ದೇಹದೊಳಗೆ ಸೇರಿದ ಅಪಾಯಕಾರಿ ವಿಷ:ಜೀವನ್ಮರಣ ಹೋರಾಟದಲ್ಲಿ ಉಪ ವಲಯಾರಣ್ಯಾಧಿಕಾರಿ ಯೋಗೇಶ್ ನಾಯ್ಕ


Team Udayavani, Jul 7, 2023, 5:46 PM IST

DFO NAIK

ದಾಂಡೇಲಿ : ದೇಹದೊಳಗೆ ಅಪಾಯಕಾರಿ ವಿಷ ಸೇರಿದ ಪರಿಣಾಮವಾಗಿ ಉಪ ವಲಯಾರಣ್ಯಾಧಿಕಾರಿಯೊಬ್ಬರು ಜೀವನ್ಮರಣ ಹೋರಾಟದಲ್ಲಿರುವ ಮನಕಲುಕುವ ಘಟನೆ ವರದಿಯಾಗಿದೆ.

ದಾಂಡೇಲಿ ತಾಲ್ಲೂಕಿನ ಕುಳಗಿ ಶಾಖೆಯ ಉಪ ವಲಯಾರಣ್ಯಾಧಿಕಾರಿ ಹಾಗೂ ಮೂಲತ: ಕುಮಟಾ ತಾಲ್ಲೂಕಿನ ಬಾಡ ಗ್ರಾಮದವರಾದ ಮತ್ತು ದಾಂಡೇಲಿ ಅರಣ್ಯ ವಸತಿ ಗೃಹದ ನಿವಾಸಿಯಾಗಿರುವ ಯೋಗೇಶ್ ನಾಯ್ಕ ಎಂಬವರೇ ಇದೀಗ ಹುಬ್ಬಳ್ಳಿಯ ಸುಚಿರಾಯ್ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ವ್ಯಕ್ತಿಯಾಗಿದ್ದಾರೆ.

ವಿರ್ನೋಲಿ ಅರಣ್ಯ ವಲಯದ ಕುಳಗಿ ಶಾಖೆಯಲ್ಲಿ ಸಾಗುವನಿ ಮಡಿಯೊಳಗಿರುವ ಕಳೆಗಳನ್ನು ನಾಶಪಡಿಸಲು ಕೀಟನಾಶಕ ಸಿಂಪಡಿಸುವ ಸಂದರ್ಭದಲ್ಲಿ ತನ್ನ ಸಹೋದ್ಯೋಗಿಗಳ ಜೊತೆ ತಾನು ಸಹ ಕೀಟನಾಶಕವನ್ನು ಸಿಂಪಡಿಸಿದ್ದ್ದಾರೆಂಬ ಮಾಹಿತಿ ಹೊರ ಬೀಳುತ್ತಿದೆ. ಕೀಟನಾಶಕ ಸಿಂಪಡಿಸಿದ ನಂತರ ಯೋಗೇಶ್ ನಾಯ್ಕ ಅವರು ಕೈಯನ್ನು ಸರಿಯಾಗಿ ಸ್ವಚ್ಚಗೊಳಿಸದೇ ನೀರು ಹಾಗೂ ಆಹಾರ ಸೇವಿಸಿದ್ದರೆನ್ನಲಾಗಿದೆ. ಮರುದಿನ ಯೋಗೇಶ್ ನಾಯ್ಕ ಅವರಿಗೆ ತೀವ್ರ ಅನಾರೋಗ್ಯ ಸಮಸ್ಯೆ ಉಂಟಾಗಿದೆ. ಅನಾರೋಗ್ಯ ಉಲ್ಬಣಗೊಳ್ಳುತ್ತಿದ್ದಂತೆಯೆ ಧಾರವಾಡದ ಎಸ್.ಡಿ.ಎಂ ಆಸ್ಪತ್ರೆಗೆ ಯೋಗೇಶ್ ನಾಯ್ಕ ಅವರನ್ನು ದಾಖಲಿಸಲಾಗಿದೆ. ಅಲ್ಲಿಯು ಚೇತರಿಸಿಕೊಳ್ಳದ ನಂತರ ಕಳೆದೆರಡು ದಿನಗಳಿಂದ ಹುಬ್ಬಳ್ಳಿಯ ಸುಚಿರಾಯ್ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಅರೆಪ್ರಜ್ಞಾವಸ್ಥೆಯಲ್ಲಿರುವ ಯೋಗೇಶ್ ನಾಯ್ಕ ಅವರು ಇದೀಗ ಜೀವನ್ಮರಣ ಹೋರಾಟದಲ್ಲಿದ್ದಾರೆ.

