ಡೀಮ್ಡ್ ಫಾರೆಸ್ಟ್‌ ಅವೈಜ್ಞಾನಿಕ : ಆರ್‌. ಅಶೋಕ್‌

6.64 ಲಕ್ಷ ಹೆಕ್ಟೇರ್‌ ಭೂಮಿ ಮರಳಿ ಪಡೆಯಲು ಕ್ರಮ

Team Udayavani, Dec 22, 2021, 11:15 PM IST

ಡೀಮ್ಡ್ ಫಾರೆಸ್ಟ್‌ ಅವೈಜ್ಞಾನಿಕ : ಆರ್‌. ಅಶೋಕ್‌

ಬೆಳಗಾವಿ: ರಾಜ್ಯದಲ್ಲಿ 10.11 ಲಕ್ಷ ಹೆಕ್ಟೇರ್‌ ಡೀಮ್ಡ್ ಫಾರೆಸ್ಟ್‌ ಜಮೀನು ಪೈಕಿ 6.64 ಲಕ್ಷ ಹೆಕ್ಟೇರ್‌ ಅನ್ನು ಕಂದಾಯ ಇಲಾಖೆಗೆ ಪಡೆದುಕೊಳ್ಳಲು ಕ್ರಮ ಕೈಗೊಳ್ಳಲಾಗಿದ್ದು, ಅರಣ್ಯ ಇಲಾಖೆಯಿಂದಲೂ ಒಪ್ಪಿಗೆ ದೊರೆತಿದೆ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ಹೇಳಿದರು.

ಕಾಂಗ್ರೆಸ್‌ ಸದಸ್ಯ ಕೆ.ಪ್ರತಾಪಚಂದ್ರ ಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅರಣ್ಯ ಭೂಮಿ ವಿಚಾರದಲ್ಲಿ ಸುಪ್ರೀಂಕೋರ್ಟ್‌ ಹಾಗೂ ಹಸಿರು ಪೀಠದ ನಿಯಮಗಳು ಕಠಿನವಾಗಿವೆ. ಈ ಹಿಂದೆ ಜಿಲ್ಲಾಧಿಕಾರಿಗಳು ಅನೇಕ ಕಡೆ ಸರಕಾರಿ ಭೂಮಿಯನ್ನು ಅರಣ್ಯ ಭೂಮಿ ಎಂದು ಅರಣ್ಯ ಇಲಾಖೆ ಕೇಳದಿದ್ದರೂ, ಬರೆದುಕೊಟ್ಟಿದ್ದರಿಂದ ಡೀಮ್ಡ್ ಫಾರೆಸ್ಟ್‌ ಎಂದಾಯಿತು. ಡೀಮ್ಡ್ ಫಾರೆಸ್ಟ್‌ ಜಮೀನು ಮರಳಿ ಪಡೆಯುವ ನಿಟ್ಟಿನಲ್ಲಿ 6-7 ತಿಂಗಳುಗಳಿಂದ ಅರಣ್ಯ ಇಲಾಖೆ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಹಲವು ಸಭೆ ನಡೆಸಿದ್ದೇನೆ. ಕೆಲವು ಪ್ರಕರಣಗಳು ಸುಪ್ರೀಂಕೋರ್ಟ್‌ ಇದ್ದು, ಅಫಿದವಿಟ್‌ ಸಲ್ಲಿಸಲು ಕಾನೂನು ಇಲಾಖೆಯೊಂದಿಗೂ ಚರ್ಚಿಸಲಾಗಿದೆ ಎಂದು ವಿವರಿಸಿದರು.
ಈಗಾಗಲೇ ಡೀಮ್ಡ್ ಫಾರೆಸ್ಟ್‌ ಪ್ರದೇಶದಲ್ಲಿ ಉಳುಮೆ ಮಾಡುತ್ತಿದ್ದರೆ ಅಥವಾ ಮನೆ ಕಟ್ಟಿದ್ದರೆ ಅಂತಹವರಿಗೆ ಅರಣ್ಯ ಇಲಾಖೆಯಿಂದ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ಹೇಳಿದರು.

ಈ ವೇಳೆ ಮಧ್ಯಪ್ರವೇಶಿಸಿದ ಸಚಿವ ಸುನಿಲ್‌ಕುಮಾರ್‌ ಅವರು, ಇದು 1993-94ರಲ್ಲಿನ ಸಮಸ್ಯೆ. ಇದರ ಪರಿಹಾರಕ್ಕೆ ಸರಕಾರ ಬದ್ಧವಾಗಿದೆ ಎಂದರು.

