ಪರೀಕ್ಷೆ ವಿಳಂಬವಾದರೂ ಆನ್‌ಲೈನ್‌ ಬೋಧನೆ ಮುಂದುವರಿಕೆ : ಡಿಸಿಎಂ ಅಶ್ವತ್ಥನಾರಾಯಣ


Team Udayavani, May 21, 2021, 8:39 PM IST

ಪರೀಕ್ಷೆ ವಿಳಂಬವಾದರೂ ಆನ್‌ಲೈನ್‌ ಬೋಧನೆ ಮುಂದುವರಿಕೆ : ಡಿಸಿಎಂ ಅಶ್ವತ್ಥನಾರಾಯಣ

ಬೆಂಗಳೂರು: ವಿಶ್ವವಿದ್ಯಾಲಯಗಳು ಹಾಗೂ ಉನ್ನತ ಶಿಕ್ಷಣ ಕಾಲೇಜುಗಳು ಪದವಿ ಕೋರ್ಸ್‌ಗಳ ಸಮ ಸ್ಥಾನಿಕ ಸೆಮಿಸ್ಟರ್‌ ಕೋರ್ಸ್‌ಗಳಿಗೆ ಆನ್‌ಲೈನ್‌ ತರಗತಿಗಳನ್ನು ಮುಂದುವರಿಸಬೇಕು. ಈ ಕೋರ್ಸ್‌ಗಳ ಭೌತಿಕ ತರಗತಿಗಳನ್ನು ಆರಂಭಿಸುವ ಕುರಿತು ಕೋವಿಡ್‌ ಪರಿಸ್ಥಿತಿ ನೋಡಿಕೊಂಡು ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್‌.ಅಶ್ವತ್ಥ ನಾರಾಯಣ ಶುಕ್ರವಾರ ತಿಳಿಸಿದ್ದಾರೆ.

ಬೆಸ ಸ್ಥಾನಿಕ ಸೆಮಿಸ್ಟರ್‌ಗಳಿಗೆ ಪರೀಕ್ಷೆಗಳನ್ನು ಇನ್ನೂ ಪೂರೈಸದ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳು ಕೂಡ ಸಮ ಸ್ಥಾನಿಕ ಸೆಮಿಸ್ಟರ್‌ಗಳಿಗೆ (2ನೇ, 4ನೇ, 6ನೇ ಮತ್ತು 8ನೇ ಸೆಮಿಸ್ಟರ್‌ಗಳು) ಆನ್‌ಲೈನ್‌ ತರಗತಿಗಳನ್ನು ಶುರು ಮಾಡಬೇಕು. ಬಹುತೇಕ ಕೋರ್ಸ್‌ಗಳಿಗೆ ಕ್ಯಾರಿ ಓವರ್‌ ಪದ್ಧತಿ ಅನ್ವಯವಾಗುವುದರಿಂದ ಪದವಿ ಕೋರ್ಸ್‌ಗಳ ಬೆಸ ಸ್ಥಾನಿಕ ಸೆಮಿಸ್ಟರ್‌ಗಳಿಗೆ ಕೋವಿಡ್‌ ಪರಿಸ್ಥಿತಿ ತಹಬಂದಿಗೆ ಬಂದಮೇಲೆ ನಡೆಸಲಾಗುತ್ತದೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಕೆಲವು ಎಂಜಿನಿಯರಿಂಗ್‌ ಮತ್ತು ವೃತ್ತಿಪರ ಕೋರ್ಸ್‌ಗಳಲ್ಲಿ ಮಾತ್ರ ಮುಂದಿನ ಸೆಮಿಸ್ಟರ್‌ಗಳಿಗೆ ಹೋಗಲು ಕ್ಯಾರಿ ಓವರ್‌ ಪದ್ಧತಿ ಅನ್ವಯವಾಗುವುದಿಲ್ಲ. ಅವುಗಳ ಬಗ್ಗೆ ಕುಲಪತಿಗಳು ಹಾಗೂ ಪ್ರಾಂಶುಪಾಲರುಗಳು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಜೊತೆ ಸಮಾಲೋಚನೆ ನಡೆಸಿ ನಿರ್ಧಾರಕ್ಕೆ ಬರಬೇಕು ಎಂದು ವಿವರಿಸಿದ್ದಾರೆ.

