ಭೂಮಿಯ ಹತ್ತಿರಕ್ಕೆ ಬಂದ ಗುರು-ಶನಿ ಗ್ರಹಗಳನ್ನು ವೀಕ್ಷಿಸಿದ ಡಿಸಿಎಂ


Team Udayavani, Dec 21, 2020, 9:03 PM IST

ಭೂಮಿಯ ಹತ್ತಿರಕ್ಕೆ ಬಂದ ಗುರು-ಶನಿ ಗ್ರಹಗಳನ್ನು ವೀಕ್ಷಿಸಿದ ಡಿಸಿಎಂ

ಬೆಂಗಳೂರು: ಖಗೋಳ ವಿಜ್ಞಾನದ ಅತ್ಯಂತ ಅಪರೂಪದ ವಿದ್ಯಮಾನವಾದ ಗುರು ಮತ್ತು ಶನಿ ಗ್ರಹಗಳೆರಡು 400 ವರ್ಷಗಳ ನಂತರ ಇದೇ ಮೊದಲ ಬಾರಿ ಭೂಮಿಗೆ ಅತ್ಯಂತ ಸಮೀಪಕ್ಕೆ ಬಂದ ದೃಶ್ಯವನ್ನು ವಿಜ್ಞಾನ-ತಂತ್ರಜ್ಞಾನ ಖಾತೆ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ವೀಕ್ಷಿಸಿ ಕಣ್ತುಂಬಿಕೊಂಡರು.

ಸೋಮವಾರ ಸಂಜೆ 6.45 ಗಂಟೆ ಹೊತ್ತಿಗೆ ನಗರದ ಜವಾಹರಲಾಲ್‌ ನೆಹರು ತಾರಾಲಯಕ್ಕೆ ಭೇಟಿ ನೀಡಿದ ಅವರು, ಅತ್ಯಾಧುನಿಕ ಟೆಲಿಸ್ಕೋಪ್ ಮೂಲಕ ಗುರು-ಶನಿ ಗ್ರಹಗಳ ಮಹಾ ಸಮಾಗಮದ ದೃಶ್ಯವನ್ನು ವೀಕ್ಷಿಸಿ ಚಕಿತರಾದರು.

ಈ ಸಂದರ್ಭದಲ್ಲಿ ತಾರಾಲಯದ ಬಳಿ ನೆರೆದಿದ್ದ ವಿಜ್ಞಾನಾಸಕ್ತರು ಹಾಗೂ ವಿದ್ಯಾರ್ಥಿಗಳ ಜತೆಯಲ್ಲಿ ಎರಡೂ ಗ್ರಹಗಳನ್ನು ವೀಕ್ಷಿಸಿ ಸಂಭ್ರಮಿಸಿದ ಅವರು, ಇಂಥ ಅಪರೂಪದ ದೃಶ್ಯವನ್ನು ನೋಡಲು ಸಾಧ್ಯವಾಗಿದ್ದಕ್ಕೆ ಧನ್ಯತೆಯ ಭಾವ ವ್ಯಕ್ತಪಡಿಸಿದರು. ಬಳಿಕ ತಾರಾಲಯದ ವಿಜ್ಞಾನಿಗಳ ಜತೆ ಮಾತನಾಡಿದರಲ್ಲದೆ. ಅಲ್ಲಿನ ಅಕಾಶ ಮಂದಿರ, ಏಮ್ಸ್ ರೂಮ್ ಮತ್ತು ಪ್ರತಿಗುರುತ್ವ ಕೊಠಡಿಗೆ ತೆರಳಿ ವೀಕ್ಷಿಸಿ ಮಾಹಿತಿ ಪಡೆದುಕೊಂಡರು.

ಖಗೋಳ ವಿಜ್ಞಾನಿಗಳು ಇದನ್ನು ʼಮಹಾ ಸಂಯೋಗʼ ಎಂದು ಕರೆದಿದ್ದು, ವಿಜ್ಞಾನದ ಸಹಾಯದಿಂದ ಇದೆಲ್ಲವನ್ನು ನಾವು ನೋಡಲು ಸಾಧ್ಯವಾಗಿದೆ. ಇಂತಹ ವಿದ್ಯಮಾನ ಮತ್ತೆ ಘಟಿಸುವುದು 20 ವರ್ಷಗಳ ನಂತರ ಎಂದು ನಾಸಾ ಹೇಳಿದೆ. ಈ ಎಲ್ಲ ಕಾರಣಗಳನ್ನು ಇಟ್ಟುಕೊಂಡು ನಮ್ಮ ಸೌರವ್ಯೂಹದ ಎರಡು ಬೃಹತ್‌ ಗ್ರಹಗಳನ್ನು ಭೂಮಿಗೆ ಹತ್ತಿರ ಬಂದಾಗ ವೀಕ್ಷಿಸಲು ಸಾಧ್ಯವಾಗಿದ್ದು ಜೀವನದಲ್ಲಿ ಮರೆಯಲಾಗದ ಆವಿಸ್ಮರಣೀಯ ಘಟನೆ ಎಂದರು ಡಿಸಿಎಂ.

ಜಗತ್ತಿನಾದ್ಯಂತ ಈ ಖಗೋಳ ಕೌತುಕವನ್ನು ಎಲ್ಲರೂ ನೋಡಿದ್ದಾರೆ. ನಮ್ಮ ಬೆಂಗಳೂರಿನಲ್ಲೂ ಲಕ್ಷಾಂತರ ಜನರು ವೀಕ್ಷಿಸಿದ್ದಾರೆ. ಮುಂದಿನ ದಿನಗಳಲ್ಲಿ ಖಗೋಳದ ಇನ್ನಷ್ಟು ಅಧ್ಯಯನಕ್ಕೆ ಗುರು-ಶನಿ ಗ್ರಹಗಳ ಈ ಮಹಾ ಸಂಗಮ ನೆರವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.

ನೆಹರು ತಾರಾಲಯದ ನಿರ್ದೇಶಕ ಪ್ರಮೋದ ಗಲಗಲಿ, ಆಡಳಿಧಿಕಾರಿ ರಾಜನ್ ಸೇರಿದಂತೆ ಇತರ ವಿಜ್ಞಾನಿಗಳು ಹಾಜರಿದ್ದರು.

ಟಾಪ್ ನ್ಯೂಸ್

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು

ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

ನಾಡಿದ್ದಿನಿಂದ 5 ದಿನ ರಾಜ್ಯಕ್ಕೆ ಬಿಜೆಪಿ ದಿಗ್ಗಜ ನಾಯಕರ ದಂಡು

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

Temperature; ರಾಜ್ಯದಲ್ಲಿ ಮತ್ತೆ ದಿಢೀರ್‌ ಏರಿದ ತಾಪಮಾನ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

ರಾಜ್ಯದಲ್ಲಿ ಇಂದು, ನಾಳೆ ಸಿಇಟಿ; ದಾಖಲೆಯ ಮೂರೂವರೆ ಲಕ್ಷ ವಿದ್ಯಾರ್ಥಿಗಳ ನೋಂದಣಿ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

“ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ’ ಅಭಿಯಾನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.