ಧರಣಿಗೆ ಮುಂದಾದ ಪ್ರತಾಪಚಂದ್ರ ಶೆಟ್ಟಿ
ಉಡುಪಿ ಜಿಲ್ಲೆಯ ಕುಂದಾಪುರ, ಉಡುಪಿ, ಕಾರ್ಕಳ, ಬೈಂದೂರು, ಬ್ರಹ್ಮಾವರ, ಕಾಪು, ಹೆಬ್ರಿಗಳಲ್ಲಿನ ಡೀಮ್ಡ್ ಫಾರೆಸ್ಟ್‌ ಸಮಸ್ಯೆ ಹಲವಾರು ವರ್ಷಗಳಿಂದ ಇದೆ. 94(ಸಿ)ಕಲಂ ಅಡಿ ಮಂಜೂರಾದ ಮೇಲೆ ಡೀಮ್ಡ್ ಫಾರೆಸ್ಟ್‌ ನಿಯಮ ಅನ್ವಯಿಸಿ ತೊಂದರೆ ನೀಡುತ್ತಿದ್ದಾರೆ. ನಮ್ಮ ಸಮಸ್ಯೆಗೆ ಪರಿಹಾರ ದೊರೆಯಲೇ ಬೇಕು, ಸರಕಾರದಿಂದ ಸ್ಪಷ್ಟ ಉತ್ತರ ಬಾರದಿದ್ದರೆ ಸದನದಲ್ಲೇ ಮಲಗಲು ಶಾಲು ಸಹಿತ ಬಂದಿದ್ದೇನೆ ಎಂದರಲ್ಲದೆ, ಸಚಿವರ ಉತ್ತರದಿಂದ ಸಮಾಧಾನಗೊಳ್ಳದೆ ಬಾವಿಗಳಿದು ಧರಣಿಗೆ ಮುಂದಾದರು. ಈ ಸಂದರ್ಭದಲ್ಲಿ ಪ್ರತಾಪಚಂದ್ರ ಶೆಟ್ಟಿ ಹಾಗೂ ಸಚಿವ ಸುನಿಲ್‌ಕುಮಾರ್‌ ನಡುವೆ ಮಾತಿನ ಚಕಮಕಿ ನಡೆಯಿತು.

ಅನಂತರ ಸಚಿವ ಅಶೋಕ್‌ ಅವರು, ನಿಮ್ಮ ಭಾವನೆಗಳಿಗೆ ಪೂರಕವಾಗಿ ಕ್ರಮ ಕೈಗೊಳ್ಳಲು ಸರಕಾರ ಸಿದ್ಧವಿದೆ. ನಾನು ಭರವಸೆ ನೀಡುವೆ ಎಂದರು. ಆಗ ಮಧ್ಯಪ್ರವೇಶಿಸಿದ ಸಭಾಪತಿಯವರು, ಸಚಿವರು ಸ್ಪಷ್ಟ ಭರವಸೆ ನೀಡಿದ್ದು, ಧರಣಿಯಿಂದ ಹಿಂದೆ ಸರಿಯಿರಿ ಎಂದು ಸಲಹೆ ನೀಡಿದರು. ಬಳಿಕ ಪ್ರತಾಪಚಂದ್ರ ಶೆಟ್ಟಿ ಅವರು ತಮ್ಮ ಆಸನಕ್ಕೆ ಮರಳಿದರು.

ಇದನ್ನೂ ಓದಿ:ಕುಂದಾಪುರ: ಕ್ರಿಸ್ಮಸ್‌ ಪ್ರಾರ್ಥನೆಗೆ ಶರತ್ತುಬದ್ಧ ಅನುಮತಿ

ಸರಕಾರಿ ಜಮೀನು ಕಬಳಿಕೆ ವಿರುದ್ಧ ಕ್ರಮ
ನಕಲಿ ದಾಖಲೆ ಸೃಷ್ಟಿಸಿ ಸರಕಾರಿ ಜಮೀನುಗಳನ್ನು ಕಬಳಿಸಿದವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ. ಒತ್ತುವರಿ ತೆರವು ಮಾಡುತ್ತೇವೆ. ಈ ನಿಟ್ಟಿನಲ್ಲಿ ಈಗಾಗಲೇ ಸದನ ಸಮಿತಿ ಹಾಗೂ ವಿಶೇಷ ನ್ಯಾಯಾಲಯ ರಚಿಸಲಾಗಿದೆ ಎಂದು ಕಂದಾಯ ಸಚಿವ ಆರ್‌. ಅಶೋಕ್‌ ಹೇಳಿದರು.

