ಕೋವಿಡ್-19: ನಿರಾಶ್ರಿತರಿಗೆ ಪಡಿತರ ವಿತರಿಸಿದ ಡಿಸಿಎಂ ಡಾ. ಅಶ್ವತ್ಥನಾರಾಯಣ
Team Udayavani, Apr 2, 2020, 3:01 PM IST
ಬೆಂಗಳೂರು: ಕೊವಿಡ್-19 ಲಾಕ್ ಡೌನ್ ಹಿನ್ನೆಲೆಯಲ್ಲಿ ದಿನಗೂಲಿ ನೌಕರರು, ವಲಸೆ ಕಾರ್ಮಿಕರು ಹಾಗೂ ನಿರಾಶ್ರಿತರಿಗೆ ರಾಜ್ಯ ಸರ್ಕಾರದ ಕಡೆಯಿಂದ ಕಲ್ಪಿಸಿರುವ ಸೌಲಭ್ಯಗಳನ್ನು ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಗುರುವಾರ ಪರಿಶೀಲನೆ ನಡೆಸಿದ್ದಾರೆ.
ನಗರದ ಯಲಹಂಕ, ಬ್ಯಾಟರಾಯನಪುರ, ಅಮೃತಹಳ್ಳಿ ಕಾಲೋನಿ, ಥಣೀಸಂದ್ರ, ರಾಚೇನಹಳ್ಳಿ, ಚೊಕ್ಕನಹಳ್ಳಿ ಸೇರಿದಂತೆ ನಗರದ ಹಲವು ಭಾಗಗಳಿಗೆ ಭೇಟಿ ನೀಡಿದ ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ, ಸ್ಥಳೀಯರಿಂದಲೂ ಅಭಿಪ್ರಾಯ ಪಡೆದುಕೊಂಡರು. ಅಲ್ಲದೆ, ಅಗತ್ಯ ಸೌಲಭ್ಯ ಕಲ್ಪಿಸುವಂತೆ ಅಧಿಕಾರಿಗಳಿಗೂ ಸೂಚಿಸಿದರು.
ವಿವಿಧ ಪ್ರದೇಶಗಳಿಗೆ ಭೇಟಿ ನೀಡುವ ಮೊದಲು ಅಧಿಕಾರಿಗಳ ಸಭೆ ನಡೆಸಿದ ಅವರು,ಕೋವಿಡ್-19 ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳು ಹಾಗೂ ನಿರಾಶ್ರಿತರಿಗೆ ಊಟ ವಸತಿ ಮತ್ತು ಇನ್ನಿತರ ವ್ಯವಸ್ಥೆ ಬಗ್ಗೆ ಚರ್ಚಿಸಿದರು.
“ದಿನಗೂಲಿ ನೌಕರರು, ಕಟ್ಟಡ ಕಾರ್ಮಿಕರು, ಕೂಲಿ ಕಾರ್ಮಿಕರು ಹಾಗೂ ನಿರಾಶ್ರಿತರಿಗೆ ಕಾರ್ಮಿಕ ಇಲಾಖೆ, ಬಿಬಿಎಂಪಿ ಹಾಗೂ ರಾಜ್ಯ ಸರ್ಕಾರದ ವತಿಯಿಂದ ಊಟದ ವ್ಯವಸ್ಥೆ ಮಾಡಲಾಗಿದೆ. ಇರುವ ಸ್ಥಳದಲ್ಲೇ ಊಟ/ಪಡಿತರ ಕೊಡಲಾಗುತ್ತಿದೆ. ಸಿದ್ಧ ಆಹಾರ ಹಾಗೂ ಪಡಿತರವನ್ನು ಒದಗಿಸಲಾಗುತ್ತಿದೆ. ಎಲ್ಲ ಪ್ರದೇಶಗಳಲ್ಲಿ ಸೋಂಕು ನಿವಾರಕ ಸ್ಪ್ರೇ ಮಾಡಲಾಗುತ್ತಿದೆ. ಮುಖ್ಯವಾಗಿ ಸೋಂಕಿನ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ,”ಎಂದು ಸಚಿವರು ತಿಳಿಸಿದರು.
