ಡಾಲಿ ಧನಂಜಯ್ ನಟನೆಯ ಮಾನ್ಸೂನ್ ರಾಗ ಸೆನ್ಸಾರ್ ಪಾಸ್
ಪ್ರಮೋದ್ ಮರವಂತೆ ಬರೆದಿರುವ ಈ ಹಾಡಿಗೆ ವಾಸುಕಿ ವೈಭವ್ ಅವರ ಧ್ವನಿ ಇದೆ.
Team Udayavani, Aug 27, 2022, 10:40 AM IST
ಡಾಲಿ ಧನಂಜಯ್ ನಟನೆಯ “ಮಾನ್ಸೂನ್ ರಾಗ’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಮೊದಲ ಹಂತವಾಗಿ ಚಿತ್ರ ಸೆನ್ಸಾರ್ ಪಾಸಾಗಿದ್ದು, “ಯು/ಎ’ ಪ್ರಮಾಣ ಪತ್ರ ಸಿಕ್ಕಿದೆ. ಈ ಮೂಲಕ ಚಿತ್ರ ಬಿಡುಗಡೆಯ ಸುಳಿವು ಕೂಡಾ ಸಿಕ್ಕಿದೆ.
ಎಲ್ಲವೂ ಅಂದು ಕೊಂಡಂತೆ ಆಗಿದ್ದರೆ ಚಿತ್ರ ಆ.19ರಂದು ತೆರೆ ಕಾಣಬೇಕಿತ್ತು. ಆದರೆ, ಚಿತ್ರದ ತಾಂತ್ರಿಕ ಕೆಲಸಗಳು ಬಾಕಿ ಉಳಿದಿದ್ದರಿಂದ ಚಿತ್ರದ ಬಿಡುಗಡೆ ಕೂಡಾ ಮುಂದೆ ಹೋಯಿತು. ಈಗ ಚಿತ್ರ ಸೆನ್ಸಾರ್ ಪ್ರಕ್ರಿಯೆ ಪೂರೈಸಿದ್ದು, ಶೀಘ್ರದಲ್ಲಿ ತೆರೆ ಕಾಣಲಿದೆ.
ಇನ್ನು, ಈಗಾಗಲೇ ಚಿತ್ರದ ಎರಡು ಹಾಡುಗಳು ಬಿಡುಗಡೆಯಾಗಿ ಹಿಟ್ ಆಗಿದೆ. “ರಾಗ ಸುಧಾ’ ಹಾಗೂ ಮುದ್ದಾದ ಮೂತಿ ಎಂಬ ಹಾಡುಗಳನ್ನು ಬಿಡುಗಡೆ ಮಾಡಿದ್ದು, ಅದು ಹಿಟ್ ಲಿಸ್ಟ್ ಸೇರಿದೆ. ಇತ್ತೀಚೆಗೆ “ಮುದ್ದಾದ ಮೂತಿ’ ಎಂಬ ವಿಡಿಯೋ ಸಾಂಗ್ ಇತ್ತೀಚೆಗೆ ರಿಲೀಸ್ ಆಗಿದ್ದು, ಈ ಹಾಡನ್ನು ಅಚ್ಯುತ್ ಕುಮಾರ್ ಮೇಲೆ ಮಾಡಲಾಗಿದ್ದು, ಸಖತ್ ಕಲರ್ ಫುಲ್ ಆಗಿ ಚಿತ್ರೀಕರಿಸಲಾಗಿದೆ. ಪ್ರಮೋದ್ ಮರವಂತೆ ಬರೆದಿರುವ ಈ ಹಾಡಿಗೆ ವಾಸುಕಿ ವೈಭವ್
ಅವರ ಧ್ವನಿ ಇದೆ.
ಈಗಾಗಲೇ ಬಿಡುಗಡೆಯಾಗಿರುವ “ರಾಗ ಸುಧಾ’ ಹಾಡಿನಲ್ಲಿ ಯಶಾ ಶಿವಕುಮಾರ್ ಈ ಹಾಡಿಗೆ ಹೆಜ್ಜೆ ಹಾಕಿದ್ದು, ದಕ್ಷಿಣ್ ಕುಮಾರ್ ನೃತ್ಯ ಸಂಯೋಜನೆ ಮಾಡಿದ್ದಾರೆ. ಇದು ಯಶಾ ಇಂಟ್ರೊಡಕ್ಷನ್ ಗಾಗಿಯೇ ಮಾಡಿದ ಹಾಡು ಎಂಬುದು ವಿಶೇಷ ವಾದರೆ, ಇದನ್ನು ಸಾಹಿತಿ ಜಯಂತ್ ಕಾಯ್ಕಿಣಿ ಓದಿದ ಕುಮಟಾ ಬಳಿಯ ಶಾಲೆಯೊಂದರಲ್ಲಿ ಚಿತ್ರೀಕರಣ ನಡೆಸಿರುವುದು ಮತ್ತೂಂದು ವಿಶೇಷ.
ಮಳೆಯ ಭೋರ್ಗರೆತದ ನಡುವೆ ಕುಣಿವ ಯಶಾ, ರೆಟ್ರೋ ಸ್ಟೈಲ್ನಲ್ಲಿ ಕಂಗೊಳಿಸಿದ್ದಾರೆ.ಪುಷ್ಪಕ ವಿಮಾನ, ಇನ್ಸ್ಪೆ ಕ್ಟ ರ್ ವಿಕ್ರಂ, ರಂಗನಾಯಕ ಸಿನಿಮಾಗಳನ್ನು ನಿರ್ಮಿಸಿರುವ ಎ.ಆರ್.ವಿಖ್ಯಾತ್ “ಮಾನ್ಸೂನ್ ರಾಗ’ಕ್ಕೆ ವಿಖ್ಯಾತ್ ಚಿತ್ರ ಪೊ›ಡಕ್ಷನ್ಸ್ ಬ್ಯಾನರ್ ಅಡಿ ಬಂಡವಾಳ ಹೂಡಿದ್ದಾರೆ. ವಿಖ್ಯಾತ್ ಸ್ಟುಡಿಯೋಸ್ ಯೂಟ್ಯೂಬ್ ಚಾನಲ್ನಲ್ಲಿ ಹಾಡು ಬಿಡುಗಡೆಯಾಗಿ ಲಕ್ಷಾಂತರ ಹಿಟ್ಸ್ ದಾಖಲಾಗಿದೆ.ಚಿತ್ರಕ್ಕೆ ಎಸ್. ರವೀಂದ್ರನಾಥ್ ನಿರ್ದೇಶನವಿದೆ. ಚಿತ್ರಕ್ಕೆ ಎಸ್. ಕೆ ರಾವ್ ಛಾಯಾಗ್ರಹಣ, ಹರೀಶ್ ಕೊಮ್ಮೆ ಸಂಕಲನವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
MUST WATCH
ಹೊಸ ಸೇರ್ಪಡೆ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