ಇದನ್ನೂ ಓದಿ :ರಘುನಾಥ್‌ ಮೋಹಪಾತ್ರಾ ತೀರಿಕೊಂಡ ಕೆಲವೇ ದಿನಗಳಲ್ಲಿ ಇಬ್ಬರ ಮಕ್ಕಳ ಸಾವು

ಸ್ನಾತಕೋತ್ತರ ಕೋರ್ಸ್‌ಗಳ ಬಗ್ಗೆ ಪ್ರಸ್ತಾಪಿಸಿರುವ ಅವರು, “ಕೋವಿಡ್‌ ಕಾರಣದಿಂದಾಗಿ ಕೆಲವು ವಿಶ್ವವಿದ್ಯಾಲಯಗಳಲ್ಲಿ ಮೊದಲ ಸೆಮಿಸ್ಟರ್‌ಗೆ ಪ್ರವೇಶಾತಿ ಪ್ರಕ್ರಿಯೆ ವಿಳಂಬವಾಗಿದೆ. ಆದರೆ ಹೆಚ್ಚಿನ ವಿಶ್ವವಿದ್ಯಾಲಯಗಳಲ್ಲಿ ಈಗಾಗಲೇ ಮೂರನೇ ಸೆಮಿಸ್ಟರ್‌ನ ತರಗತಿಗಳು ಮುಗಿದಿದ್ದು, ಕೆಲವೆಡೆ ಪರೀಕ್ಷೆಗಳು ಕೂಡ ಆರಂಭವಾಗಿದ್ದವು. ಹೀಗಾಗಿ, ಸ್ನಾತಕೋತ್ತರ ಕೋರ್ಸ್‌ಗಳಿಗೆ ಸಂಬಂಧಿಸಿದಂತೆ, ಮೂರನೇ ಸೆಮಿಸ್ಟರ್‌ನ ತರಗತಿಗಳು ಈಗಾಗಲೇ ಮುಗಿದಿದ್ದು, ಪರೀಕ್ಷೆಗಳನ್ನು ನಡೆಸುವುದು ಮಾತ್ರ ಬಾಕಿ ಉಳಿದಿದ್ದರೆ, ಅಲ್ಲಿ ಕೂಡ ಸಮ ಸ್ಥಾನಿಕ ಸೆಮಿಸ್ಟರ್‌ಗಳಿಗೆ ಆನ್‌ಲೈನ್‌ ತರಗತಿಗಳನ್ನು ಆರಂಭಿಸಬೇಕು. ಬೆಸ ಸ್ಥಾನಿಕ ಸೆಮಿಸ್ಟರ್‌ಗಳಿಗೆ ಬಾಕಿ ಉಳಿಯುವ ಪರೀಕ್ಷೆಗಳನ್ನು ಕೋವಿಡ್‌ ನಿಯಂತ್ರಣಕ್ಕೆ ಬಂದಮೇಲೆ ನಡೆಸಲಾಗುವುದು” ಎಂದಿದ್ದಾರೆ.

ಬೆಸ ಸ್ಥಾನಿಕ ಸೆಮಿಸ್ಟರ್‌ಗಳಿಗೆ (1ನೇ, 3ನೇ, 5ನೇ, 7ನೇ ಸೆಮಿಸ್ಟರ್ ಗಳು) ಇನ್ನೂ ತರಗತಿಗಳನ್ನು ಮುಗಿಸದ ವಿಶ್ವವಿದ್ಯಾಲಯಗಳು ಆನ್‌ಲೈನ್‌ ತರಗತಿಗಳನ್ನು ಮುಂದುವರಿಸಬೇಕು. ಒಂದೊಮ್ಮೆ ಈ ತರಗತಿಗಳು ಮುಗಿದ ಮೇಲೂ ಕೋವಿಡ್‌ನಿಂದಾಗಿ ಪರೀಕ್ಷೆಗಳನ್ನು ನಡೆಸಲು ಸಾಧ್ಯವಾಗದಿದ್ದರೆ, ತಕ್ಷಣವೇ ಮುಂದಿನ ಸಮ ಸ್ಥಾನಿಕ ಸೆಮಿಸ್ಟರ್‌ಗಳಿಗೆ ಆನ್‌ಲೈನ್‌ ತರಗತಿಗಳನ್ನು ಶುರುಮಾಡಬೇಕು. ಇದರಿಂದಾಗಿ ಬಾಕಿ ಉಳಿಯುವ ಬೆಸ ಸ್ಥಾನಿಕ ಸೆಮಿಸ್ಟರ್‌ಗಳ ಪರೀಕ್ಷೆಗಳನ್ನು ಕೋವಿಡ್‌ ನಿಯಂತ್ರಣಕ್ಕೆ ಬಂದಮೇಲೆ ನಡೆಸಲಾಗುತ್ತದೆ ಎಂದು ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.

ಪರಿಸ್ಥಿತಿಯ ಬೆಳವಣಿಗೆಗಳಿಗೆ ಅನುಗುಣವಾಗಿ ಕುಲಪತಿಗಳು ಮತ್ತು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್‌ನೊಂದಿಗೆ ಸಮಾಲೋಚನೆ ನಡೆಸಲಾಗುವುದು. ಅಲ್ಲಿ ಹೊರಹೊಮ್ಮುವ ನಿರ್ಧಾರಗಳನ್ನು ಆಧರಿಸಿ ಕಾಲೇಜುಗಳು ಮತ್ತು ವಿಶ್ವವಿದ್ಯಾಲಯಗಳಲ್ಲಿ ಪಾಲಿಸಬೇಕಾದ ಮಾರ್ಗದರ್ಶಿ ಸೂತ್ರಗಳನ್ನು ಹಾಗೂ ವೇಳಾಪಟ್ಟಿಗಳನ್ನು ರೂಪಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.