ಕಾಂಗ್ರೆಸ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌ ಪ್ರಶ್ನೆಗೆ ಉತ್ತರಿಸಿದ ಅವರು, ಸರಕಾರದ ಅಸಲಿ ದಾಖಲೆಗಳಿಗಿಂತಲೂ ನೀಟಾಗಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಸರಕಾರಿ ಭೂಮಿ ಕಬಳಿಸಲಾಗುತ್ತಿದೆ. 38,885 ಎಕರೆ ಭೂಮಿಯಲ್ಲಿ 12,179 ಎಕರೆ ವಾಪಸ್‌ ಪಡೆಯಲಾಗಿದ್ದು, 2,139 ಎಕರೆ ವಿಷಯ ಕೋರ್ಟ್‌ನಲ್ಲಿದೆ. 7,128 ಎಕರೆ ಭೂಮಿಯನ್ನು ಸಾರ್ವಜನಿಕ ಬಳಕೆ ಉದ್ದೇಶಕ್ಕೆ ನೀಡಲಾಗಿದೆ. ಸುಮಾರು 530 ಎಕರೆಯನ್ನು ಸ್ಲಂ ಬೋರ್ಡ್‌ಗೆ ನೀಡಲಾಗಿದೆ ಎಂದರು.
ರಾಜ್ಯದಲ್ಲಿ ಉಳಿದಿರುವ ಸುಮಾರು 16,995 ಎಕರೆ ಅತಿಕ್ರಮ ಭೂಮಿ ತೆರವಿಗೆ ಪ್ರತಿ ಶನಿವಾರ ಕಾರ್ಯಾಚರಣೆ ನಡೆಸುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ವಾರಾಹಿ ನೀರು, ಕಾವ್ರಾಡಿ ತಡೆಗೋಡೆ ಕುರಿತು ಪರಿಷತ್ತಿನಲ್ಲಿ ಪ್ರಶ್ನೆ
ಕುಂದಾಪುರ: ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನ ಮಂಡಲಗಳ ಅಧಿವೇಶನದಲ್ಲಿ ಮಾಜಿ ಸಭಾಪತಿ, ಸದಸ್ಯ ಕೆ. ಪ್ರತಾಪಚಂದ್ರ ಶೆಟ್ಟಿ ಅವರು “ಉದಯವಾಣಿ’ಯಲ್ಲಿ ಪ್ರಕಟವಾದ ಎರಡು ವರದಿಗಳನ್ನು ಪ್ರಶ್ನಿಸಿ ಉತ್ತರ ಪಡೆದರು.

ವಾರಾಹಿ ಎಡದಂಡೆ ಕಾಲುವೆ ಸಮಸ್ಯೆ ಬಗ್ಗೆ ಇವರು ಎತ್ತಿದ ಪ್ರಶ್ನೆಗೆ ಉತ್ತರಿಸಿದ ಸಭಾನಾಯಕ ಕೋಟ ಶ್ರೀನಿವಾಸ ಪೂಜಾರಿ ಅವರು, ವಾರಾಹಿ ನೀರು ಹರಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಸೇತುವೆಯ ಮೇಲ್ಭಾಗದ ಕಾವ್ರಾಡಿ ಗ್ರಾಮದಲ್ಲಿ ವಾರಾಹಿ ನದಿಯ ಬಲದಂಡೆಯು ತಗ್ಗಾಗಿದೆ. ಮಳೆಗಾಲದಲ್ಲಿ ನದಿಯು ಉಕ್ಕಿ ಹರಿದು ನದಿದಂಡೆ ಕುಸಿತಕ್ಕೊಳಗಾಗಿ ನದಿಯ ನೀರು ಜನವಸತಿ ಪ್ರದೇಶ ಹಾಗೂ ಕೃಷಿ ಭೂಮಿಗಳಿಗೆ ನುಗ್ಗಿ ಹಾನಿಯಾಗುತ್ತಿದೆ ಎಂಬ ಬಗೆಗಿನ ಪ್ರಶ್ನೆಗೆ, ಈ ಬಗ್ಗೆ ಜಲಸಂಪನ್ಮೂಲ ಸಚಿವರ ಜತೆ ಚರ್ಚಿಸಿ ಉತ್ತರಿಸುವುದಾಗಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.

“ಸುದಿನ’ ವರದಿ
ವಾರಾಹಿ ಹಾಗೂ ಕಾವ್ರಾಡಿ ಸಮಸ್ಯೆ ಬಗ್ಗೆ ಡಿ.17 ಹಾಗೂ 18ರಂದು ಉದಯವಾಣಿಯಲ್ಲಿ ವರದಿ ಪ್ರಕಟವಾಗಿದ್ದವು.

 

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.