“ಯಲಹಂಕ, ಬ್ಯಾಟರಾಯನಪುರ ವ್ಯಾಪ್ತಿಯ 42 ಕಡೆ 10,000 ಜನರಿಗೆ ಆಹಾರ, ಪಡಿತರ, ಆರೋಗ್ಯ ಸೇವೆಯ ವ್ಯವಸ್ಥೆ ಮಾಡಲಾಗಿದೆ. ನಿರಾಶ್ರಿತರು ಇದ್ದಲ್ಲಿಗೇ ತೆರಳಿ ಆಹಾರ ನೀಡಲಾಗುತ್ತಿದೆ. ಹಿರಿಯ ನಾಗರಿಕರಿಗೂ ಆಹಾರದ ಸಮಸ್ಯೆ ಇದ್ದು, ಅಂಥವರನ್ನು ಗುರುತಿಸಿ ಅವರೊಂದಿಗೆ ಮನೆಗಳಿಗೆ ಊಟ ತಲುಪಿಸುವ ಕೆಲಸ ಮಾಡಲಾಗುತ್ತಿದೆ,” ಎಂದರು.
ಸಹಾಯವಾಣಿ
“ರಾಜ್ಯಮಟ್ಟದ ಸಹಾಯವಾಣಿ 104, ಕಾರ್ಮಿಕ ಇಲಾಖೆಯ ಸಹಾಯವಾಣಿ, ಬಿಬಿಎಂಪಿಯ ಸಹಾಯವಾಣಿಗೂ ಕರೆ ಮಾಡಿ ಜನ ನೆರವು ಪಡೆಯಬಹುದು. ಊಟ ವಸತಿ ಅಷ್ಟೇ ಅಲ್ಲ ಇರುವ ಸ್ಥಳದಿಂದಲೇ ದೂರವಾಣಿ ಮೂಲಕ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ‘ಟೆಲಿ ಕನ್ಸಲ್ಟೇಷನ್’ ಸಹ ಮಾಡಲಾಗುತ್ತಿದೆ. ಫೋನ್ ವ್ಯವಸ್ಥೆ ಬಳಕೆ ತಿಳಿಯದವರ ಬಳಿಗೆ ಬಿಬಿಎಂಪಿ ಅಧಿಕಾರಿಗಳೇ ತೆರಳಿ, ಅಗತ್ಯ ಸೌಲಭ್ಯ ಕಲ್ಪಿಸುತ್ತಿದ್ದಾರೆ,”ಎಂದು ವಿವರಿಸಿದರು.
ಅಟ್ಟೂರಿನಲ್ಲಿ ತಾತ್ಕಾಲಿಕ ಮಾರುಕಟ್ಟೆ
ತೋಟಗಾರಿಕೆ ಇಲಾಖೆ ವತಿಯಿಂದ ಯಲಹಂಕದ ಅಟ್ಟೂರಿನ ಪೂರ್ವಂಕರ ಅಪಾರ್ಟ್ಮೆಂಟ್ ಬಳಿ ನಿರ್ಮಿಸಿರುವ ಹಣ್ಣು- ತರಕಾರಿಯ ತಾತ್ಕಾಲಿಕ ಮಾರುಕಟ್ಟೆ ವ್ಯವಸ್ಥೆಯನ್ನು ಉಪಮುಖ್ಯಮಂತ್ರಿ ಪರಿಶೀಲಿಸಿದರು. ಯಲಹಂಕ ಶಾಸಕರೂ ಆಗಿರುವ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಸ್. ಆರ್. ವಿಶ್ವನಾಥ್ ಜತೆ ಇದ್ದರು.
ಆಹಾರ/ಪಡಿತರ ಪೂರೈಕೆ ಆಗುತ್ತಿರುವುದನ್ನು ಖಚಿತಪಡಿಸಿಕೊಂಡರು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡ ಮುನೇಂದ್ರ ಅವರು ಸ್ವಂತ ಹಣದಿಂದ ಒದಗಿಸಿರುವ 10,000 ಪಡಿತರ ಕಿಟ್ಗಳನ್ನು ವಿತರಿಸುವ ಕಾರ್ಯಕ್ರಮ ಅಶ್ವತ್ಥನಾರಾಯಣ ಚಾಲನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
MUST WATCH
ಹೊಸ ಸೇರ್ಪಡೆ
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…