ಅಂಬಿಕಾನಗರ ಪೊಲೀಸರು ಆಸ್ಪತ್ರೆಗೆ ಭೇಟಿ ನೀಡಿ ಯೋಗೇಶ್ ನಾಯ್ಕ ಅವರ ಹೇಳಿಕೆಯನ್ನು ಪಡೆದುಕೊಂಡಿದ್ದಾರೆ ಎಂಬ ಮಾಹಿತಿ ಸಧ್ಯಕ್ಕೆ ಲಭ್ಯವಾಗುತ್ತಿದೆ. ಇನ್ನೂ ಯೋಗೇಶ್ ನಾಯ್ಕ ಅವರ ಕುಟುಂಬಸ್ಥರು ಆಸ್ಪತ್ರೆಯಲ್ಲಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು ಆಸ್ಪತ್ರೆಗೆ ಹೋಗಿ ಬರುತ್ತಿದ್ದಾರೆ. ಅರಣ್ಯ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ತಮ್ಮಿಂದಾದ ನೆರವನ್ನು ನೀಡುತ್ತಿದ್ದಾರೆ.

ಅತ್ಯಂತ ಬಡತನದ ಕುಟುಂಬದಿಂದ ಬಂದಿದ್ದ ಯೋಗೇಶ್ ನಾಯ್ಕ ಅವರು ಇಡೀ ಇಲಾಖೆಯಲ್ಲಿ ಅಜಾತಶತ್ರು ಅಧಿಕಾರಿಯೆಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಯಾರೇ ತಪ್ಪು ಮಾಡಿದಾಗ ದಂಡಿಸುವ ಮೊದಲು ಅವರನ್ನು ಸರಿದಾರಿಗೆ ತರುವ ಕಾರ್ಯವನ್ನು ಮಾಡುತ್ತಿದ್ದ ಅವರ ಸಾಮಾಜಿಕ ಬದ್ಧತೆ ಮತ್ತು ಕಾಳಜಿ ಅನುಕರಣೀಯ. ಮಡದಿ ದಾಂಡೇಲಿ ಅರಣ್ಯ ವಲಯದಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಎರಡುವರೆ ವರ್ಷದ ಪುಟ್ಟ ಮಗ ಇದ್ದಾನೆ.

ಇದನ್ನೂ ಓದಿ: Kerala; ಅಪರೂಪದ ಮೆದುಳಿನ ಸೋಂಕಿನಿಂದ ಬಾಲಕ ಮೃತ್ಯು

ಸಣ್ಣ ಅಜಾಗರೂಕತೆಯೆ ಈ ಮಟ್ಟಕ್ಕೆ ಮುಟ್ಟಿತ್ತಲ್ಲ ಎಂಬ ನೋವು ಎಲ್ಲರನ್ನು ಕಾಡತೊಡಗಿದೆ. ಈಗ ಅದ್ಯಾಕಾಯ್ತು, ಇದು ಯಾಕಾಯ್ತು ಎನ್ನುವುದನ್ನು ಚರ್ಚೆ ಮಾಡುವ ಸಮಯವಲ್ಲ. ಬದಲಾಗಿ ಮುಂದೇನು ಎಂಬ ಬಗ್ಗೆ ಯೋಚನೆ ಮಾಡಬೇಕಾಗಿದೆ.

ಸರಳತೆ, ಪ್ರಾಮಾಣಿಕತೆ, ಪ್ರೀತಿ, ಆತ್ಮೀಯತೆ, ಸಂಸ್ಕಾರಯುತವಾದ ನಡುವಳಿಕೆಗಳ ಮೂಲಕವೆ ಎಲ್ಲರ ವಾತ್ಸಲ್ಯಕ್ಕೆ ಪಾತ್ರರಾಗಿದ್ದ ಯೋಗೇಶ್ ನಾಯ್ಕ ಅವರು ಶೀಘ್ರ ಗುಣಮುಖರಾಗಿ ಹೊರಬರಲೆಂದು ಎಲ್ಲರು ಪ್ರಾರ್ಥಿಸುತ್ತಿದ್ದಾರೆ. ಎರಡುವರೆ ವರ್ಷದ ಪುಟ್ಟ ಮಗುವಿನ ಅಪ್ಪ ಎಂಬ ಕೂಗಿಗೆ ಯೋಗೇಶ್ ನಾಯ್ಕ ಶೀಘ್ರ ಧ್ವನಿಸಲಿ, ಸ್ಪಂದಿಸಲೆನ್ನುವುದೆ ಎಲ್ಲರ ಪ್ರಾರ್ಥನೆಯಾಗಿದೆ.

ಟಾಪ್ ನ್ಯೂಸ್

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

1-24-sunday

Daily Horoscope: ವಸ್ತ್ರಾಭರಣ ಖರೀದಿಗೆ ಧನವ್ಯಯ, ಅವಿವಾಹಿತರಿಗೆ ಶೀಘ್ರ ವಿವಾಹ ಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

ಕಾರವಾರ: “ವಿಕಲಚೇತನರು ಮತಗಟ್ಟೆಗೆ ಬರಲು ಉಚಿತ ವಾಹನ ವ್ಯವಸ್ಥೆ’‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.