಡರಾತ್ರಿ ಸಾಧಾರಣ ಮಳೆಯಾಗಿದೆ. ರಾತ್ರಿ ಯಾಗುತ್ತಲೇ ಸಣ್ಣಗೆ ಮಿಂಚು ಹಾಗೂ ಗುಡುಗು ಕಾಣಿಸಿಕೊಂಡಿದ್ದು, 10.30ರ ಬಳಿಕ ಮಳೆ ಸುರಿಯಲಾರಂಭಿಸಿದೆ.

ಸಿದ್ದಾಪುರ: ತುಂತುರು ಮಳೆ
ಸಿದ್ದಾಪುರ: ಹೊಸಂಗಡಿ, ಯಡ ಮೊಗೆ, ಹಳ್ಳಿಹೊಳೆ, ಅಜ್ರಿ, ಅಂಪಾರು, ಶಂಕರನಾರಾಯಣ, ಹಾಲಾಡಿ, ಬೆಳ್ವೆ, ಮಡಾಮಕ್ಕಿ, ಹೆಂಗವಳ್ಳಿ, ಅಮಾಸೆಬೈಲು, ಉಳ್ಳೂರು – 74 ಪರಿಸರದಲ್ಲಿ ಸುಮಾರು ಅರ್ಧ ಗಂಟೆ ತುಂತುರು ಮಳೆ ಸುರಿದಿದೆ.

ಟಾಪ್ ನ್ಯೂಸ್

Temperature; 39.2 ಡಿಗ್ರಿ: ಬೆಂಗಳೂರು ಏರ್‌ಪೋರ್ಟ್‌ ದಾಖಲೆ ತಾಪ

Temperature; 39.2 ಡಿಗ್ರಿ: ಬೆಂಗಳೂರು ಏರ್‌ಪೋರ್ಟ್‌ ದಾಖಲೆ ತಾಪ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

IPL ಚೆನ್ನೈಯಲ್ಲಿ ಮೆರೆದಾಡಿದ ಪಂಜಾಬ್‌ ಕಿಂಗ್ಸ್‌

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ

T20 World Cup; ಅಫ್ಗಾನಿಸ್ತಾನ ತಂಡಕ್ಕೆ ರಶೀದ್ ಖಾನ್ ನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru: 9 ಲಕ್ಷ ರೂ. ಮೌಲ್ಯದ ಎಂಡಿಎಂಎ ಸಹಿತ ಇಬ್ಬರು ಆರೋಪಿಗಳ ಬಂಧನ

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Mangaluru ಫ್ಯಾಕ್ಟರಿಯ ಎಳನೀರಿನಲ್ಲಿ ಅಪಾಯಕಾರಿ ಅಂಶವಿಲ್ಲ!

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature; 39.2 ಡಿಗ್ರಿ: ಬೆಂಗಳೂರು ಏರ್‌ಪೋರ್ಟ್‌ ದಾಖಲೆ ತಾಪ

Temperature; 39.2 ಡಿಗ್ರಿ: ಬೆಂಗಳೂರು ಏರ್‌ಪೋರ್ಟ್‌ ದಾಖಲೆ ತಾಪ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Udupi ಢಿಕ್ಕಿ: ಮೂರು ಕಾರುಗಳು ಜಖಂ; ಪ್ರಕರಣ ದಾಖಲು

Siddapura ಬಸ್‌ನಲ್ಲಿ ಹೃದಯಾಘಾತ ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Siddapura ಬಸ್‌ನಲ್ಲಿ ಹೃದಯಾಘಾತ; ಉದ್ಯಮಿ ಪ್ರಶಾಂತ ಶೆಟ್ಟಿ ನೂಜಿನಬೈಲು ನಿಧನ

Kundapura; ಹಲ್ಲೆ , ಬೆದರಿಕೆ, ಚಿನ್ನದ ಸರ ಲೂಟಿ: ದೂರು

Kundapura; ಹಲ್ಲೆ,ಬೆದರಿಕೆ, ಚಿನ್ನದ ಸರ ಲೂಟಿ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.